ಬ್ರೇಕಿಂಗ್ ನ್ಯೂಸ್
13-03-25 09:20 pm Mangalore Correspondent ಕರಾವಳಿ
ಮಂಗಳೂರು, ಮಾ.13 : ನಗರದ ಬಿಜೈ ಕಾಪಿಕಾಡಿನಲ್ಲಿ ನಿವೃತ್ತ ಬಿಎಸ್ಸೆನ್ನೆಲ್ ಉದ್ಯೋಗಿಯೊಬ್ಬರು ಹಳೆ ದ್ವೇಷದಲ್ಲಿ ನೆರೆಮನೆಯಾತನನ್ನು ಕೊಲ್ಲುವ ಉದ್ದೇಶದಿಂದ ಕಾರನ್ನು ವೇಗವಾಗಿ ಚಲಾಯಿಸಿ ಬೈಕ್ ಮತ್ತು ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿಯಾಗಿಸಿದ ಘಟನೆ ನಡೆದಿದ್ದು ಕೃತ್ಯದ ವಿಡಿಯೋ ಸೆರೆಯಾಗಿದೆ.
ಬಿಎಸ್ಸೆನ್ನೆಲ್ ಉದ್ಯೋಗಿ ಸತೀಶ್ ಕುಮಾರ್ ಮತ್ತು ಮುರಳಿ ಪ್ರಸಾದ್ ಎಂಬವರು ಅಕ್ಕಪಕ್ಕದ ನಿವಾಸಿಗಳಾಗಿದ್ದು ಯಾವುದೋ ವಿಚಾರಕ್ಕೆ ಜಗಳ ಉಂಟಾಗಿತ್ತು. ಆನಂತರ, ಎಲ್ಲಿ ಸಿಕ್ಕರೂ ಬೈದುಕೊಂಡು ಸಾಗುತ್ತಿದ್ದರು. ಇದೇ ಕೋಪದಲ್ಲಿ ಬೈಕಿನಲ್ಲಿ ಮನೆಯತ್ತ ಬರುತ್ತಿದ್ದ ಮುರಳಿಯನ್ನು ಕೊಲ್ಲುವ ಉದ್ದೇಶದಿಂದ ಸತೀಶ್ ಕುಮಾರ್ ತನ್ನ 800 ಕಾರಿನಲ್ಲಿ ಹಿಂಬದಿಯಿಂದ ವೇಗವಾಗಿ ಚಲಾಯಿಸಿಕೊಂಡು ಬಂದಿದ್ದು ಡಿಕ್ಕುಪಡಿಸಿದ್ದಾನೆ. ಬಿಜೈ ಆರನೇ ಕ್ರಾಸ್ ನಲ್ಲಿ ಬೈಕ್ ಸವಾರ ಮುಂದಿನಿಂದ ಹೋಗುತ್ತಿದ್ದಾಗ ಅತಿ ವೇಗದಿಂದ ಬಂದ ಕಾರು ಬೈಕಿಗೆ ಡಿಕ್ಕಿಪಡಿಸಿದ್ದಲ್ಲದೆ, ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಗೂ ಡಿಕ್ಕಿಯಾಗಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.


ಘಟನೆಯಲ್ಲಿ ಬೈಕ್ ಸವಾರ ಮುರುಳಿ ಅಲ್ಪಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದರೆ, ಮಹಿಳೆ ಕಾಂಪೌಂಡ್ ಗೋಡೆಯ ಮೇಲಕ್ಕೆ ಎಸೆಯಲ್ಪಟ್ಟು ತಲೆ ಕೆಳಗಾಗಿ ಸಿಕ್ಕಿಕೊಂಡಿದ್ದಾರೆ. ಆನಂತರ ಸ್ಥಳೀಯ ನಿವಾಸಿಗಳು ಓಡಿ ಬಂದು ಗೋಡೆಯಲ್ಲಿ ಸಿಕ್ಕಿಕೊಂಡಿದ್ದ ಮಹಿಳೆಯನ್ನು ಕೆಳಕ್ಕಿಳಿಸಿ ಉಪಚರಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವರ ಕಾಲಿಗೆ ಗಂಭೀರ ಗಾಯವಾಗಿದೆ.
ಉರ್ವಾ ಪೊಲೀಸರು ಆರೋಪಿ ಸತೀಶ್ ಕುಮಾರ್ ವಿರುದ್ಧ ಕೊಲೆಯತ್ನ ಕೇಸು ದಾಖಲಿಸಿದ್ದು ಬಂಧಿಸಿದ್ದಾರೆ. ಆತನ ಕಾರನ್ನೂ ವಶಕ್ಕೆ ಪಡೆದಿದ್ದಾರೆ. 2023ರಲ್ಲಿ ಮುರುಳಿ ಪ್ರಸಾದ್ ಅವರ ತಂದೆ ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿ ಸತೀಶ್ ತಾಗಿಸಿಕೊಂಡು ಸಾಗಿದ್ದು ಉರ್ವಾದಲ್ಲಿ ಕೇಸು ದಾಖಲಾಗಿತ್ತು. ಇದೀಗ ಕೊಲೆ ಮಾಡುವ ಉದ್ದೇಶದಿಂದ ಮುರುಳಿ ಪ್ರಸಾದ್ ಮೇಲೆ ಕಾರನ್ನು ಡಿಕ್ಕಿಯಾಗಿಸಿದ್ದಾರೆ. ಈ ಬಗ್ಗೆ ಉರ್ವಾ ಠಾಣೆಯಲ್ಲಿ ಕೊಲೆಯತ್ನ ಮತ್ತು ಪಶ್ಚಿಮ ಸಂಚಾರಿ ಠಾಣೆಯಲ್ಲಿ ಮಹಿಳೆಗೆ ಡಿಕ್ಕಿ ಪಡಿಸಿದ ಬಗ್ಗೆ ಪ್ರಕರಣ ದಾಖಲಾಗಿದೆ.
#Mangalore #accident at #kapikad, Speeding Car Crashes into Cyclist, Woman Thrown Against Wall in Attempted #Murder Case pic.twitter.com/J3iYReOATK
— Headline Karnataka (@hknewsonline) March 13, 2025
Mangalore accident at kapikad, Speeding Car Crashes into Cyclist, Woman Thrown Against Wall in Attempted Murder Case.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am