ಬ್ರೇಕಿಂಗ್ ನ್ಯೂಸ್
08-03-25 02:06 pm Mangalore Correspondent ಕರಾವಳಿ
ಮಂಗಳೂರು, ಮಾ.8 : ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳು ಮೊಬೈಲ್ ಬಳಕೆ ಮಾಡಬಾರದೆಂದು 5ಜಿ ಮೇಲ್ದರ್ಜೆಗೇರಿಸಿದ ಜಾಮರ್ ಅಳವಡಿಸಿದ್ದು ಸದ್ರಿ ಉಪಕರಣಗಳನ್ನು ಉಪ್ಪು ಸುರಿದು ನಿಷ್ಕ್ರಿಯಗೊಳಿಸಲು ಪ್ರಯತ್ನಿಸಿದ್ದಾರೆ ಎಂದು ಕೈದಿಗಳ ವಿರುದ್ದ ಜೈಲು ಅಧೀಕ್ಷಕರು ಬರ್ಕೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಹಿಂದೆ 2ಜಿ/3ಜಿ ಮಾದರಿಯ 5 ಮೊಬೈಲ್ ಜಾಮರ್ ಉಪಕರಣಗಳನ್ನು ಜೈಲಿನಲ್ಲಿ ಅಳವಡಿಸಲಾಗಿತ್ತು. ಅದನ್ನು 5ಜಿ ಆಗಿ ಮೇಲ್ದರ್ಜೆಗೇರಿಸಲು ಟಿಐಸಿಎಲ್ ಸಂಸ್ಥೆಗೆ ವಹಿಸಲಾಗಿತ್ತು. ಅದರಂತೆ 5ಜಿ ಜಾಮರ್ ಉಪಕರಣಗಳನ್ನು ಅಳವಡಿಸಿದ್ದು ಅದನ್ನು ಇಲಾಖೆಯ ವಶಕ್ಕೆ ನೀಡಬೇಕಾದ ಕೆಲಸ ಮಾತ್ರ ಬಾಕಿ ಇತ್ತು. ಅಷ್ಟರಲ್ಲಿ ಜೈಲಿನ ಎ ಮತ್ತು ಬಿ ವಿಭಾಗಗಳಲ್ಲಿ ಜಾಮರ್ ಉಪಕರಣಗಳನ್ನು ಉಪ್ಪು ಸುರಿದು ಕೆಡಿಸಲು ಪ್ರಯತ್ನ ಮಾಡಿದ್ದಾರೆ.
ಈ ಬಗ್ಗೆ ಸಂಸ್ಥೆಯವರು ಕಾರಾಗೃಹ ಇಲಾಖೆ ಮಹಾನಿರ್ದೇಶಕರಿಗೆ ವರದಿ ನೀಡಿದ್ದಾರೆ. ವರದಿಯ ಆಧಾರದಲ್ಲಿ ಜೈಲಿನ ಸಿಸಿ ಕೆಮರಾ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ 9 ಮಂದಿ ವಿಚಾರಣಾಧೀನ ಕೈದಿಗಳು ಜಾಮರ್ ಉಪಕರಣವನ್ನು ಕೆಡಿಸಲು ಯತ್ನಿಸಿರುವುದು ಕಂಡು ಬಂದಿದೆ ಎಂದು ಜೈಲು ಅಧೀಕ್ಷಕರು ತಿಳಿಸಿದ್ದಾರೆ. ಜಾಮರ್ ಅಳವಡಿಸಿದ್ದರಿಂದ ಸ್ಥಳೀಯವಾಗಿ ಆಸುಪಾಸಿನಲ್ಲಿ ಮೊಬೈಲ್ ಸೇವೆಯಲ್ಲಿ ವ್ಯತ್ಯಯವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಜೈಲಿನಲ್ಲಿ ಮೊಬೈಲ್ ಬಳಕೆಗೆ ಅವಕಾಶ ಇಲ್ಲ. ಆದರೂ, ಕೈದಿಗಳು ಅಕ್ರಮವಾಗಿ ಮೊಬೈಲ್ ಬಳಸುತ್ತಿದ್ದಾರೆ ಎನ್ನುವುದು ಆರೋಪ. ಹೀಗಾಗಿ ಮೊಬೈಲ್ ಮೇಲೆ ಕಡಿವಾಣ ಹಾಕಲು ರೇಂಜ್ ಸಿಗದಂತೆ ಮಾಡಲು ಜೈಲು ಅಧೀಕ್ಷಕರು ಪ್ರಬಲ ಜಾಮರ್ ಹಾಕಲು ಮುಂದಾಗಿದ್ದಾರೆ.
Jammer in Mangalore jail, jail inmates try to destroy jammer, Jai authorities file case at barke station.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 04:43 pm
HK News Staffer
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm