ಬ್ರೇಕಿಂಗ್ ನ್ಯೂಸ್
11-03-25 08:42 pm Mangalore Correspondent ಕರಾವಳಿ
ಮಂಗಳೂರು, ಮಾ.11 : ಮಂಗಳೂರಿನಲ್ಲಿರುವ ಇಂಡಿಯನ್ ಸ್ಟ್ರಾಟೆಜಿಕ್ ಪೆಟ್ರೋಲಿಯಂ ರಿಸರ್ವ್ಸ್ ಲಿಮಿಟೆಡ್ (ಐಎಸ್ಪಿಆರ್ಎಲ್)ನ ಕಚ್ಚಾ ತೈಲ ಸಂಗ್ರಹಾಗಾರ ಘಟಕದಲ್ಲಿ ದುಡಿಯುತ್ತಿರುವ ಉದ್ಯೋಗಿಗಳ ವೇತನ ತಾರತಮ್ಯ, ಭತ್ಯೆ-ಭಡ್ತಿ ಸಮಸ್ಯೆಗೆ ವ್ಯವಸ್ಥಿತ ಎಚ್ಆರ್ ನೀತಿ ಅನುಷ್ಠಾನಗೊಳಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವಾಲಯದ ಕಾರ್ಯದರ್ಶಿ ಪಂಕಜ್ ಜೈನ್ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ.
ದೆಹಲಿಯಲ್ಲಿ ಪಂಕಜ್ ಜೈನ್ ಅವರನ್ನು ಭೇಟಿ ಮಾಡಿದ ಸಂಸದ ಚೌಟ, ಸುಮಾರು 8 ವರ್ಷಗಳಿಂದ ಬಗೆಹರಿಯದೆ ತೊಂದರೆ ಅನುಭವಿಸುತ್ತಿರುವ ಮಂಗಳೂರಿನ ಐಎಸ್ಪಿಆರ್ಎಲ್ ಘಟಕದ ಉದ್ಯೋಗಿಗಳ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸುವಂತೆ ಕೋರಿದ್ದಾರೆ. ಜತೆಗೆ, ಈ ಕಚ್ಚಾ ತೈಲ ಸಂಗ್ರಹಾಗಾರ ಘಟಕದಲ್ಲಿ ದುಡಿಯುವ ಉದ್ಯೋಗಿಗಳಿಗೆ ವ್ಯವಸ್ಥಿತ ಮಾನವ ಸಂಪನ್ಮೂಲ ನೀತಿಯಿಲ್ಲದೆ ಏನೆಲ್ಲ ತೊಂದರೆ ಅನುಭವಿಸುತ್ತಿದ್ದಾರೆ ಎಂಬುದರ ಬಗ್ಗೆ ಸುದೀರ್ಘವಾಗಿ ಚರ್ಚಿಸಿ, ಇಲ್ಲಿನ ನೌಕರರು ಎದುರಿಸುತ್ತಿರುವ ಗಂಭೀರ ಔದ್ಯೋಗಿಕ ಸಮಸ್ಯೆಗಳನ್ನು ಕಾರ್ಯದರ್ಶಿಯವರಿಗೆ ಮನವರಿಕೆ ಮಾಡಿದ್ದಾರೆ.



ಸಾರ್ವಜನಿಕ ವಲಯದ ತೈಲ ಸಂಸ್ಥೆಗಳಿಂದ ನಿಯೋಜನೆಗೊಳ್ಳುವ ಅಧಿಕಾರಿಗಳಿಗೆ ಹೋಲಿಸಿದರೆ ಈ ಐಎಸ್ಪಿಆರ್ಎಲ್ ಘಟಕಕ್ಕೆ ನೇರ ನೇಮಕವಾಗುವ ಉದ್ಯೋಗಿಗಳ ವೇತನ ಪಾವತಿ ಹಾಗೂ ಭತ್ಯೆ ನೀಡುವಲ್ಲಿ ಸಾಕಷ್ಟು ತಾರತಮ್ಯ ಮಾಡಲಾಗುತ್ತಿದೆ. ಐಎಸ್ಪಿಆರ್ಎಲ್ನಲ್ಲಿ ಹಲವರು ಸುಮಾರು 5 ವರ್ಷಗಳಿಂದ ಯಾವುದೇ ಭಡ್ತಿ ದೊರೆಯದೆ ಒಂದೇ ಸ್ಥಾನದಲ್ಲಿ ಕೆಲಸ ಮಾಡುತ್ತಿದ್ದಾರೆ. ಕೆಲಸದ ಅವಧಿಯಲ್ಲಿಯೂ ತಾರತಮ್ಯವಿದ್ದು, ಮಂಗಳೂರಿನ ಐಎಸ್ಪಿಆರ್ಎಲ್ನಲ್ಲಿರುವ ಉದ್ಯೋಗಿಗಳು ವಾರಕ್ಕೆ 6 ದಿನ ಕೆಲಸ ಮಾಡಬೇಕು. ಅದೇ ನೋಯ್ಡಾದ ಐಎಸ್ಪಿಆರ್ಎಲ್ ಕೇಂದ್ರ ಕಚೇರಿ ಅಧಿಕಾರಿಗಳಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸ ಮಾಡುವ ಸೌಲಭ್ಯವಿದೆ ಎಂದು ಕ್ಯಾ. ಚೌಟ ಅವರು ಕಾರ್ಯದರ್ಶಿಗಳ ಗಮನ ಸೆಳೆದಿದ್ದಾರೆ.
ಅತ್ಯಂತ ಅಪಾಯಕಾರಿ ಉದ್ಯೋಗದ ಸವಾಲುಗಳಿರುವ ಸ್ಥಳವಾಗಿದ್ದರೂ, ಇಲ್ಲಿನ ಉದ್ಯೋಗಿಗಳಿಗೆ ಸರಿಯಾದ ವೈದ್ಯ ಸೌಲಭ್ಯ, ವಿಮಾ ವ್ಯವಸ್ಥೆ, ಪಿಂಚಣಿ, ಗ್ರಾಚ್ಯುಟಿ, ಶಿಫ್ಟ್ ಭತ್ಯೆ, ಅಪಘಾತ ಪರಿಹಾರ ಸೇರಿ ಯಾವುದೇ ಕಾರ್ಮಿಕ ಸವಲತ್ತುಗಳಿಲ್ಲ. ಬೇರೆ ಕೈಗಾರಿಕೆಗಳಿಗೆ ಹೋಲಿಸಿದರೆ ಐಎಸ್ಪಿಆರ್ಎಲ್ನಲ್ಲಿ ಪಿಡಿಎಫ್ ತರಬೇತಿ ಅವಧಿ ಒಂದರ ಬದಲಿಗೆ ಎರಡು ವರ್ಷಗಳಾಗಿದೆ. ಇದರಿಂದ ಅವರ ವೃತ್ತಿ ಭವಿಷ್ಯಕ್ಕೂ ತೊಂದರೆಯಾಗುತ್ತಿದೆ ಎಂದು ಕ್ಯಾ. ಚೌಟ ಅವರು ಪಂಕಜ್ ಜೈನ್ ಗಮನಕ್ಕೆ ತಂದಿದ್ದಾರೆ.
ದೇಶದ ಇಂಧನ ರಕ್ಷಣೆ ಹಾಗೂ ಭವಿಷ್ಯದ ದೃಷ್ಟಿಯಿಂದ ಐಎಸ್ಪಿಆರ್ಎಲ್ನಲ್ಲಿ ದುಡಿಯುವ ಉದ್ಯೋಗಿಗಳು- ಕಾರ್ಮಿಕರ ಸೇವೆ ಅತ್ಯಂತ ಮಹತ್ವದ್ದಾಗಿದೆ. ಹೀಗಿರುವಾಗ, ಈ ಐಎಸ್ಪಿಆರ್ಎಲ್ ಘಟಕದಲ್ಲಿ ದುಡಿಯುತ್ತಿರುವ ಉದ್ಯೋಗಿಗಳಿಗೆ ಸಮಗ್ರ ಎಚ್ಆರ್(ಮಾನವ ಸಂಪನ್ಮೂಲ) ನೀತಿ ರೂಪಿಸಬೇಕು. ಜತೆಗೆ ವೇತನ ಆದ್ಯತೆ, ಉತ್ತಮ ಸೌಲಭ್ಯ, ಸೇವಾ ಭದ್ರತೆಗಾಗಿ ಈ ಕೂಡಲೇ ಮಧ್ಯಂತರ ಪರಿಹಾರವನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಕ್ಯಾ. ಚೌಟ ಅವರು ಕೋರಿದ್ದಾರೆ.
ಸಂಸದರ ಮನವಿ ಆಲಿಸಿದ ಪಂಕಜ್ ಜೈನ್ ಅವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದು, ಆದಷ್ಟು ಬೇಗ ಮಂಗಳೂರಿನ ಐಎಸ್ಪಿಆರ್ಎಲ್ ಕಚ್ಚಾ ತೈಲ ಸಂಗ್ರಹಾಗಾರ ಘಟಕದ ಉದ್ಯೋಗಿಗಳ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ನೀಡಿದ್ದಾರೆ.
Dakshina Kannada MP Capt Brijesh Chowta met petroleum and natural gas secretary Pankaj Jain in Delhi on Monday, urging immediate intervention in the long-pending concerns of employees at the Indian Strategic Petroleum Reserves Limited (ISPRL) facility in Mangaluru.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am