ಬ್ರೇಕಿಂಗ್ ನ್ಯೂಸ್
04-03-25 07:35 pm Mangalore Correspondent ಕರಾವಳಿ
ಮಂಗಳೂರು, ಮಾ.4 : ಪಾವೂರು ಉಳಿಯ, ಆಡಂಕುದ್ರು ಇನ್ನಿತರ ನದಿ ಮಧ್ಯದ ನಡುಗಡ್ಡೆಗಳನ್ನು ಸರಕಾರ ಅವಕಾಶ ಕೊಟ್ಟರೆ ಅತ್ಯುತ್ತಮವಾಗಿ ಪ್ರವಾಸೋದ್ಯಮ ದೃಷ್ಟಿಯಿಂದ ಅಭಿವೃದ್ಧಿ ಪಡಿಸಬಹುದು. ಈ ಹಿಂದೆ ಅಂತಹ ನಡುಗಡ್ಡೆಗಳಲ್ಲಿ ಜಿಲ್ಲಾಧಿಕಾರಿಗಳು ಖಾಸಗಿಯವರಿಗೆ ಒಂದು ಎಕರೆಯಷ್ಟು ಜಾಗವನ್ನು ಅಲಾಟ್ ಮಾಡಿದ್ದರು. ಅವರಿಗೆ ಪರಿಹಾರ ಕೊಟ್ಟು ಜಾಗವನ್ನು ಖಾಸಗಿ ಕಂಪನಿಗಳಿಗೆ ಕೊಟ್ಟರೆ ಒಳ್ಳೆಯದಿತ್ತು. ಸರ್ಕಾರ ಅನುದಾನ ಕೊಡುವುದು ಬೇಡ, ಖಾಸಗಿ ಕಂಪನಿಗಳೇ ಅಲ್ಲಿ ಹೂಡಿಕೆ ಮಾಡಲು ತಯಾರಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡಿದ್ದಾರೆ.
ಅಶೋಕ್ ರೈ ಮಾತಿಗೆ ಸ್ಪೀಕರ್ ಯುಟಿ ಖಾದರ್ ಕೂಡ ದನಿಗೂಡಿಸಿದ್ದು, ಪಾವೂರು ಉಳಿಯ ದ್ವೀಪಕ್ಕೆ ತೂಗುಸೇತುವೆ ಪ್ರಸ್ತಾಪ ಇಟ್ಟಿದ್ದೆ. ಆ ಬಗ್ಗೆಯೂ ಸರಕಾರ ಆದ್ಯತೆ ನೀಡಬೇಕು ಎಂದು ಕೇಳಿಕೊಂಡರು. ಇದಕ್ಕುತ್ತರಿಸಿದ ಸಚಿವ ಎಚ್.ಕೆ ಪಾಟೀಲ್, ಶಾಸಕ ಅಶೋಕ್ ರೈಯವರದ್ದು ಉತ್ತಮ ಸಲಹೆ. ನಡುಗಡ್ಡೆಗಳನ್ನು ಅಭಿವೃದ್ಧಿ ಪಡಿಸಿ ಪ್ರವಾಸೋದ್ಯಮ ಬೆಳೆಸಲು ಆದ್ಯತೆ ನೀಡುತ್ತೇನೆ. ಇದಕ್ಕೆ ನಮ್ಮ ಇಲಾಖೆಯ ಕಾರ್ಯದರ್ಶಿಯನ್ನು ಕಳಿಸಿಕೊಟ್ಟು ಜಾಗ ಪರಿಶೀಲನೆ ಮಾಡಿಸುತ್ತೇನೆ, ಜಾಗ ಕೊಟ್ಟರೆ ಕಂಪನಿಯವರು ಅಭಿವೃದ್ಧಿ ಪಡಿಸುವುದಾದರೆ ಉತ್ತಮ ಎಂದು ಹೇಳಿದರು. ಹಾಗೆಯೇ ಪಾವೂರು ಉಳಿಯ ದ್ವೀಪಕ್ಕೆ ತೂಗು ಸೇತುವೆ ರಚಿಸುವ ವಿಚಾರದಲ್ಲಿಯೂ ಗಂಭೀರ ಕ್ರಮ ವಹಿಸುತ್ತೇವೆ ಎಂದರು.
ಗೆಜ್ಜೆಗಿರಿ ಮತ್ತು ನಂದನಬಿತ್ತಿಲು ಅಭಿವೃದ್ಧಿ ಕಾರ್ಯಕ್ಕೂ ಅನುದಾನ ನೀಡಬೇಕು ಎಂದು ಶಾಸಕ ಅಶೋಕ್ ರೈ ಕೇಳಿಕೊಂಡಿದ್ದಾರೆ. ಇದಕ್ಕುತ್ತರಿಸಿದ ಸಚಿವ ಪಾಟೀಲ್, ಮುಂದಿನ ಬಜೆಟ್ ನಲ್ಲಿ ಅದಕ್ಕೆ ಅನುದಾನ ನೀಡುವಂತೆ ಮಾಡುತ್ತೇನೆ ಎಂದರು. ಈಗಾಗಲೇ ಬಿರುಮಲೆ ಬೆಟ್ಟಕ್ಕೆ ಎರಡು ಕೋಟಿ ಅನುದಾನವನ್ನು ಕ್ಷೇತ್ರಾಭಿವೃದ್ಧಿ ಅನುದಾನದಿಂದ ಕೊಟ್ಟಿದ್ದೇನೆ. ಅದರಲ್ಲಿ ಒಂದು ಕೋಟಿ ಅನುದಾನ ಬಿಡುಗಡೆ ಆಗಿದೆ, ಪ್ರವಾಸೋದ್ಯಮ ಅಭಿವೃದ್ಧಿಗೆ ಇನ್ನಷ್ಟು ಅನುದಾನದ ಅಗತ್ಯವಿದೆ ಎಂದು ಹೇಳಿದರು.
"MLA Ashok Rai Advocates for Islands to Boost Mangalore Tourism; Minister HK Patil Offers Support"
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm