ಬ್ರೇಕಿಂಗ್ ನ್ಯೂಸ್
11-03-25 10:10 pm Mangalore Correspondent ಕರಾವಳಿ
ಮಂಗಳೂರು, ಮಾ.11: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ರೈಲಿನ ಇಂಜಿನ್ ತಾಂತ್ರಿಕ ವೈಫಲ್ಯದಿಂದ ಕೆಟ್ಟು ಹಳಿಯ ಮಧ್ಯೆ ಬಾಕಿಯಾಗಿದ್ದರಿಂದ ಮಂಗಳವಾರ ಸಂಜೆಯ ವೇಳೆಗೆ ಎರಡು ಗಂಟೆ ಕಾಲ ರೈಲು ಸಂಚಾರ ವ್ಯತ್ಯಯಗೊಂಡು ಪ್ರಯಾಣಿಕರು ತೊಂದರೆ ಅನುಭವಿಸಿದರು.
ಮಂಗಳೂರು – ಚೆನ್ನೈ ಎಕ್ಸ್ ಪ್ರೆಸ್ ರೈಲಿಗೆ ಜೋಡಿಸಲು ಯಾರ್ಡ್ ನಿಂದ ಸಂಜೆ ನಾಲ್ಕು ಗಂಟೆಯ ವೇಳೆಗೆ ಇಂಜಿನ್ ತರಿಸಲಾಗಿತ್ತು. ಇಂಜಿನ್ ಸ್ಟೇಶನ್ ಪ್ಲಾಟ್ ಫಾರಂ ಕಡೆಗೆ ಬರುತ್ತಿದ್ದಾಗಲೇ ಹಳಿಯ ಮಧ್ಯೆ ಕೆಟ್ಟು ನಿಂತಿದ್ದರಿಂದ ಹೋಗುವ ಮತ್ತು ಬರುವ ರೈಲುಗಳ ಸಂಚಾರಕ್ಕೆ ತೊಡಕಾಗಿತ್ತು. ಇದರಿಂದಾಗಿ ತಿರುವನಂತಪುರ ಮತ್ತು ಕೊಯಂಬತ್ತೂರಿನಿಂದ ಬಂದಿದ್ದ ರೈಲು ಉಳ್ಳಾಲದ ನೇತ್ರಾವತಿ ಸೇತುವೆ ಬಳಿಯಲ್ಲೇ ಬಾಕಿಯಾಗಿದ್ದವು. 4.40 ಮತ್ತು 5.20ಕ್ಕೆ ಬಂದಿದ್ದ ರೈಲುಗಳು ಸ್ಟೇಶನ್ ತಲುಪದೆ ಪ್ರಯಾಣಿಕರು ಎರಡು ಗಂಟೆ ಕಾಲ ರೈಲಿನಲ್ಲೇ ಕುಳಿತು ತೊಂದರೆ ಅನುಭವಿಸಿದರು. ಇತ್ತ ಅವರನ್ನು ಬರಮಾಡಿಕೊಳ್ಳಲು ಬಂದಿದ್ದ ಸಂಬಂಧಿಕರು ಕೂಡ ಕಾದು ಕುಳಿತುಕೊಳ್ಳುವಂತಾಗಿತ್ತು.
ಹಳಿಯಲ್ಲಿ ಇಂಜಿನ್ ಕೆಟ್ಟು ನಿಂತಿದ್ದರಿಂದ ಎಲ್ಲ ರೈಲುಗಳಿಗೂ ರೆಡ್ ಸಿಗ್ನಲ್ ನೀಡಲಾಗಿತ್ತು. ಸಂಜೆ 6.45ಕ್ಕೆ ತಾಂತ್ರಿಕ ಸಮಸ್ಯೆ ಸರಿಯಾಗಿದ್ದು, ಬಳಿಕ ಅರ್ಧಕ್ಕೆ ಉಳಿದಿದ್ದ ರೈಲುಗಳಿಗೆ ಬರುವುದಕ್ಕೆ ಅವಕಾಶ ನೀಡಲಾಯಿತು. ಅಷ್ಟರಲ್ಲಿ ಬಹುತೇಕ ಪ್ರಯಾಣಿಕರು ರೈಲಿನಿಂದ ಇಳಿದು ಹಳಿಯಲ್ಲಿ ನಡೆಯುತ್ತ ಬಂದಿದ್ದರು. ವಯಸ್ಸಾದವರು ಮಾತ್ರ ರೈಲಿನಲ್ಲಿ ಉಳಿದುಕೊಂಡಿದ್ದರು. ಇತ್ತ ಮಂಗಳೂರು ಸೆಂಟ್ರಲ್ ಕಡೆಯಿಂದ ನಿರ್ಗಮಿಸುವ ರೈಲುಗಳೂ ವಿಳಂಬವಾಗಿ ಹೊರಟಿದ್ದು, ರಾತ್ರಿ ಎಂಟು ಗಂಟೆ ವೇಳೆಗೆ ಎಲ್ಲವೂ ಸರಿಯಾಯ್ತು ಎಂದು ರೈಲ್ವೇ ಪಿಆರ್ ಓ ದೇವಾನಂದ್ ತಿಳಿಸಿದ್ದಾರೆ.
Train services at Mangalore Central Railway Station faced disruptions today due to a malfunction in the engine of the Mangalore-Chennai Central train. The incident occurred shortly after the train departed from the yard and was preparing to attach to its bogies.
04-05-26 10:33 pm
HK News Desk
ಶೃಂಗೇರಿ ; ದಿಢೀರ್ ಮಾಜಿಯಾದ ಕಾಂಗ್ರೆಸ್ ಶಾಸಕ ರಾಜೇಗ...
04-05-26 07:16 pm
ಮಂಜೇಶ್ವರದಲ್ಲಿ ಮತ ಧ್ರುವೀಕರಣ ; 29,252 ಮತಗಳಿಂದ ಮ...
04-05-26 06:27 pm
ತ್ರಿಕೋನ ಸ್ಪರ್ಧೆ ನಿರೀಕ್ಷಿಸಿದ್ದ ಕಾಸರಗೋಡಿನಲ್ಲಿ ಮ...
04-05-26 04:14 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಟ್ಯಾಂಪರಿಂಗ್ ಆರೋಪ ; ಅ...
03-05-26 01:30 pm
04-05-26 09:51 pm
HK News Staffer
ತಿರುವನಂತಪುರಂ ಜಿಲ್ಲೆಯಲ್ಲೇ ಕಮಲ ಕಮಾಲ್ ; ಮೂರು ಕ್ಷ...
04-05-26 07:04 pm
ದೀದಿ ಕೋಟೆಗೆ ಕಮಲ ಲಗ್ಗೆ ; ಮೂರು ಬಾರಿ ಸಿಎಂ ಮಮತಾ ಸ...
04-05-26 01:16 pm
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm