ಬ್ರೇಕಿಂಗ್ ನ್ಯೂಸ್
04-03-25 10:58 pm Mangalore Correspondent ಕರಾವಳಿ
ಬಂಟ್ವಾಳ, ಮಾ.4 : ವಿಟ್ಲ ಸಮೀಪದ ಮಾಡತ್ತಡ್ಕ ಎಂಬಲ್ಲಿ ಕಲ್ಲಿನ ಕೋರೆಯಲ್ಲಿ ಭಾರೀ ಸ್ಪೋಟ ಸಂಭವಿಸಿದ್ದು ಆಸುಪಾಸಿನ 15ಕ್ಕು ಮಿಕ್ಕಿ ಮನೆಗಳಿಗೆ ಹಾನಿಯಾಗಿದೆ. ಮಧ್ಯಾಹ್ನದ ವೇಳೆಗೆ ಭಾರೀ ಸದ್ದಿನೊಂದಿಗೆ ಸ್ಫೋಟ ಸಂಭವಿಸಿದ್ದು, ಪರಿಸರದ ಐದು ಗ್ರಾಮಗಳ ಜನರು ಭಯದಿಂದ ನಲುಗಿ ಹೋಗಿದ್ದಾರೆ.
ಕಲ್ಲಿನ ಕೋರೆಯಲ್ಲಿ ಇರಿಸಲಾಗಿದ್ದ ನೂರಕ್ಕೂ ಮಿಕ್ಕಿದ ಜಿಲೆಟಿನ್ ಕಡ್ಡಿ, 50 ಕ್ಕೂ ಮಿಕ್ಕಿದ ಡಿಟೋನೇಟರ್ ಗಳು ಬಿಸಿಲಿನ ಝಳಕ್ಕೆ ಬೆಂಕಿ ಹತ್ತಿಕೊಂಡು ಬ್ಲಾಸ್ಟ್ ಆಗಿದ್ದು, ಅಕ್ಕಪಕ್ಕದ ಮನೆಗಳಿಗೆ ಹಾನಿಯಾಗಿದೆ.





ಬಂಟ್ವಾಳ ತಾಲೂಕಿನ ವಿಡ್ಲ ಮುಡ್ನೂರು ಗ್ರಾಮದ ಮಾಡತ್ತಡ್ಕ ಎಂಬಲ್ಲಿ ಘಟನೆ ಸಂಭವಿಸಿದೆ. ಸುಮಾರು 12 ವರ್ಷಗಳಿಂದ ಎನ್.ಎಸ್ ಕ್ರಶರ್ ಎನ್ನುವ ಸಂಸ್ಥೆ ಕಪ್ಪು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದು ಅಕ್ರಮವಾಗಿ ಸ್ಫೋಟಕಗಳನ್ನು ಸಂಗ್ರಹಿಸಲಾಗಿತ್ತು. ಸ್ಪೋಟಗೊಂಡ ಪ್ರದೇಶ ಸಂಪೂರ್ಣ ಛಿದ್ರ ಛಿದ್ರವಾಗಿ ಹೋಗಿದೆ. ಸ್ಟೋಟದ ಘರ್ಷಣೆಗೆ ಸುಮಾರು 20 ಮೀಟರ್ ದೂರದಲ್ಲಿದ್ದ ಮನೆಗಳ ಗೋಡೆಗಳಲ್ಲಿ ಬಿರುಕು ಬಿದ್ದಿದೆ, ಕಿಟಕಿ ಗಾಜುಗಳು ಪುಡಿಯಾಗಿದ್ದು, ಮೇಲ್ಛಾವಣಿ ಕುಸಿದು ಬಿದ್ದಿವೆ. ಸುಮಾರು 12 ಮನೆಗಳಿಗೆ ಹೆಚ್ಚಿನ ಹಾನಿಯಾಗಿದ್ದು, ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ.
ಪರಿಸರದ ಸುಮಾರು ಇನ್ನೂರು ಮೀಟರ್ ವ್ಯಾಪ್ತಿಯಲ್ಲಿ ಪ್ರದೇಶದ ಗಿಡ ಮರಗಳ ಎಲೆಗಳು ಚೂರು ಚೂರಾಗಿ ಬಿದ್ದಿರೋದು ಸ್ಪೋಟದ ತೀವ್ರತೆಗೆ ಸಾಕ್ಷಿಯಾಗಿದೆ. ಸ್ಪೋಟದ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರು ನೀರು ಹಾಯಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಸ್ಪೋಟಕಗಳನ್ನು ಅಕ್ರಮವಾಗಿ, ಅಜಾಗರೂಕತೆಯಿಂದ ದಾಸ್ತಾನಿರಿಸಿದ ಸಂಸ್ಥೆಯ ವಿರುದ್ಧ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕ್ರಶರ್ ಗೆ ಸಂಬಂಧಿಸಿದ ಯಂತ್ರೋಪಕರಣಗಳನ್ನೂ ವಶಪಡಿಸಿಕೊಳ್ಳಲು ಪೋಲೀಸರು ಕ್ರಮ ಕೈಗೊಂಡಿದ್ದಾರೆ. ಸ್ಥಳಕ್ಕೆ ಎಸ್ಪಿ ಯತೀಶ್ ಭೇಟಿ ನೀಡಿದ್ದು 50ಕ್ಕು ಹೆಚ್ಚು ಡಿಟೋನೇಟರ್ ಇಟ್ಟಿರುವುದು ಬಿಸಿಲ ಝಳಕ್ಕೆ ಸ್ಫೋಟಗೊಂಡಿದೆ ಎಂದು ತಿಳಿಸಿದ್ದಾರೆ.
A sudden explosion at a local quarry in Vitla resulted in significant damage to at least 15 houses in the vicinity. The blast, which occurred earlier today, sent shockwaves through the area, prompting immediate response from local authorities.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am