ಬ್ರೇಕಿಂಗ್ ನ್ಯೂಸ್
10-03-25 09:16 pm Mangalore Correspondent ಕರಾವಳಿ
ಮಂಗಳೂರು, ಮಾ.10 : ದೇವರಾಜು ಅರಸು ಸರಕಾರದಲ್ಲಿ ಸಚಿವರಾಗಿದ್ದುದಲ್ಲದೆ, ರಾಜ್ಯದಲ್ಲಿ ಭೂಸುಧಾರಣೆ ಕಾಯ್ದೆ ಸಿದ್ಧಪಡಿಸಿ ಜಾರಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾಜಿ ಸಚಿವ ಬಿ.ಸುಬ್ಬಯ್ಯ ಶೆಟ್ಟಿ (91) ಅಲ್ಪಕಾಲದ ಅನಾರೋಗ್ಯದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಾಕ್ರಬೈಲು ಗ್ರಾಮದಲ್ಲಿ 1934ರಲ್ಲಿ ಜನಿಸಿದ್ದ ಸುಬ್ಬಯ್ಯ ಶೆಟ್ಟಿ ಸುರತ್ಕಲ್ ವಿಧಾನಸಭೆ ಕ್ಷೇತ್ರದಲ್ಲಿ 1972ರಿಂದ 1978ರ ಅವಧಿಗೆ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ದೇವರಾಜು ಅರಸು ಸರಕಾರದಲ್ಲಿ ಭೂಸುಧಾರಣಾ ಇಲಾಖೆ ಸಚಿವರಾಗಿ ಕೆಲಸ ಮಾಡಿದ್ದರು. ಅರಸು ಸರಕಾರದಲ್ಲಿ ಭೂಸುಧಾರಣೆ ಕಾಯ್ದೆಯನ್ನು ಸಿದ್ಧಪಡಿಸಿ ಸ್ವತಃ ಅದನ್ನು ಜಾರಿಗೆ ತರುವಲ್ಲಿ ಸುಬ್ಬಯ್ಯ ಶೆಟ್ಟಿ ಶ್ರಮ ಹಾಕಿದ್ದರು.

ಉಳುವವನೇ ಹೊಲದೊಡೆಯ ಎನ್ನುವ ನೀತಿಯಂತೆ, ರೈತರಿಗೆ ಕೃಷಿ ಭೂಮಿಯನ್ನು ನೀಡುವ ಕ್ರಾಂತಿಕಾರಿ ಪರಿಕಲ್ಪನೆಯನ್ನು ಜಾರಿಗೊಳಿಸಲು ಸ್ವತಃ ಭೂಮಾಲೀಕರೂ ಆಗಿದ್ದ ಸುಬ್ಬಯ್ಯ ಶೆಟ್ಟಿ ತಾವೇ ಮೊದಲಾಗಿ ತಮ್ಮ ಭೂಮಿಯನ್ನು ಬಿಟ್ಟುಕೊಟ್ಟು ಮಾದರಿಯಾಗಿದ್ದರು. ಬಳಿಕ ರಾಜ್ಯ ಸರಕಾರದಲ್ಲಿ ಮಾಹಿತಿ, ಇಂಧನ ಹಾಗೂ ಶಿಕ್ಷಣ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಬಳಿಕ ಜನತಾ ಪಕ್ಷವನ್ನು ಸೇರಿ ರಾಜಕೀಯ ಜೀವನದಿಂದ ನಿವೃತ್ತರಾಗಿದ್ದರು.
ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಬಿಎಸ್ಸಿ ಪದವಿ ಹಾಗೂ ಮದ್ರಾಸ್ ವಿವಿಯಿಂದ ಕಾನೂನು ಪದವಿ ಪಡೆದಿದ್ದರು. ಸುಬ್ಬಯ್ಯ ಶೆಟ್ಟಿಯವರಿಗೆ 2014ರಲ್ಲಿ ರಾಜ್ಯ ಸರಕಾರ ದೇವರಾಜ ಅರಸು ಪ್ರಶಸ್ತಿ ನೀಡಿ ಗೌರವಿಸಿತ್ತು. ಶಾಂತವೇರಿ ಗೋಪಾಲ ಗೌಡ, ದರಾ ಬೇಂದ್ರೆ ಪ್ರಶಸ್ತಿಯನ್ನೂ ನೀಡಲಾಗಿತ್ತು. ಅವರ ಪತ್ನಿ ಶಾಲಿನಿ ಶೆಟ್ಟಿ ಇತ್ತೀಚೆಗೆ ನಿಧನರಾಗಿದ್ದರು. ಅವರಿಗೆ ಇಬ್ಬರು ಪುತ್ರಿಯರು ಇದ್ದಾರೆ.
ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಮತ್ತು ಜನಾರ್ದನ ಪೂಜಾರಿಯವರು ಬಿ.ಸುಬ್ಬಯ್ಯ ಶೆಟ್ಟಿ ಸಮಕಾಲೀನರಾಗಿ ರಾಜಕೀಯ ಪ್ರವೇಶ ಮಾಡಿದ್ದರು. ಸುಬ್ಬಯ್ಯ ಶೆಟ್ಟಿ ನಿಧನ ಸುದ್ದಿ ತಿಳಿದು ಆಘಾತವಾಯಿತು. 1972ರಲ್ಲಿ ನಾವು ಜೊತೆಯಾಗಿಯೇ ಶಾಸಕರಾಗಿದ್ದೆವು. ದೇವರಾಜು ಅರಸು ಕಾಲದಲ್ಲಿ ಭೂಸುಧಾರಣೆ ಕಾಯ್ದೆ ಸಿದ್ಧಪಡಿಸುವಲ್ಲಿ ಸುಬ್ಬಯ್ಯ ಶೆಟ್ಟರ ಕೊಡುಗೆ ದೊಡ್ಡದಿದೆ. ಆನಂತರ, ಆ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿ ಮಾಡುವುದರಲ್ಲಿಯೂ ಸುಬ್ಬಯ್ಯ ಶೆಟ್ಟಿ ಶ್ರಮಿಸಿದ್ದಾರೆ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಸಂತಾಪ ಪತ್ರದಲ್ಲಿ ಸ್ಮರಿಸಿದ್ದಾರೆ. ಸುಬ್ಬಯ್ಯ ಶೆಟ್ಟಿ ನಿಧನಕ್ಕೆ ಕಾಂಗ್ರೆಸಿನ ಹಿರಿಯ ನಾಯಕರು ಕಂಬನಿ ಮಿಡಿದಿದ್ದಾರೆ.
Former minister B Subbaiah Shetty (91), a resident of Bakrabailu in Bantwal taluk, passed away at his residence in Bengaluru on March 10. Shetty served as the MLA of Suratkal in two terms, 1972 and 1978, and was a cabinet minister under chief minister Devaraj Urs, holding portfolios of land reforms and education.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
20-02-26 11:31 am
Mangalore Correspondent
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm