ಬ್ರೇಕಿಂಗ್ ನ್ಯೂಸ್
08-03-25 02:06 pm Mangalore Correspondent ಕರಾವಳಿ
ಮಂಗಳೂರು, ಮಾ.8 : ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳು ಮೊಬೈಲ್ ಬಳಕೆ ಮಾಡಬಾರದೆಂದು 5ಜಿ ಮೇಲ್ದರ್ಜೆಗೇರಿಸಿದ ಜಾಮರ್ ಅಳವಡಿಸಿದ್ದು ಸದ್ರಿ ಉಪಕರಣಗಳನ್ನು ಉಪ್ಪು ಸುರಿದು ನಿಷ್ಕ್ರಿಯಗೊಳಿಸಲು ಪ್ರಯತ್ನಿಸಿದ್ದಾರೆ ಎಂದು ಕೈದಿಗಳ ವಿರುದ್ದ ಜೈಲು ಅಧೀಕ್ಷಕರು ಬರ್ಕೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಹಿಂದೆ 2ಜಿ/3ಜಿ ಮಾದರಿಯ 5 ಮೊಬೈಲ್ ಜಾಮರ್ ಉಪಕರಣಗಳನ್ನು ಜೈಲಿನಲ್ಲಿ ಅಳವಡಿಸಲಾಗಿತ್ತು. ಅದನ್ನು 5ಜಿ ಆಗಿ ಮೇಲ್ದರ್ಜೆಗೇರಿಸಲು ಟಿಐಸಿಎಲ್ ಸಂಸ್ಥೆಗೆ ವಹಿಸಲಾಗಿತ್ತು. ಅದರಂತೆ 5ಜಿ ಜಾಮರ್ ಉಪಕರಣಗಳನ್ನು ಅಳವಡಿಸಿದ್ದು ಅದನ್ನು ಇಲಾಖೆಯ ವಶಕ್ಕೆ ನೀಡಬೇಕಾದ ಕೆಲಸ ಮಾತ್ರ ಬಾಕಿ ಇತ್ತು. ಅಷ್ಟರಲ್ಲಿ ಜೈಲಿನ ಎ ಮತ್ತು ಬಿ ವಿಭಾಗಗಳಲ್ಲಿ ಜಾಮರ್ ಉಪಕರಣಗಳನ್ನು ಉಪ್ಪು ಸುರಿದು ಕೆಡಿಸಲು ಪ್ರಯತ್ನ ಮಾಡಿದ್ದಾರೆ.
ಈ ಬಗ್ಗೆ ಸಂಸ್ಥೆಯವರು ಕಾರಾಗೃಹ ಇಲಾಖೆ ಮಹಾನಿರ್ದೇಶಕರಿಗೆ ವರದಿ ನೀಡಿದ್ದಾರೆ. ವರದಿಯ ಆಧಾರದಲ್ಲಿ ಜೈಲಿನ ಸಿಸಿ ಕೆಮರಾ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ 9 ಮಂದಿ ವಿಚಾರಣಾಧೀನ ಕೈದಿಗಳು ಜಾಮರ್ ಉಪಕರಣವನ್ನು ಕೆಡಿಸಲು ಯತ್ನಿಸಿರುವುದು ಕಂಡು ಬಂದಿದೆ ಎಂದು ಜೈಲು ಅಧೀಕ್ಷಕರು ತಿಳಿಸಿದ್ದಾರೆ. ಜಾಮರ್ ಅಳವಡಿಸಿದ್ದರಿಂದ ಸ್ಥಳೀಯವಾಗಿ ಆಸುಪಾಸಿನಲ್ಲಿ ಮೊಬೈಲ್ ಸೇವೆಯಲ್ಲಿ ವ್ಯತ್ಯಯವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಜೈಲಿನಲ್ಲಿ ಮೊಬೈಲ್ ಬಳಕೆಗೆ ಅವಕಾಶ ಇಲ್ಲ. ಆದರೂ, ಕೈದಿಗಳು ಅಕ್ರಮವಾಗಿ ಮೊಬೈಲ್ ಬಳಸುತ್ತಿದ್ದಾರೆ ಎನ್ನುವುದು ಆರೋಪ. ಹೀಗಾಗಿ ಮೊಬೈಲ್ ಮೇಲೆ ಕಡಿವಾಣ ಹಾಕಲು ರೇಂಜ್ ಸಿಗದಂತೆ ಮಾಡಲು ಜೈಲು ಅಧೀಕ್ಷಕರು ಪ್ರಬಲ ಜಾಮರ್ ಹಾಕಲು ಮುಂದಾಗಿದ್ದಾರೆ.
Jammer in Mangalore jail, jail inmates try to destroy jammer, Jai authorities file case at barke station.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
20-02-26 11:31 am
Mangalore Correspondent
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm