ಬ್ರೇಕಿಂಗ್ ನ್ಯೂಸ್
12-03-25 09:17 pm Udupi Correspondent ಕರಾವಳಿ
ಉಡುಪಿ, ಮಾ.12 : ಇತ್ತೀಚೆಗೆ ಮಣಿಪಾಲದಲ್ಲಿ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಚೇಸಿಂಗ್ ಮಾಡಿಯೂ ತಪ್ಪಿಸಿಕೊಂಡಿದ್ದ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಹಿರಿಯಡ್ಕದಲ್ಲಿ ಮಣಿಪಾಲ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಬುಧವಾರ ಸಂಜೆ ಹಿರಿಯಡ್ಕದಲ್ಲಿರುವ ಮಾಹಿತಿ ಪಡೆದು ಮಣಿಪಾಲ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ, ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ್ದಕ್ಕಾಗಿ ಮಣಿಪಾಲ ಇನ್ಸ್ ಪೆಕ್ಟರ್ ದೇವರಾಜು ಫೈರ್ ಮಾಡಿದ್ದಾರೆ.
ಮಾ.4ರಂದು ಥಾರ್ ಜೀಪಿನಲ್ಲಿ ತನ್ನ ಕಾಸರಗೋಡು ಮೂಲದ ಪ್ರೇಯಸಿ ಜೊತೆಗೆ ಮಣಿಪಾಲಕ್ಕೆ ಬಂದಿದ್ದ ಇಸಾಕ್ ಬಂಧನಕ್ಕೆ ಬೆಂಗಳೂರಿನ ನೆಲಮಂಗಲ ಪೊಲೀಸರು ಬಲೆ ಬೀಸಿದ್ದರು. ದರೋಡೆ ಪ್ರಕರಣದಲ್ಲಿ ಬಂಧನಕ್ಕಾಗಿ ಕಾರ್ಯಾಚರಣೆ ನಡೆಸಿದ್ದರೂ, ಮಣಿಪಾಲ- ಉಡುಪಿ ಮಧ್ಯೆ ಹಲವು ವಾಹನಗಳಿಗೆ ಡಿಕ್ಕಿಯಾಗಿಸಿ ರಾತ್ರಿ ವೇಳೆ ಪರಾರಿಯಾಗಿದ್ದ.

ಆನಂತರ ಉಡುಪಿ ಪೊಲೀಸರು ಆತನ ಪ್ರೇಯಸಿಯನ್ನು ಬಂಧಿಸಿ ಕಸ್ಟಡಿಗೆ ಪಡೆದಿದ್ದರು. ಆದರೆ, ಇಸಾಕ್ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ. ಉಡುಪಿಯಲ್ಲೇ ಇರುವ ಬಗ್ಗೆ ಮಾಹಿತಿ ಪಡೆದು ಕಾರ್ಯಾಚರಣೆ ಮುಂದುವರಿಸಲಾಗಿತ್ತು. ಇದೀಗ ಹಿರಿಯಡ್ಕದಲ್ಲಿ ಪೊಲೀಸರು ಶೂಟೌಟ್ ಮಾಡಿ ಬಂಧನ ಮಾಡಿದ್ದಾರೆ.
ಬೆಂಗಳೂರಿನ ನೆಲಮಂಗಲ ಠಾಣೆ ವ್ಯಾಪ್ತಿಯಲ್ಲಿ ಪುತ್ತೂರು ಮೂಲದ ಉದ್ಯಮಿಯನ್ನು ದರೋಡೆಗೈದ ಬಗ್ಗೆ ಪ್ರಕರಣ ದಾಖಲಾಗಿತ್ತು. ಗರುಡ ಗ್ಯಾಂಗ್ ಸದಸ್ಯರು ಕೃತ್ಯ ನಡೆಸಿರುವ ಮಾಹಿತಿ ಮೇರೆಗೆ ಪೊಲೀಸರು ಇಸಾಕ್ ಬೆನ್ನು ಹತ್ತಿದ್ದರು. ಮಣಿಪಾಲ ಠಾಣೆಯಲ್ಲಿ ಇಸಾಕ್ ಮತ್ತು ಆತನ ಪ್ರೇಯಸಿ ವಿರುದ್ಧ ಕೊಲೆಯತ್ನ ಹಾಗೂ ಆರ್ಮ್ಸ್ ಆಕ್ಟಿನಡಿ ಕೇಸು ದಾಖಲಿಸಲಾಗಿತ್ತು.
Udupi Police open fire on Notorious Garuda Gang criminal Isaac, hospitalised. A shootout took place in Hiriyadka, Udupi, when the police were transporting arrested notorious criminal Isaac, a most-wanted member of the Garuda Gang along with three others. The operation was carried out by Manipal police sub-inspector Devaraj and his team.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 04:43 pm
HK News Staffer
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm