ಬ್ರೇಕಿಂಗ್ ನ್ಯೂಸ್
12-03-25 06:25 pm Mangalore Correspondent ಕರಾವಳಿ
ಪುತ್ತೂರು, ಮಾ.12 : ಸುಡು ಬಿಸಿಲಿನಿಂದ ಕಂಗೆಟ್ಟಿದ್ದ ಕರಾವಳಿಯ ಕೆಲವು ಕಡೆ ಬೇಸಗೆ ಮಳೆಯಾಗಿದೆ. ಪುತ್ತೂರು ತಾಲೂಕಿನ ಸವಣೂರು, ಸುಳ್ಯ, ಕಡಬ ತಾಲೂಕಿನ ಹಲವೆಡೆ ಮಳೆಯಾಗಿದ್ದು ಸುಟ್ಟು ಹೋಗಿದ್ದ ಇಳೆಗೆ ಮಳೆರಾಯನ ಸಿಂಚನವಾಗಿದೆ.
ಕಳೆದ ಎರಡು ವಾರದಿಂದ ಬಿಸಿಲ ಬೇಗೆ ವಿಪರೀತವಾಗಿ ಏರಿಕೆಯಾಗಿದ್ದು, ಉಷ್ಣಾಂಶ 40 ಸೆಲ್ಸಿಯಸ್ ಗಡಿ ದಾಟಿದೆ. ಮಧ್ಯಾಹ್ನ ವೇಳೆಗೆ ಭಾರೀ ಬಿಸಿಲಿನ ಕಾರಣ ಜನರು ಹೊರಗೆ ಹೋಗದ ಸ್ಥಿತಿಯಾಗಿತ್ತು. ಹಿಂದೆಂದೂ ಕಂಡರಿಯದ ಬಿಸಿಲಿನ ಝಳಕ್ಕೆ ಜನರು ಹೈರಾಣಾಗಿದ್ದರು. ಇದರ ಬೆನ್ನಲೇ ಬುಧವಾರ ಸಂಜೆ ನಾಲ್ಕು ಗಂಟೆ ವೇಳೆಗೆ ಪುತ್ತೂರು, ಸುಳ್ಯ ಆಸುಪಾಸಿನಲ್ಲಿ ಮಳೆ ಸುರಿದಿದ್ದು ಇಳೆಯನ್ನು ತಂಪಾಗಿಸಿದೆ.




ಈ ಹಿಂದೆಲ್ಲ ಮಾರ್ಚ್ ತಿಂಗಳಿನಲ್ಲಿ ಕರಾವಳಿ ಕರ್ನಾಟಕದಲ್ಲಿ ಮಳೆ ಬೀಳುವ ವಾಡಿಕೆ ಇಲ್ಲ. ಆದರೆ ಈ ಬಾರಿ ಕಡಬ, ಸುಳ್ಯ , ಪುತ್ತೂರು ತಾಲೂಕಿನ ಕೆಲವಡೆ ಅರ್ಧ ಗಂಟೆ ಕಾಲ ಮಳೆ ಬಿದ್ದಿದೆ. ಕಡಬ ತಾಲೂಕಿನ ಸವಣೂರು, ಚಾರ್ವಾಕದಲ್ಲಿ ಅರ್ಧ ಗಂಟೆಗೂ ಹೆಚ್ಚು ಮಳೆಯಾಗಿದೆ. ಪುತ್ತೂರು ಪೇಟೆಯಲ್ಲಿ ಹನಿ ಮಳೆಯಾದರೆ ಕೆಲವು ಕಡೆ ಸಿಡಿಲು ಸಹಿತ ಮಳೆಯಾಗಿದೆ. ಗ್ರಾಮೀಣ ಭಾಗದಲ್ಲಿ ಸಾಧಾರಣ ಮಳೆ ಸುರಿದಿದೆ.
ದಿಢೀರ್ ಸುರಿದ ಮಳೆಯಿಂದಾಗಿ, ಆಂಗಳದಲ್ಲಿ ಅಡಿಕೆ ಒಣಗಿಸಲು ಹಾಕಿದ ಕೃಷಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅಕಾಲಿಕ ಮಳೆ ಗೇರು, ಅಡಿಕೆ ಕೃಷಿಗೆ ಮಾರಕವಾಗಿದ್ದು, ಹಿಂಗಾರದಲ್ಲಿ ನೀರು ನಿಂತರೆ ನಾಳೆಯ ಬಿಸಿಲಿಗೆ ಕರಟಿ ಹೋಗುವ ಸಾಧ್ಯತೆಯಿದೆ. ಎಳೆಯ ಅಡಿಕೆ ಉದುರಿ ಬೀಳುವ ಸಾಧ್ಯತೆ ಇರುತ್ತದೆ.
ಭಾರತೀಯ ಹವಾಮಾನ ಇಲಾಖೆ ಮಾರ್ಚ್ 11 ರಿಂದ 4 ದಿನಗಳ ಕಾಲ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿತ್ತು. ಈಗಲೇ ಬಿಸಿಲು ಹೆಚ್ಚಾಗಿರುವುದರಿಂದ ಎಪ್ರಿಲ್ ತಿಂಗಳಿನಲ್ಲಿ ಬಹುತೇಕ ಪೂರ್ವ ಮುಂಗಾರು ರಾಜ್ಯಕ್ಕೆ ಕಾಲಿಡುವ ಸಾಧ್ಯತೆ ಹೆಚ್ಚಾಗಿದೆ.
In a surprising turn of weather, the towns of Sullia and Kadaba in Coastal Karnataka experienced sudden rains, providing much-needed relief from the oppressive heat that has gripped the region in recent days. Residents had been enduring soaring temperatures, with the mercury rising consistently above seasonal norms, leading to discomfort and concerns about health and water scarcity.
04-05-26 10:33 pm
HK News Desk
ಶೃಂಗೇರಿ ; ದಿಢೀರ್ ಮಾಜಿಯಾದ ಕಾಂಗ್ರೆಸ್ ಶಾಸಕ ರಾಜೇಗ...
04-05-26 07:16 pm
ಮಂಜೇಶ್ವರದಲ್ಲಿ ಮತ ಧ್ರುವೀಕರಣ ; 29,252 ಮತಗಳಿಂದ ಮ...
04-05-26 06:27 pm
ತ್ರಿಕೋನ ಸ್ಪರ್ಧೆ ನಿರೀಕ್ಷಿಸಿದ್ದ ಕಾಸರಗೋಡಿನಲ್ಲಿ ಮ...
04-05-26 04:14 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಟ್ಯಾಂಪರಿಂಗ್ ಆರೋಪ ; ಅ...
03-05-26 01:30 pm
04-05-26 09:51 pm
HK News Staffer
ತಿರುವನಂತಪುರಂ ಜಿಲ್ಲೆಯಲ್ಲೇ ಕಮಲ ಕಮಾಲ್ ; ಮೂರು ಕ್ಷ...
04-05-26 07:04 pm
ದೀದಿ ಕೋಟೆಗೆ ಕಮಲ ಲಗ್ಗೆ ; ಮೂರು ಬಾರಿ ಸಿಎಂ ಮಮತಾ ಸ...
04-05-26 01:16 pm
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm