ಬ್ರೇಕಿಂಗ್ ನ್ಯೂಸ್
08-03-25 02:06 pm Mangalore Correspondent ಕರಾವಳಿ
ಮಂಗಳೂರು, ಮಾ.8 : ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳು ಮೊಬೈಲ್ ಬಳಕೆ ಮಾಡಬಾರದೆಂದು 5ಜಿ ಮೇಲ್ದರ್ಜೆಗೇರಿಸಿದ ಜಾಮರ್ ಅಳವಡಿಸಿದ್ದು ಸದ್ರಿ ಉಪಕರಣಗಳನ್ನು ಉಪ್ಪು ಸುರಿದು ನಿಷ್ಕ್ರಿಯಗೊಳಿಸಲು ಪ್ರಯತ್ನಿಸಿದ್ದಾರೆ ಎಂದು ಕೈದಿಗಳ ವಿರುದ್ದ ಜೈಲು ಅಧೀಕ್ಷಕರು ಬರ್ಕೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಹಿಂದೆ 2ಜಿ/3ಜಿ ಮಾದರಿಯ 5 ಮೊಬೈಲ್ ಜಾಮರ್ ಉಪಕರಣಗಳನ್ನು ಜೈಲಿನಲ್ಲಿ ಅಳವಡಿಸಲಾಗಿತ್ತು. ಅದನ್ನು 5ಜಿ ಆಗಿ ಮೇಲ್ದರ್ಜೆಗೇರಿಸಲು ಟಿಐಸಿಎಲ್ ಸಂಸ್ಥೆಗೆ ವಹಿಸಲಾಗಿತ್ತು. ಅದರಂತೆ 5ಜಿ ಜಾಮರ್ ಉಪಕರಣಗಳನ್ನು ಅಳವಡಿಸಿದ್ದು ಅದನ್ನು ಇಲಾಖೆಯ ವಶಕ್ಕೆ ನೀಡಬೇಕಾದ ಕೆಲಸ ಮಾತ್ರ ಬಾಕಿ ಇತ್ತು. ಅಷ್ಟರಲ್ಲಿ ಜೈಲಿನ ಎ ಮತ್ತು ಬಿ ವಿಭಾಗಗಳಲ್ಲಿ ಜಾಮರ್ ಉಪಕರಣಗಳನ್ನು ಉಪ್ಪು ಸುರಿದು ಕೆಡಿಸಲು ಪ್ರಯತ್ನ ಮಾಡಿದ್ದಾರೆ.
ಈ ಬಗ್ಗೆ ಸಂಸ್ಥೆಯವರು ಕಾರಾಗೃಹ ಇಲಾಖೆ ಮಹಾನಿರ್ದೇಶಕರಿಗೆ ವರದಿ ನೀಡಿದ್ದಾರೆ. ವರದಿಯ ಆಧಾರದಲ್ಲಿ ಜೈಲಿನ ಸಿಸಿ ಕೆಮರಾ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ 9 ಮಂದಿ ವಿಚಾರಣಾಧೀನ ಕೈದಿಗಳು ಜಾಮರ್ ಉಪಕರಣವನ್ನು ಕೆಡಿಸಲು ಯತ್ನಿಸಿರುವುದು ಕಂಡು ಬಂದಿದೆ ಎಂದು ಜೈಲು ಅಧೀಕ್ಷಕರು ತಿಳಿಸಿದ್ದಾರೆ. ಜಾಮರ್ ಅಳವಡಿಸಿದ್ದರಿಂದ ಸ್ಥಳೀಯವಾಗಿ ಆಸುಪಾಸಿನಲ್ಲಿ ಮೊಬೈಲ್ ಸೇವೆಯಲ್ಲಿ ವ್ಯತ್ಯಯವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಜೈಲಿನಲ್ಲಿ ಮೊಬೈಲ್ ಬಳಕೆಗೆ ಅವಕಾಶ ಇಲ್ಲ. ಆದರೂ, ಕೈದಿಗಳು ಅಕ್ರಮವಾಗಿ ಮೊಬೈಲ್ ಬಳಸುತ್ತಿದ್ದಾರೆ ಎನ್ನುವುದು ಆರೋಪ. ಹೀಗಾಗಿ ಮೊಬೈಲ್ ಮೇಲೆ ಕಡಿವಾಣ ಹಾಕಲು ರೇಂಜ್ ಸಿಗದಂತೆ ಮಾಡಲು ಜೈಲು ಅಧೀಕ್ಷಕರು ಪ್ರಬಲ ಜಾಮರ್ ಹಾಕಲು ಮುಂದಾಗಿದ್ದಾರೆ.
Jammer in Mangalore jail, jail inmates try to destroy jammer, Jai authorities file case at barke station.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am