ಬ್ರೇಕಿಂಗ್ ನ್ಯೂಸ್
12-03-25 09:17 pm Udupi Correspondent ಕರಾವಳಿ
ಉಡುಪಿ, ಮಾ.12 : ಇತ್ತೀಚೆಗೆ ಮಣಿಪಾಲದಲ್ಲಿ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಚೇಸಿಂಗ್ ಮಾಡಿಯೂ ತಪ್ಪಿಸಿಕೊಂಡಿದ್ದ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಹಿರಿಯಡ್ಕದಲ್ಲಿ ಮಣಿಪಾಲ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಬುಧವಾರ ಸಂಜೆ ಹಿರಿಯಡ್ಕದಲ್ಲಿರುವ ಮಾಹಿತಿ ಪಡೆದು ಮಣಿಪಾಲ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ, ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ್ದಕ್ಕಾಗಿ ಮಣಿಪಾಲ ಇನ್ಸ್ ಪೆಕ್ಟರ್ ದೇವರಾಜು ಫೈರ್ ಮಾಡಿದ್ದಾರೆ.
ಮಾ.4ರಂದು ಥಾರ್ ಜೀಪಿನಲ್ಲಿ ತನ್ನ ಕಾಸರಗೋಡು ಮೂಲದ ಪ್ರೇಯಸಿ ಜೊತೆಗೆ ಮಣಿಪಾಲಕ್ಕೆ ಬಂದಿದ್ದ ಇಸಾಕ್ ಬಂಧನಕ್ಕೆ ಬೆಂಗಳೂರಿನ ನೆಲಮಂಗಲ ಪೊಲೀಸರು ಬಲೆ ಬೀಸಿದ್ದರು. ದರೋಡೆ ಪ್ರಕರಣದಲ್ಲಿ ಬಂಧನಕ್ಕಾಗಿ ಕಾರ್ಯಾಚರಣೆ ನಡೆಸಿದ್ದರೂ, ಮಣಿಪಾಲ- ಉಡುಪಿ ಮಧ್ಯೆ ಹಲವು ವಾಹನಗಳಿಗೆ ಡಿಕ್ಕಿಯಾಗಿಸಿ ರಾತ್ರಿ ವೇಳೆ ಪರಾರಿಯಾಗಿದ್ದ.

ಆನಂತರ ಉಡುಪಿ ಪೊಲೀಸರು ಆತನ ಪ್ರೇಯಸಿಯನ್ನು ಬಂಧಿಸಿ ಕಸ್ಟಡಿಗೆ ಪಡೆದಿದ್ದರು. ಆದರೆ, ಇಸಾಕ್ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ. ಉಡುಪಿಯಲ್ಲೇ ಇರುವ ಬಗ್ಗೆ ಮಾಹಿತಿ ಪಡೆದು ಕಾರ್ಯಾಚರಣೆ ಮುಂದುವರಿಸಲಾಗಿತ್ತು. ಇದೀಗ ಹಿರಿಯಡ್ಕದಲ್ಲಿ ಪೊಲೀಸರು ಶೂಟೌಟ್ ಮಾಡಿ ಬಂಧನ ಮಾಡಿದ್ದಾರೆ.
ಬೆಂಗಳೂರಿನ ನೆಲಮಂಗಲ ಠಾಣೆ ವ್ಯಾಪ್ತಿಯಲ್ಲಿ ಪುತ್ತೂರು ಮೂಲದ ಉದ್ಯಮಿಯನ್ನು ದರೋಡೆಗೈದ ಬಗ್ಗೆ ಪ್ರಕರಣ ದಾಖಲಾಗಿತ್ತು. ಗರುಡ ಗ್ಯಾಂಗ್ ಸದಸ್ಯರು ಕೃತ್ಯ ನಡೆಸಿರುವ ಮಾಹಿತಿ ಮೇರೆಗೆ ಪೊಲೀಸರು ಇಸಾಕ್ ಬೆನ್ನು ಹತ್ತಿದ್ದರು. ಮಣಿಪಾಲ ಠಾಣೆಯಲ್ಲಿ ಇಸಾಕ್ ಮತ್ತು ಆತನ ಪ್ರೇಯಸಿ ವಿರುದ್ಧ ಕೊಲೆಯತ್ನ ಹಾಗೂ ಆರ್ಮ್ಸ್ ಆಕ್ಟಿನಡಿ ಕೇಸು ದಾಖಲಿಸಲಾಗಿತ್ತು.
Udupi Police open fire on Notorious Garuda Gang criminal Isaac, hospitalised. A shootout took place in Hiriyadka, Udupi, when the police were transporting arrested notorious criminal Isaac, a most-wanted member of the Garuda Gang along with three others. The operation was carried out by Manipal police sub-inspector Devaraj and his team.
04-05-26 10:33 pm
HK News Desk
ಶೃಂಗೇರಿ ; ದಿಢೀರ್ ಮಾಜಿಯಾದ ಕಾಂಗ್ರೆಸ್ ಶಾಸಕ ರಾಜೇಗ...
04-05-26 07:16 pm
ಮಂಜೇಶ್ವರದಲ್ಲಿ ಮತ ಧ್ರುವೀಕರಣ ; 29,252 ಮತಗಳಿಂದ ಮ...
04-05-26 06:27 pm
ತ್ರಿಕೋನ ಸ್ಪರ್ಧೆ ನಿರೀಕ್ಷಿಸಿದ್ದ ಕಾಸರಗೋಡಿನಲ್ಲಿ ಮ...
04-05-26 04:14 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಟ್ಯಾಂಪರಿಂಗ್ ಆರೋಪ ; ಅ...
03-05-26 01:30 pm
04-05-26 09:51 pm
HK News Staffer
ತಿರುವನಂತಪುರಂ ಜಿಲ್ಲೆಯಲ್ಲೇ ಕಮಲ ಕಮಾಲ್ ; ಮೂರು ಕ್ಷ...
04-05-26 07:04 pm
ದೀದಿ ಕೋಟೆಗೆ ಕಮಲ ಲಗ್ಗೆ ; ಮೂರು ಬಾರಿ ಸಿಎಂ ಮಮತಾ ಸ...
04-05-26 01:16 pm
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm