ಬ್ರೇಕಿಂಗ್ ನ್ಯೂಸ್
08-03-25 06:37 pm Mangalore Correspondent ಕರಾವಳಿ
ಮಂಗಳೂರು, ಮಾ.8 : ದಿಢೀರ್ ನಾಪತ್ತೆಯಾಗಿ ಕುತೂಹಲ ಮೂಡಿಸಿದ್ದ ಫರಂಗಿಪೇಟೆಯ ಪಿಯುಸಿ ವಿದ್ಯಾರ್ಥಿ ದಿಗಂತ್ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ. ಉಡುಪಿ ಅಜ್ಜರಕಾಡಿನ ಡಿ ಮಾರ್ಟ್ ಒಂದರಲ್ಲಿ ಅಪ್ರಾಪ್ತ ಬಾಲಕ ಪತ್ತೆಯಾಗಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ.





ಮನೆಯವರ ಮಾಹಿತಿ ಪ್ರಕಾರ, ಮಧ್ಯಾಹ್ನ 3.30ರ ವೇಳೆಗೆ ತಾಯಿಗೆ ಒಂದು ಫೋನ್ ಕರೆ ಬಂದಿತ್ತು. ಉಡುಪಿಯ ಡಿಮಾರ್ಟ್ ಮ್ಯಾನೇಜರ್ ಫೋನ್ ಮಾಡಿ ದಿಗಂತ್ ಇರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಆನಂತರ, ಆತನೂ ತಾಯಿ ಜೊತೆಗೆ ಮಾತನಾಡಿದ್ದು ತನ್ನನ್ನು ಯಾರೋ ಎತ್ತಾಕ್ಕೊಂಡು ಹೋಗಿದ್ದರು ಎಂದು ಹೇಳಿದ್ದಾನೆ.
ನನಗೇನು ತೊಂದರೆಯಾಗಿಲ್ಲ. ನನ್ನನ್ನು ಹೊತ್ತುಕೊಂಡು ಹೋಗಿದ್ದಾರೆ, ನಾನೇ ನಾಪತ್ತೆಯಾಗುವ ಹುಡುಗ ಅಲ್ಲ. ಎಲ್ಲವನ್ನೂ ನಾನು ಬಂದು ಹೇಳುತ್ತೇನೆ ಎಂದು ದಿಗಂತ್ ತನ್ನ ತಾಯಿ ಬಳಿ ಹೇಳಿಕೊಂಡಿದ್ದಾನೆ. ಕೂಡಲೇ ಬಂಟ್ವಾಳ ಪೊಲೀಸರಿಗೆ ಮನೆಯವರು ಮಾಹಿತಿ ನೀಡಿದ್ದಾರೆ. ಆನಂತರ, ಉಡುಪಿ ಪೊಲೀಸರಿಗೆ ಮಾಹಿತಿ ಕೊಟ್ಟು ಕೂಡಲೇ ಆತನನ್ನು ಅಲ್ಲಿಂದ ವಶಕ್ಕೆ ಪಡೆದಿದ್ದಾರೆ.
12 ದಿನಗಳ ಬಳಿಕ ಶ್ವಾನ ತಂದಿದ್ದರು !
ದಿಗಂತ್ ನಾಪತ್ತೆಯಾಗಿ 12 ದಿನ ಕಳೆದರೂ ಸಿಕ್ಕಿಲ್ಲ ಎನ್ನುವುದು ಪೊಲೀಸರಿಗೆ ತೀವ್ರ ಒತ್ತಡ ಉಂಟು ಮಾಡಿತ್ತು. ವಿಚಿತ್ರ ಅಂದರೆ, 12 ದಿನ ಕಳೆದ ಶನಿವಾರ ಬೆಳಗ್ಗೆ 50ಕ್ಕೂ ಹೆಚ್ಚು ಪೊಲೀಸರು ಫರಂಗಿಪೇಟೆ ಆಸುಪಾಸಿನಲ್ಲಿ ಹುಡುಕಾಟ ನಡೆಸಿದ್ದರು. ಗುಡ್ಡದಲ್ಲಿರುವ ಪೊದೆಗಳು, ರೈಲು ಹಳಿಯ ಆಸುಪಾಸಿನಲ್ಲಿ ಹುಡುಕಾಟ ನಡೆಸಿದ್ದು ಇಷ್ಟು ದಿನಗಳ ಬಳಿಕ ಪೊಲೀಸರು ಇಲ್ಲೇನು ಮಾಡುತ್ತಿದ್ದಾರೆ ಎಂದು ಸ್ಥಳೀಯರು ತಮ್ಮಲ್ಲೇ ಪ್ರಶ್ನೆ ಮಾಡಿಕೊಂಡಿದ್ದರು. ಇದಲ್ಲದೆ, ಪೊಲೀಸ್ ನಾಯಿಯನ್ನೂ ಕರೆತಂದು ಮನೆಯಲ್ಲಿದ್ದ ದಿಗಂತ್ ಹಳೆ ಬಟ್ಟೆಯನ್ನು ಮೂಸಿ ತೋರಿಸಿ ಏನಾದರೂ ಸುಳಿವು ಸಿಗುತ್ತಾ ಎಂದು ಪ್ರಯತ್ನ ಪಟ್ಟಿದ್ದರು. ನಾಪತ್ತೆ ತಿಳಿದ ಒಂದೆರಡು ದಿನದಲ್ಲಿ ಮಾಡಬೇಕಾದ ಕೆಲಸವನ್ನು ಪೊಲೀಸರು 12 ದಿನಗಳ ಬಳಿಕ ಮಾಡಿರುವುದು, ಆರಂಭದಲ್ಲಿ ನಿರ್ಲಕ್ಷ್ಯ ಮಾಡಿದ್ದನ್ನು ಎತ್ತಿತೋರಿಸಿದೆ.
Farangipete Diganth Missing Case Solved, Missing student Found Safe in Udupi After 12 Days. Diganth, a student from Kidebettu, Farangipete, who had mysteriously gone missing, was finally located in Udupi on Saturday, March 8, after nearly 10 days. Police are reportedly in the process of bringing him back to Bantwal.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am