ಬ್ರೇಕಿಂಗ್ ನ್ಯೂಸ್
13-03-25 09:20 pm Mangalore Correspondent ಕರಾವಳಿ
ಮಂಗಳೂರು, ಮಾ.13 : ನಗರದ ಬಿಜೈ ಕಾಪಿಕಾಡಿನಲ್ಲಿ ನಿವೃತ್ತ ಬಿಎಸ್ಸೆನ್ನೆಲ್ ಉದ್ಯೋಗಿಯೊಬ್ಬರು ಹಳೆ ದ್ವೇಷದಲ್ಲಿ ನೆರೆಮನೆಯಾತನನ್ನು ಕೊಲ್ಲುವ ಉದ್ದೇಶದಿಂದ ಕಾರನ್ನು ವೇಗವಾಗಿ ಚಲಾಯಿಸಿ ಬೈಕ್ ಮತ್ತು ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿಯಾಗಿಸಿದ ಘಟನೆ ನಡೆದಿದ್ದು ಕೃತ್ಯದ ವಿಡಿಯೋ ಸೆರೆಯಾಗಿದೆ.
ಬಿಎಸ್ಸೆನ್ನೆಲ್ ಉದ್ಯೋಗಿ ಸತೀಶ್ ಕುಮಾರ್ ಮತ್ತು ಮುರಳಿ ಪ್ರಸಾದ್ ಎಂಬವರು ಅಕ್ಕಪಕ್ಕದ ನಿವಾಸಿಗಳಾಗಿದ್ದು ಯಾವುದೋ ವಿಚಾರಕ್ಕೆ ಜಗಳ ಉಂಟಾಗಿತ್ತು. ಆನಂತರ, ಎಲ್ಲಿ ಸಿಕ್ಕರೂ ಬೈದುಕೊಂಡು ಸಾಗುತ್ತಿದ್ದರು. ಇದೇ ಕೋಪದಲ್ಲಿ ಬೈಕಿನಲ್ಲಿ ಮನೆಯತ್ತ ಬರುತ್ತಿದ್ದ ಮುರಳಿಯನ್ನು ಕೊಲ್ಲುವ ಉದ್ದೇಶದಿಂದ ಸತೀಶ್ ಕುಮಾರ್ ತನ್ನ 800 ಕಾರಿನಲ್ಲಿ ಹಿಂಬದಿಯಿಂದ ವೇಗವಾಗಿ ಚಲಾಯಿಸಿಕೊಂಡು ಬಂದಿದ್ದು ಡಿಕ್ಕುಪಡಿಸಿದ್ದಾನೆ. ಬಿಜೈ ಆರನೇ ಕ್ರಾಸ್ ನಲ್ಲಿ ಬೈಕ್ ಸವಾರ ಮುಂದಿನಿಂದ ಹೋಗುತ್ತಿದ್ದಾಗ ಅತಿ ವೇಗದಿಂದ ಬಂದ ಕಾರು ಬೈಕಿಗೆ ಡಿಕ್ಕಿಪಡಿಸಿದ್ದಲ್ಲದೆ, ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಗೂ ಡಿಕ್ಕಿಯಾಗಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.


ಘಟನೆಯಲ್ಲಿ ಬೈಕ್ ಸವಾರ ಮುರುಳಿ ಅಲ್ಪಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದರೆ, ಮಹಿಳೆ ಕಾಂಪೌಂಡ್ ಗೋಡೆಯ ಮೇಲಕ್ಕೆ ಎಸೆಯಲ್ಪಟ್ಟು ತಲೆ ಕೆಳಗಾಗಿ ಸಿಕ್ಕಿಕೊಂಡಿದ್ದಾರೆ. ಆನಂತರ ಸ್ಥಳೀಯ ನಿವಾಸಿಗಳು ಓಡಿ ಬಂದು ಗೋಡೆಯಲ್ಲಿ ಸಿಕ್ಕಿಕೊಂಡಿದ್ದ ಮಹಿಳೆಯನ್ನು ಕೆಳಕ್ಕಿಳಿಸಿ ಉಪಚರಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವರ ಕಾಲಿಗೆ ಗಂಭೀರ ಗಾಯವಾಗಿದೆ.
ಉರ್ವಾ ಪೊಲೀಸರು ಆರೋಪಿ ಸತೀಶ್ ಕುಮಾರ್ ವಿರುದ್ಧ ಕೊಲೆಯತ್ನ ಕೇಸು ದಾಖಲಿಸಿದ್ದು ಬಂಧಿಸಿದ್ದಾರೆ. ಆತನ ಕಾರನ್ನೂ ವಶಕ್ಕೆ ಪಡೆದಿದ್ದಾರೆ. 2023ರಲ್ಲಿ ಮುರುಳಿ ಪ್ರಸಾದ್ ಅವರ ತಂದೆ ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿ ಸತೀಶ್ ತಾಗಿಸಿಕೊಂಡು ಸಾಗಿದ್ದು ಉರ್ವಾದಲ್ಲಿ ಕೇಸು ದಾಖಲಾಗಿತ್ತು. ಇದೀಗ ಕೊಲೆ ಮಾಡುವ ಉದ್ದೇಶದಿಂದ ಮುರುಳಿ ಪ್ರಸಾದ್ ಮೇಲೆ ಕಾರನ್ನು ಡಿಕ್ಕಿಯಾಗಿಸಿದ್ದಾರೆ. ಈ ಬಗ್ಗೆ ಉರ್ವಾ ಠಾಣೆಯಲ್ಲಿ ಕೊಲೆಯತ್ನ ಮತ್ತು ಪಶ್ಚಿಮ ಸಂಚಾರಿ ಠಾಣೆಯಲ್ಲಿ ಮಹಿಳೆಗೆ ಡಿಕ್ಕಿ ಪಡಿಸಿದ ಬಗ್ಗೆ ಪ್ರಕರಣ ದಾಖಲಾಗಿದೆ.
#Mangalore #accident at #kapikad, Speeding Car Crashes into Cyclist, Woman Thrown Against Wall in Attempted #Murder Case pic.twitter.com/J3iYReOATK
— Headline Karnataka (@hknewsonline) March 13, 2025
Mangalore accident at kapikad, Speeding Car Crashes into Cyclist, Woman Thrown Against Wall in Attempted Murder Case.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
20-02-26 02:31 pm
Mangalore Correspondent
ಅಂತಾರಾಜ್ಯ ಮಾದಕ ವಸ್ತು ಮಾರಾಟ ಜಾಲದ ಆರೋಪಿಗಳು ವಶಕ್...
20-02-26 11:31 am
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm