ಬ್ರೇಕಿಂಗ್ ನ್ಯೂಸ್
27-02-25 07:09 pm Mangalore Correspondent ಕರಾವಳಿ
ಉಳ್ಳಾಲ, ಫೆ.27 : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತನ್ನ ಅಧಿಕಾರವಧಿಯಲ್ಲಿ ನೀಡಿದ್ದ ಭಾಗ್ಯಲಕ್ಷ್ಮಿ, ಉಚಿತ ಬೈಸಿಕಲ್ ಮೊದಲಾದ ಜನಪರ ಯೋಜನೆಗಳನ್ನ ಜನರು ಇಂದಿಗೂ ಮರೆತಿಲ್ಲ. ಬಿಎಸ್ ವೈ ಮಾರ್ಗದರ್ಶನದಲ್ಲೇ ಅವರ ಸುಪುತ್ರ ಬಿ.ವೈ.ವಿಜಯೇಂದ್ರ ನಾಯಕತ್ವದಲ್ಲಿ ಮುಂದಿನ ದಿವಸಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರು, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಹೇಳಿದರು.
ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜನ್ಮದಿನದ ಪ್ರಯುಕ್ತ ರವೀಂದ್ರ ಶೆಟ್ಟಿ ಉಳಿದೊಟ್ಟು ನೇತೃತ್ವದಲ್ಲಿ ಉಳ್ಳಾಲ ತಾಲೂಕಿನ ಇತಿಹಾಸ ಪ್ರಸಿದ್ಧ ಸೋಮೇಶ್ವರ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ, ದೇರಳಕಟ್ಟೆಯ ಬೆಳ್ಮ ಸೇವಾಶ್ರಮದ ನಿವಾಸಿಗಳಿಗೆ ಹಣ್ಣು ಹಂಪಲು, ವಸ್ತ್ರ ವಿತರಣೆ, ಭಾಗ್ಯಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಅಭಿನಂದನೆ, 82 ವಿವಿಧ ತಳಿಯ ಸಸಿ ನೆಡುವ ಕಾರ್ಯಕ್ರಮ ಗುರುವಾರ ನಡೆಯಿತು. ರೈತ ನಾಯಕರು, ಹುಟ್ಟು ಹೋರಾಟಗಾರರಾದ ಯಡಿಯೂರಪ್ಪನವರು ಬಹಳಷ್ಟು ಜನರ ಪ್ರೀತಿಗೆ ಪಾತ್ರರಾಗಿದ್ದಾರೆ. ಪ್ರತೀ ವರುಷ ಅವರ ಹೆಸರಲ್ಲಿ ಸೋಮನಾಥನಿಗೆ ವಿಶೇಷ ಪೂಜೆ ಸಲ್ಲಿಸಿ ವಿವಿಧ ಸಮಾಜಮುಖಿ ಕಾರ್ಯಗಳನ್ನ ನಡೆಸುತ್ತಾ ಬಂದಿದ್ದೇವೆಂದು ರವೀಂದ್ರ ಶೆಟ್ಟಿ ಉಳಿದೊಟ್ಟು ಹೇಳಿದರು.
ಬಿಜೆಪಿ ಮಂಗಳೂರು ಮಂಡಲದ ಅಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲ್ ಮಾತನಾಡಿ ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷವು ಅಧಿಕಾರಕ್ಕೆ ಬರಲು ಯಡಿಯೂರಪ್ಪರೇ ಕಾರಣ. ಸರ್ವ ಜನಾಂಗವನ್ನು ವಿಶ್ವಾಸಕ್ಕೆ ಪಡೆದ ನಂಬರ್ ಒನ್ ಮುಖ್ಯಮಂತ್ರಿ ಅವರಾಗಿದ್ದಾರೆ. ರಾಜ್ಯದ ಅಭಿವೃದ್ಧಿಯಲ್ಲೂ ಬಿ.ಎಸ್ ಯಡಿಯೂರಪ್ಪ ಅವರ ಪಾತ್ರ ಮಹತ್ವದ್ದಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಭಾಗ್ಯಲಕ್ಷ್ಮಿ ಯೋಜನೆಯ 10 ಫಲಾನುಭವಿ ಹೆಣ್ಮಕ್ಕಳನ್ನು ಅಭಿನಂದಿಸಲಾಯಿತು. ಬಿಜೆಪಿ ಮಂಗಳೂರು ಮಂಡಲ ಪ್ರಧಾನ ಕಾರ್ಯದರ್ಶಿ ದಯಾನಂದ ತೊಕ್ಕೊಟ್ಟು, ಜಿಲ್ಲಾ ಕಾರ್ಯದರ್ಶಿ ದಿನೇಶ್ ಅಮ್ಟೂರ್, ಮಂಡಲ ಯುವಮೋರ್ಚಾ ಅಧ್ಯಕ್ಷ ಮುರಳಿ ಕೊಣಾಜೆ, ಸೌಮ್ಯ ಆರ್.ಶೆಟ್ಟಿ, ಪ್ರಮುಖರಾದ ರಾಮಚಂದ್ರ, ಕೃಷ್ಣಪ್ಪ, ರೂಪ, ಅನಂತ ಕೃಷ್ಣ ಯಾದವ, ಸತೀಶ್ ದೀಪಮ್ ಮೊದಲಾದವರು ಉಪಸ್ಥಿತರಿದ್ದರು.
Yeddyurappas Legacy Celebrated Initiatives Remembered by the Public on His Birthday sats Ravindra shetty in mangalore
29-04-25 10:45 pm
Bangalore Correspondent
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
Praveen Nettaru, Mohsin Shukur, Karwar Police...
29-04-25 01:04 pm
29-04-25 03:45 pm
HK News Desk
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
Pak, Website Hacked, Indian Army : ಅಲ್ಲಾ ನಮ್ಮ...
27-04-25 07:38 pm
29-04-25 11:00 pm
Mangalore Correspondent
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
Highland Hospital Mangalore, FIR, Anti Nation...
29-04-25 11:38 am
29-04-25 09:59 pm
Mangalore Correspondent
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm