ಬ್ರೇಕಿಂಗ್ ನ್ಯೂಸ್
08-03-25 06:37 pm Mangalore Correspondent ಕರಾವಳಿ
ಮಂಗಳೂರು, ಮಾ.8 : ದಿಢೀರ್ ನಾಪತ್ತೆಯಾಗಿ ಕುತೂಹಲ ಮೂಡಿಸಿದ್ದ ಫರಂಗಿಪೇಟೆಯ ಪಿಯುಸಿ ವಿದ್ಯಾರ್ಥಿ ದಿಗಂತ್ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ. ಉಡುಪಿ ಅಜ್ಜರಕಾಡಿನ ಡಿ ಮಾರ್ಟ್ ಒಂದರಲ್ಲಿ ಅಪ್ರಾಪ್ತ ಬಾಲಕ ಪತ್ತೆಯಾಗಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ.





ಮನೆಯವರ ಮಾಹಿತಿ ಪ್ರಕಾರ, ಮಧ್ಯಾಹ್ನ 3.30ರ ವೇಳೆಗೆ ತಾಯಿಗೆ ಒಂದು ಫೋನ್ ಕರೆ ಬಂದಿತ್ತು. ಉಡುಪಿಯ ಡಿಮಾರ್ಟ್ ಮ್ಯಾನೇಜರ್ ಫೋನ್ ಮಾಡಿ ದಿಗಂತ್ ಇರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಆನಂತರ, ಆತನೂ ತಾಯಿ ಜೊತೆಗೆ ಮಾತನಾಡಿದ್ದು ತನ್ನನ್ನು ಯಾರೋ ಎತ್ತಾಕ್ಕೊಂಡು ಹೋಗಿದ್ದರು ಎಂದು ಹೇಳಿದ್ದಾನೆ.
ನನಗೇನು ತೊಂದರೆಯಾಗಿಲ್ಲ. ನನ್ನನ್ನು ಹೊತ್ತುಕೊಂಡು ಹೋಗಿದ್ದಾರೆ, ನಾನೇ ನಾಪತ್ತೆಯಾಗುವ ಹುಡುಗ ಅಲ್ಲ. ಎಲ್ಲವನ್ನೂ ನಾನು ಬಂದು ಹೇಳುತ್ತೇನೆ ಎಂದು ದಿಗಂತ್ ತನ್ನ ತಾಯಿ ಬಳಿ ಹೇಳಿಕೊಂಡಿದ್ದಾನೆ. ಕೂಡಲೇ ಬಂಟ್ವಾಳ ಪೊಲೀಸರಿಗೆ ಮನೆಯವರು ಮಾಹಿತಿ ನೀಡಿದ್ದಾರೆ. ಆನಂತರ, ಉಡುಪಿ ಪೊಲೀಸರಿಗೆ ಮಾಹಿತಿ ಕೊಟ್ಟು ಕೂಡಲೇ ಆತನನ್ನು ಅಲ್ಲಿಂದ ವಶಕ್ಕೆ ಪಡೆದಿದ್ದಾರೆ.
12 ದಿನಗಳ ಬಳಿಕ ಶ್ವಾನ ತಂದಿದ್ದರು !
ದಿಗಂತ್ ನಾಪತ್ತೆಯಾಗಿ 12 ದಿನ ಕಳೆದರೂ ಸಿಕ್ಕಿಲ್ಲ ಎನ್ನುವುದು ಪೊಲೀಸರಿಗೆ ತೀವ್ರ ಒತ್ತಡ ಉಂಟು ಮಾಡಿತ್ತು. ವಿಚಿತ್ರ ಅಂದರೆ, 12 ದಿನ ಕಳೆದ ಶನಿವಾರ ಬೆಳಗ್ಗೆ 50ಕ್ಕೂ ಹೆಚ್ಚು ಪೊಲೀಸರು ಫರಂಗಿಪೇಟೆ ಆಸುಪಾಸಿನಲ್ಲಿ ಹುಡುಕಾಟ ನಡೆಸಿದ್ದರು. ಗುಡ್ಡದಲ್ಲಿರುವ ಪೊದೆಗಳು, ರೈಲು ಹಳಿಯ ಆಸುಪಾಸಿನಲ್ಲಿ ಹುಡುಕಾಟ ನಡೆಸಿದ್ದು ಇಷ್ಟು ದಿನಗಳ ಬಳಿಕ ಪೊಲೀಸರು ಇಲ್ಲೇನು ಮಾಡುತ್ತಿದ್ದಾರೆ ಎಂದು ಸ್ಥಳೀಯರು ತಮ್ಮಲ್ಲೇ ಪ್ರಶ್ನೆ ಮಾಡಿಕೊಂಡಿದ್ದರು. ಇದಲ್ಲದೆ, ಪೊಲೀಸ್ ನಾಯಿಯನ್ನೂ ಕರೆತಂದು ಮನೆಯಲ್ಲಿದ್ದ ದಿಗಂತ್ ಹಳೆ ಬಟ್ಟೆಯನ್ನು ಮೂಸಿ ತೋರಿಸಿ ಏನಾದರೂ ಸುಳಿವು ಸಿಗುತ್ತಾ ಎಂದು ಪ್ರಯತ್ನ ಪಟ್ಟಿದ್ದರು. ನಾಪತ್ತೆ ತಿಳಿದ ಒಂದೆರಡು ದಿನದಲ್ಲಿ ಮಾಡಬೇಕಾದ ಕೆಲಸವನ್ನು ಪೊಲೀಸರು 12 ದಿನಗಳ ಬಳಿಕ ಮಾಡಿರುವುದು, ಆರಂಭದಲ್ಲಿ ನಿರ್ಲಕ್ಷ್ಯ ಮಾಡಿದ್ದನ್ನು ಎತ್ತಿತೋರಿಸಿದೆ.
Farangipete Diganth Missing Case Solved, Missing student Found Safe in Udupi After 12 Days. Diganth, a student from Kidebettu, Farangipete, who had mysteriously gone missing, was finally located in Udupi on Saturday, March 8, after nearly 10 days. Police are reportedly in the process of bringing him back to Bantwal.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm