ಬ್ರೇಕಿಂಗ್ ನ್ಯೂಸ್
27-02-25 10:31 pm Mangalore Correspondent ಕರಾವಳಿ
ಮಂಗಳೂರು, ಫೆ.27: ಅಂಕೋಲಾ ಬಳಿಯ ರಾಮನಗುಳಿ ಎಂಬಲ್ಲಿ ಮಂಗಳೂರಿಗೆ ಬರುತ್ತಿದ್ದ ಕಾರನ್ನು ಅಡ್ಡಗಟ್ಟಿ ಒಂದೂವರೆ ಕೋಟಿ ರೂಪಾಯಿ ಹಣ ದೋಚಿದ ಪ್ರಕರಣದಲ್ಲಿ ಕಾರವಾರ ಪೊಲೀಸರು ಮಂಗಳೂರಿನ ನಟೋರಿಯಸ್ ತಲ್ಲತ್ ಗ್ಯಾಂಗಿನ ಇಬ್ಬರು ಸದಸ್ಯರನ್ನು ಬಂಧಿಸಿ ಕರೆದೊಯ್ದಿದ್ದಾರೆಂಬ ಮಾಹಿತಿ ಲಭಿಸಿದೆ.
ಜ.28ರಂದು ಅಂಕೋಲಾ ಬಳಿಯ ರಾಮನಗುಳಿ ಎಂಬಲ್ಲಿ ಹೆದ್ದಾರಿ ಬದಿಯಲ್ಲಿ ಅನಾಥ ಕಾರು ಪತ್ತೆಯಾಗಿತ್ತು. ಹಿಂಬದಿ ಜಖಂ ಆಗಿದ್ದ ಸ್ಥಿತಿಯಲ್ಲಿದ್ದ ಕಾರಿನಲ್ಲಿ 1.14 ಕೋಟಿ ನಗದು ಪತ್ತೆಯಾಗಿತ್ತು. ಘಟನೆ ಬಗ್ಗೆ ಬೆನ್ನತ್ತಿದ ಪೊಲೀಸರಿಗೆ ಕಾರು ಮಂಗಳೂರಿನ ಜುವೆಲ್ಲರಿ ಮಾಲೀಕ ರಾಜೇಶ ಪವಾರ್ ಎಂಬವರದ್ದೆಂದು ತಿಳಿದುಬಂದಿತ್ತು. ಕೆಲವು ದಿನಗಳ ಬಳಿಕ ರಾಜೇಶ್ ಪವಾರ್ ಮತ್ತು ಕಾರಿನ ಚಾಲಕರು ಅಂಕೋಲಾ ಠಾಣೆಗೆ ತೆರಳಿ ದರೋಡೆ ಆಗಿರುವ ಬಗ್ಗೆ ದೂರು ನೀಡಿದ್ದರು.



ಜುವೆಲ್ಲರಿ ಬಂಗಾರವನ್ನು ಬೆಳಗಾವಿಯಲ್ಲಿ ವ್ಯಕ್ತಿಯೊಬ್ಬರಿಗೆ ನೀಡಿ, ಅಲ್ಲಿಂದ 2.80 ಕೋಟಿ ನಗದು ಹಣವನ್ನು ಹಿಂದೆ ತರುತ್ತಿದ್ದಾಗ ಅಂಕೋಲಾದಲ್ಲಿ ಅಡ್ಡಗಟ್ಟಿದ್ದ ತಂಡವೊಂದು ಚಾಲಕರಿಗೆ ಹಲ್ಲೆಗೈದು ಹಣವನ್ನು ದೋಚಿತ್ತು. ಈ ಬಗ್ಗೆ ತನಿಖೆ ಕೈಗೆತ್ತಿಕೊಂಡ ಪೊಲೀಸರು ಚಾಲಕರಿಬ್ಬರನ್ನು ತನಿಖೆ ನಡೆಸಿದ್ದು ಕೆಲವು ಮಾಹಿತಿ ಹೊರಬಿದ್ದಿತ್ತು. ಇದೀಗ ಮಂಗಳೂರು ಹೊರವಲಯದ ಅಡ್ಯಾರ್, ಬಜಾಲ್ ನಲ್ಲಿ ಸಕ್ರಿಯವಾಗಿರುವ ತಲ್ಲತ್ ಗ್ಯಾಂಗ್ ಸದಸ್ಯರಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಗ್ಯಾಂಗ್ ಪ್ರಮುಖರು ತಲೆಮರೆಸಿಕೊಂಡಿದ್ದಾರೆ.
Ankola cash Robbery case, two from Mangalore Talat gang arrested by police over cash robbery. The recovery of ₹ 1.15 crore in cash from a Hyundai Creta found abandoned in a forest near Karwar in coastal Karnataka on January 28 this year has revealed a case of robbery of ₹ 1.80 crore in cash and spotlighted gold smuggling rackets in the region.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm