ಬ್ರೇಕಿಂಗ್ ನ್ಯೂಸ್
02-03-25 11:01 pm Mangalore Correspondent ಕರಾವಳಿ
ಪುತ್ತೂರು, ಮಾ.2 : ಕೆಎಸ್ ಆರ್ ಟಿಸಿ ಬಸ್ ಬರುತ್ತಿದ್ದಾಗ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದ್ದು ರಿಕ್ಷಾದಲ್ಲಿದ್ದ ತಾಯಿ, ಮಗು ಮೃತಪಟ್ಟ ದಾರುಣ ಘಟನೆ ಪುತ್ತೂರು ಪೇಟೆ ಹೊರವಲಯದ ಮಂಜಲ್ಪಡ್ಪು ಎಂಬಲ್ಲಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಸಂಜೆ ನಡೆದಿದೆ.
ಮೃತರನ್ನು ಕೆದಂಬಾಡಿ ನಿವಾಸಿಗಳಾದ ಜಮೀಲ(49) ಹಾಗೂ ತಪ್ಸಿಬ್(5) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಪುತ್ತೂರಿನತ್ತ ವೇಗವಾಗಿ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸಿಗೆ ಪುತ್ತೂರು ಕಡೆಯಿಂದ ಕಬಕ ಕಡೆಗೆ ಬರುತ್ತಿದ್ದ ಆಟೋ ರಿಕ್ಷಾ ಡಿಕ್ಕಿಯಾಗಿದೆ. ಡಿಕ್ಕಿಯಾದ ದೃಶ್ಯ ಸ್ಥಳೀಯ ಕಟ್ಟಡದ ಸಿಸಿಟಿವಿಯಲ್ಲಿ ದಾಖಲಾಗಿದ್ದು ಆಟೋ ನೇರವಾಗಿ ರಸ್ತೆ ನಡುವೆ ಬಂದಿದ್ದು ಬಸ್ಸನ್ನು ನೋಡಿ ತಪ್ಪಿಸಲೆಂದು ಹೋದಾಗ ಪಲ್ಟಿಯಾಗಿದೆ.

ಕೆದಂಬಾಡಿ ಗ್ರಾಮದ ನಿವಾಸಿ ಆಟೋ ಚಾಲಕ ಮಹಮ್ಮದ್ ಎಂಬವರು ತನ್ನ ಪತ್ನಿ ಮತ್ತು ಮೊಮ್ಮಗನನ್ನು ಕುಳ್ಳಿರಿಸಿಕೊಂಡು ಭಾನುವಾರ ಸಂಜೆ ಮನೆ ಕಡೆಗೆ ಹೋಗುತ್ತಿದ್ದರು. ಆಟೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗುತ್ತಲೇ ಅದಕ್ಕೆ ಬಸ್ ಡಿಕ್ಕಿಯಾಗಿದ್ದು ಅಪ್ಪಚ್ಚಿಯಾಗಿದೆ. ಅದರಲ್ಲಿ ಪ್ರಯಾಣಿಸುತ್ತಿದ್ದ ಚಾಲಕ ಮಹಮ್ಮದ್ ಅವರ ಪತ್ನಿ ಜಮೀಲ(52) ಮತ್ತು ಅವರ ಮೊಮ್ಮಗ ತಪ್ಸಿಬ್(5) ಇದರ ನಡುವೆ ಸಿಕ್ಕಿಕೊಂಡು ಮೃತಪಟ್ಟಿದ್ದಾರೆ. ರಿಕ್ಷಾ ಚಾಲಕ ಮಹಮ್ಮದ್ ಗಂಭೀರ ಗಾಯಗೊಂಡಿದ್ದಾರೆ.
ಮಹಮ್ಮದ್ ಅವರು ಪತ್ನಿ, ಮೊಮ್ಮಗನ ಜೊತೆಗೆ ಬಟ್ಟೆ ಖರೀದಿಸಿ ರಿಕ್ಷಾದಲ್ಲಿ ಮನೆಯತ್ತ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Puttur KSRTC bus Auto accident, wife and five year old grandson killed. A devastating accident occurred at puttur when an auto rickshaw lost control and collided with KSRTC bus, resulting in the tragic deaths of a mother and her young child.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm