ಬ್ರೇಕಿಂಗ್ ನ್ಯೂಸ್
05-03-25 07:44 pm Mangalore Correspondent ಕರಾವಳಿ
ಮಂಗಳೂರು, ಮಾ.5: ನಗರದ ಕಾರಾಗೃಹದಲ್ಲಿ ಕೈದಿಗಳಿಗೆ ದಿಢೀರ್ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಧ್ಯಾಹ್ನದ ಊಟ ಸೇವಿಸಿದ ಬಳಿಕ ಘಟನೆ ನಡೆದಿದ್ದು, 45 ಮಂದಿಯನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕೈದಿಗಳಿಗೆ ಮಧ್ಯಾಹ್ನ ಅನ್ನ, ಸಾಂಬಾರ್ ಮತ್ತು ಬೆಳಗ್ಗೆ ಅವಲಕ್ಕಿ ನೀಡಲಾಗಿತ್ತು ಎನ್ನಲಾಗುತ್ತಿದೆ. ಮಧ್ಯಾಹ್ನ ಊಟದ ನಂತರ ವಾಂತಿ ಭೇದಿ ಕಾಣಿಸಿಕೊಂಡಿದೆ. ಆನಂತರ, ಅನಾರೋಗ್ಯ ಕಾಣಿಸಿದ ಕೈದಿಗಳನ್ನು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಸಂಜೆ 3.30ರಿಂದ 4.30ರ ನಡುವೆ ನಾಲ್ಕು ಪೊಲೀಸ್ ಬಸ್ಸಿನಲ್ಲಿ ಕೈದಿಗಳನ್ನು ಆಸ್ಪತ್ರೆಗೆ ಒಯ್ಯಲಾಗಿದ್ದು, ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಪೈಕಿ ಒಬ್ಬನ ಸ್ಥಿತಿ ಗಂಭೀರ ಇರುವ ಮಾಹಿತಿ ಇದೆ.


ಆಸ್ಪತ್ರೆಗೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಭೇಟಿ ನೀಡಿದ್ದು, ವೈದ್ಯರೊಂದಿಗೆ ಕೈದಿಗಳ ಆರೋಗ್ಯ ವಿಚಾರಿಸಿದ್ದಾರೆ. ಆಸ್ಪತ್ರೆ ವಾರ್ಡ್ ನಲ್ಲಿ ಕೈದಿಗಳನ್ನು ದಾಖಲಿಸಿ ಪೊಲೀಸರ ಬಿಗಿ ಭದ್ರತೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಮಿಷನರ್ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು, ಅನ್ನ ಸಾಂಬಾರನ್ನು ಎಲ್ಲ ಕೈದಿಗಳಿಗೂ ನೀಡಲಾಗಿತ್ತು. ಅಲ್ಲಿ 350 ಕೈದಿಗಳಿದ್ದಾರೆ. ಎಲ್ಲರಿಗೂ ಆರೋಗ್ಯ ತೊಂದರೆ ಎದುರಾಗಿಲ್ಲ. ಆಹಾರದ ಸ್ಯಾಂಪಲನ್ನು ಪರೀಕ್ಷೆಗೆ ಕಳುಹಿಸಿದ್ದೇವೆ, ಯಾವ ಕಾರಣದಿಂದ ಫುಡ್ ಪಾಯ್ಸನ್ ಆಗಿದೆ ಎನ್ನುವ ಬಗ್ಗೆ ತನಿಖೆ ನಡೆಸಲಾಗುವುದು. 45 ಮಂದಿ ಪೈಕಿ ಒಬ್ಬನ ಸ್ಥಿತಿ ಗಂಭೀರ ಇದ್ದು ಐಸಿಯುನಲ್ಲಿ ಇರಿಸಲಾಗಿದೆ ಎಂದು ತಿಳಿಸಿದ್ದಾರೆ.
A disturbing incident unfolded at the Mangalore Jail, when 44 inmates fell ill after consuming their afternoon meal. The affected individuals were promptly admitted to Wenlock Hospital for treatment, where medical staff are currently monitoring their condition.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am