ಬ್ರೇಕಿಂಗ್ ನ್ಯೂಸ್
13-03-25 09:20 pm Mangalore Correspondent ಕರಾವಳಿ
ಮಂಗಳೂರು, ಮಾ.13 : ನಗರದ ಬಿಜೈ ಕಾಪಿಕಾಡಿನಲ್ಲಿ ನಿವೃತ್ತ ಬಿಎಸ್ಸೆನ್ನೆಲ್ ಉದ್ಯೋಗಿಯೊಬ್ಬರು ಹಳೆ ದ್ವೇಷದಲ್ಲಿ ನೆರೆಮನೆಯಾತನನ್ನು ಕೊಲ್ಲುವ ಉದ್ದೇಶದಿಂದ ಕಾರನ್ನು ವೇಗವಾಗಿ ಚಲಾಯಿಸಿ ಬೈಕ್ ಮತ್ತು ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿಯಾಗಿಸಿದ ಘಟನೆ ನಡೆದಿದ್ದು ಕೃತ್ಯದ ವಿಡಿಯೋ ಸೆರೆಯಾಗಿದೆ.
ಬಿಎಸ್ಸೆನ್ನೆಲ್ ಉದ್ಯೋಗಿ ಸತೀಶ್ ಕುಮಾರ್ ಮತ್ತು ಮುರಳಿ ಪ್ರಸಾದ್ ಎಂಬವರು ಅಕ್ಕಪಕ್ಕದ ನಿವಾಸಿಗಳಾಗಿದ್ದು ಯಾವುದೋ ವಿಚಾರಕ್ಕೆ ಜಗಳ ಉಂಟಾಗಿತ್ತು. ಆನಂತರ, ಎಲ್ಲಿ ಸಿಕ್ಕರೂ ಬೈದುಕೊಂಡು ಸಾಗುತ್ತಿದ್ದರು. ಇದೇ ಕೋಪದಲ್ಲಿ ಬೈಕಿನಲ್ಲಿ ಮನೆಯತ್ತ ಬರುತ್ತಿದ್ದ ಮುರಳಿಯನ್ನು ಕೊಲ್ಲುವ ಉದ್ದೇಶದಿಂದ ಸತೀಶ್ ಕುಮಾರ್ ತನ್ನ 800 ಕಾರಿನಲ್ಲಿ ಹಿಂಬದಿಯಿಂದ ವೇಗವಾಗಿ ಚಲಾಯಿಸಿಕೊಂಡು ಬಂದಿದ್ದು ಡಿಕ್ಕುಪಡಿಸಿದ್ದಾನೆ. ಬಿಜೈ ಆರನೇ ಕ್ರಾಸ್ ನಲ್ಲಿ ಬೈಕ್ ಸವಾರ ಮುಂದಿನಿಂದ ಹೋಗುತ್ತಿದ್ದಾಗ ಅತಿ ವೇಗದಿಂದ ಬಂದ ಕಾರು ಬೈಕಿಗೆ ಡಿಕ್ಕಿಪಡಿಸಿದ್ದಲ್ಲದೆ, ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಗೂ ಡಿಕ್ಕಿಯಾಗಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.


ಘಟನೆಯಲ್ಲಿ ಬೈಕ್ ಸವಾರ ಮುರುಳಿ ಅಲ್ಪಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದರೆ, ಮಹಿಳೆ ಕಾಂಪೌಂಡ್ ಗೋಡೆಯ ಮೇಲಕ್ಕೆ ಎಸೆಯಲ್ಪಟ್ಟು ತಲೆ ಕೆಳಗಾಗಿ ಸಿಕ್ಕಿಕೊಂಡಿದ್ದಾರೆ. ಆನಂತರ ಸ್ಥಳೀಯ ನಿವಾಸಿಗಳು ಓಡಿ ಬಂದು ಗೋಡೆಯಲ್ಲಿ ಸಿಕ್ಕಿಕೊಂಡಿದ್ದ ಮಹಿಳೆಯನ್ನು ಕೆಳಕ್ಕಿಳಿಸಿ ಉಪಚರಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವರ ಕಾಲಿಗೆ ಗಂಭೀರ ಗಾಯವಾಗಿದೆ.
ಉರ್ವಾ ಪೊಲೀಸರು ಆರೋಪಿ ಸತೀಶ್ ಕುಮಾರ್ ವಿರುದ್ಧ ಕೊಲೆಯತ್ನ ಕೇಸು ದಾಖಲಿಸಿದ್ದು ಬಂಧಿಸಿದ್ದಾರೆ. ಆತನ ಕಾರನ್ನೂ ವಶಕ್ಕೆ ಪಡೆದಿದ್ದಾರೆ. 2023ರಲ್ಲಿ ಮುರುಳಿ ಪ್ರಸಾದ್ ಅವರ ತಂದೆ ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿ ಸತೀಶ್ ತಾಗಿಸಿಕೊಂಡು ಸಾಗಿದ್ದು ಉರ್ವಾದಲ್ಲಿ ಕೇಸು ದಾಖಲಾಗಿತ್ತು. ಇದೀಗ ಕೊಲೆ ಮಾಡುವ ಉದ್ದೇಶದಿಂದ ಮುರುಳಿ ಪ್ರಸಾದ್ ಮೇಲೆ ಕಾರನ್ನು ಡಿಕ್ಕಿಯಾಗಿಸಿದ್ದಾರೆ. ಈ ಬಗ್ಗೆ ಉರ್ವಾ ಠಾಣೆಯಲ್ಲಿ ಕೊಲೆಯತ್ನ ಮತ್ತು ಪಶ್ಚಿಮ ಸಂಚಾರಿ ಠಾಣೆಯಲ್ಲಿ ಮಹಿಳೆಗೆ ಡಿಕ್ಕಿ ಪಡಿಸಿದ ಬಗ್ಗೆ ಪ್ರಕರಣ ದಾಖಲಾಗಿದೆ.
#Mangalore #accident at #kapikad, Speeding Car Crashes into Cyclist, Woman Thrown Against Wall in Attempted #Murder Case pic.twitter.com/J3iYReOATK
— Headline Karnataka (@hknewsonline) March 13, 2025
Mangalore accident at kapikad, Speeding Car Crashes into Cyclist, Woman Thrown Against Wall in Attempted Murder Case.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm