ಬ್ರೇಕಿಂಗ್ ನ್ಯೂಸ್
05-03-25 09:30 pm Mangalore Correspondent ಕರಾವಳಿ
ಮಂಗಳೂರು, ಮಾ.5 : ಫರಂಗಿಪೇಟೆಯ ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ವಿಧಾನಸಭೆ ಅಧಿವೇಶನದಲ್ಲಿ ಸ್ಪೀಕರ್ ಯುಟಿ ಖಾದರ್ ಅವರೇ ಪ್ರಸ್ತಾಪ ಎತ್ತಿದ್ದು, ತನಿಖೆಯ ಪ್ರಗತಿ ಎಷ್ಟರ ಮಟ್ಟಿಗೆ ಆಗಿದೆ ಎನ್ನುವ ಬಗ್ಗೆ ಸಂಬಂಧಪಟ್ಟ ಸಚಿವರಲ್ಲಿ ಪ್ರಶ್ನೆ ಎತ್ತಿದ್ದಾರೆ.
ಹೆತ್ತವರು ತುಂಬ ಚಿಂತೆಗೆ ಒಳಗಾಗಿದ್ದಾರೆ, ನನ್ನ ಕ್ಷೇತ್ರದ ಫರಂಗಿಪೇಟೆಯಲ್ಲಿ ಘಟನೆಯಾಗಿದ್ದು, ರಾಜ್ಯ ಸರಕಾರದ ತನಿಖೆ ಏನು ಮಾಡಿದೆ ಎಂದು ಸ್ಪೀಕರ್ ಕೇಳಿದ್ದಾರೆ. ಗೃಹ ಸಚಿವರ ಅನುಪಸ್ಥಿತಿಯಲ್ಲಿ ಉತ್ತರ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಪಿಯುಸಿ ವಿದ್ಯಾರ್ಥಿ ದಿಗಂತ್ ಮಂಗಳೂರಿನ ಕಪಿತಾನಿಯೋ ಶಾಲೆಯಲ್ಲಿ ಕಲಿಯುತ್ತಿದ್ದು, ಫೆ.25ರಂದು ದೇವಸ್ಥಾನಕ್ಕೆಂದು ಹೇಳಿ ಹೋದಾತ ನಾಪತ್ತೆಯಾಗಿದ್ದಾನೆ. ಈ ಬಗ್ಗೆ ಮಂಗಳೂರು ಎಸ್ಪಿ ಜೊತೆಗೆ ಮಾತುಕತೆ ನಡೆಸಿದ್ದು, ಏಳು ಪೊಲೀಸ್ ತಂಡಗಳನ್ನು ರಚಿಸಿದ್ದಾರೆ. ಆತ ಎಲ್ಲಿಗೆ ಹೋಗಿದ್ದಾನೆ, ಏನಾಗಿದ್ದಾನೆ ಅನ್ನುವ ಕಾಳಜಿ ಇದೆ. ಪೊಲೀಸರು ಸೂಕ್ತ ರೀತಿಯಲ್ಲಿ ತನಿಖೆ ನಡೆಸಲಿದ್ದಾರೆ ಎಂದು ಹೇಳಿದರು.
ಇದೇ ವೇಳೆ, ಇದೇ ವಿಚಾರ ಪ್ರಸ್ತಾಪಿಸಿದ ಕಾರ್ಕಳ ಶಾಸಕ ಸುನಿಲ್ ಕುಮಾರ್, ದಿಗಂತ್ ನಾಪತ್ತೆ ಪ್ರಕರಣದ ಬಗ್ಗೆ ನಮ್ಮ ಅಲ್ಲಿನ ಶಾಸಕರು ಕೂಡ ದನಿಯೆತ್ತಿದ್ದಾರೆ. ಫರಂಗಿಪೇಟೆಯನ್ನು ಬಂದ್ ಮಾಡಿ ಪ್ರತಿಭಟನೆ ಮಾಡಿದ್ದಾರೆ. ಏಳು ಪೊಲೀಸ್ ತಂಡಗಳನ್ನು ರಚಿಸಿದರೆ ಸಾಲದು, ರಾಜ್ಯ ಸರಕಾರ ಈ ಬಗ್ಗೆ ಗಂಭೀರ ಪರಿಗಣಿಸಿ ತನಿಖೆ ನಡೆಸಬೇಕಾಗಿದೆ ಎಂದು ಹೇಳಿದರು. ರಾಜ್ಯ ಸರಕಾರ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿದೆ, ಆತನ ಫೋನ್ ಡಿಟೇಲ್ಸ್ ತೆಗೆದಿದ್ದಾರೆ. ಫೋನನ್ನು ಓಪನ್ ಮಾಡದಂತೆ 16 ಪಿನ್ ಹಾಕಿದ್ದ. ಯಾರಿಗೆಲ್ಲ ಕರೆ ಹೋಗಿದೆ ಎನ್ನುವ ಬಗ್ಗೆಯೂ ತನಿಖೆ ನಡೆಸಿದ್ದಾರೆ. ಈ ವಿಷಯದ ಬಗ್ಗೆ ಸ್ಪೀಕರ್ ಸಾಹೇಬ್ರು ಕೂಡ ಸ್ಪೀಕರ್ ಜೊತೆಗೆ ಸಂಪರ್ಕದಲ್ಲಿದ್ದಾರೆ. ನಾನು ವಿಷಯ ತಿಳಿದ ಕೂಡಲೇ ಸದನಕ್ಕೆ ಮಾಹಿತಿ ನೀಡುತ್ತೇನೆ ಎಂದು ಸಚಿವ ಬಂಗಾರಪ್ಪ ಹೇಳಿದ್ದಾರೆ.
ಇದೇ ವೇಳೆ, ದಿಗಂತ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ನಾನಾ ಆಯಾಮಗಳಿಂದ ತನಿಖೆ ನಡೆಸುತ್ತಿದ್ದರೂ, ಸರಿಯಾದ ಮಾಹಿತಿ ಲಭಿಸಿಲ್ಲ ಎನ್ನಲಾಗುತ್ತಿದೆ. ಬಂಟ್ವಾಳ ಪೊಲೀಸರು ಪ್ರಕರಣದ ಹಿಂದೆ ಬಿದ್ದಿದ್ದು ಎಸ್ಪಿ ಯತೀಶ್ ವಿಶೇಷ ಮುತುವರ್ಜಿ ವಹಿಸಿದ್ದಾರೆ. ಸ್ಥಳೀಯ ಪೊಲೀಸರು ಯಾವುದೇ ಮಾಹಿತಿ ನೀಡುತ್ತಿಲ್ಲ, ಎಸ್ಪಿ ಅವರನ್ನೇ ಕೇಳಬೇಕು ಎನ್ನುತ್ತಿದ್ದಾರೆ. ಅಂತೆ ಕಂತೆಗಳ ಬಗ್ಗೆ ಚರ್ಚೆಯಾಗುತ್ತಿದ್ದರೂ, ಸೂಕ್ತ ಮಾಹಿತಿಯನ್ನು ಪೊಲೀಸರೇ ನೀಡಬೇಕಾಗಿದೆ.
Mangalore student Diganth missing case, topic raised in assembly by speaker and MLAs.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am