ಬ್ರೇಕಿಂಗ್ ನ್ಯೂಸ್
09-08-20 11:27 am Mangalore Reporter ಕರಾವಳಿ
ಬಂಟ್ವಾಳ ಆಗಸ್ಟ್ 09: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜೀವ ನದಿ ಉಕ್ಕಿ ಅಪಾಯ ಮಟ್ಟದಲ್ಲಿ ಹರಿಯುತ್ತಿದೆ. ಜಿಲ್ಲೆಯಲ್ಲಿ ಮಳೆ ಪ್ರಮಾಣ ಕೊಂಚ ತಗ್ಗಿದ್ದರೂ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಈ ನಡುವೆ ಬಂಟ್ವಾಳ ಬಳಿ ನೇತ್ರಾವತಿ ನದಿಯಲ್ಲಿ ಯುವಕರು ಮೋಜು ಮಸ್ತಿಯಲ್ಲಿ ತೊಡಗಿರುವುದು ಬೆಳಕಿಗೆ ಬಂದಿದೆ.
ಬಂಟ್ವಾಳದ ಪಾಣೆಮಂಗಳೂರಿನಲ್ಲಿ ಸ್ಥಳೀಯ ಯುವಕರು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಈಜಾಡಿ ಜಲ ಸಾಹಸ ನಡೆಸಿದ್ದಾರೆ.


ಇಲ್ಲಿಯ ಪಾಣೆಮಂಗಳೂರಿನ ಹಳೇ ಉಕ್ಕಿನ ಸೇತುವೆಯ ಮೇಲಿನಿಂದ ಈ ಯುವಕರು ನದಿಗೆ ದುಮುಕುತ್ತಿದ್ದಾರೆ. ಭಯಹುಟ್ಟಿಸುವ ರೀತಿಯಲ್ಲಿ ಯುವಕರು ನದಿ ನೀರಿಗೆ ಧುಮುಕುವ ಹುಚ್ಚು ಸಾಹಸದ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬ್ರಿಟಿಷ್ ಕಾಲದ ಲೋಹದ ಹಳೆ ಸೇತುವೆಯೊಂದು ಪಾಣೆಮಂಗಳೂರಿನಲ್ಲಿದೆ. ಈ ಹಳೇ ಸೇತುವೆಯ ಮೇಲೆ ನಿಂತು ನೇರವಾಗಿ ಅಪಾಯದಮಟ್ಟದಲ್ಲಿ ಹರಿಯುವ ನೇತ್ರಾವತಿ ನದಿ ನೀರಿಗೆ ಈ ಯುವಕರು ಧುಮುಕುತ್ತಿದ್ದಾರೆ. ನದಿಗೆ ಹಾರಿ ಈಜಾಡುವ, ನೀರಾಟ ಆಡುವ ಮೂಲಕ ಸಾಹಸ ಪ್ರದರ್ಶಿಸುವ ದೃಶ್ಯ ವನ್ನು ಮೊಬೈಲ್ ನಲ್ಲಿ ದಾರಿ ಹೋಕ ರೊಬ್ಬರು ಸೆರೆಹಿಡಿದಿದ್ದಾರೆ. ಯುವಕರ ಈ ಹುಚ್ಚಾಟದ ವಿರುದ್ದ ಭಾರೀ ಆಕ್ರೋಶ ವ್ಯಕ್ತವಾಗಿದ್ದು .ಈ ರೀತಿಯ ಹುಚ್ಚಾಟಕ್ಕೆ ಕಡಿವಾಣ ಹಾಕಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.
Video
17-03-26 08:45 pm
HK News Staffer
ಸತತ 4 ದಿನ ಬ್ಯಾಂಕ್ ರಜೆ ಅಲರ್ಟ್ ; EMI, ಚೆಕ್ ಕೆಲ...
17-03-26 12:09 pm
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 10:54 pm
HK News Staffer
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
Controversial Missionary Mohan C. Lazarus’ Ud...
17-03-26 09:19 pm
Mohan Lazarus Udupi: ತಮಿಳುನಾಡಿನ ವಿವಾದಾತ್ಮಕ ಮಿ...
17-03-26 07:35 pm
Inspector Sandesh Suspended: ಮಹಿಳೆಯರ ಜೊತೆಗೆ ದ...
17-03-26 07:16 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am