ಬ್ರೇಕಿಂಗ್ ನ್ಯೂಸ್
14-03-25 11:02 am Mangalore Correspondent ಕರಾವಳಿ
ಉಳ್ಳಾಲ, ಮಾ.14 : ಕಳೆದ ಕೆಲ ದಶಕಗಳಿಂದ ತುಳು ರಂಗಭೂಮಿಯಲ್ಲದೆ, ತುಳು ಚಿತ್ರರಂಗದಲ್ಲೂ ಕಲಾರಸಿಕರನ್ನ ತನ್ನ ಕುಬ್ಜ ದೇಹದಿಂದಲೇ ರಂಜಿಸುತ್ತಿದ್ದ ಪ್ರಚಂಡ ಕುಳ್ಳ ಖ್ಯಾತಿಯ ವಿವೇಕ್ ಮಾಡೂರು(52) ಇಂದು ಬೆಳಗ್ಗೆ ಹೃದಯಾಘಾತದಿಂದ ಮಾಡೂರಿನ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ನಿನ್ನೆ ರಾತ್ರಿ ಮನೆಯ ಶೌಚಾಲಯದಲ್ಲಿ ವಿವೇಕ್ ಅವರು ಬಿದ್ದಿದ್ದರಂತೆ. ಬಳಿಕ ವಿವೇಕ್ ಅವರು ನಿದ್ದೆಗೆ ಜಾರಿ ವಿಶ್ರಾಂತಿ ಪಡೆದಿದ್ದು ಬೆಳಗ್ಗೆ ಮನೆ ಮಂದಿ ಎಬ್ಬಿಸಲು ಹೋದಾಗ ಮೃತಪಟ್ಟಿದ್ದಾರೆ. ಮೃತ ವಿವೇಕ್ ಅವರು ಪತ್ನಿ ವೇದಾವತಿ ಜೊತೆ ಮಾಡೂರಿನ ಸಹೋದರನ ಮನೆಯಲ್ಲಿ ವಾಸವಾಗಿದ್ದರು. ಈ ಹಿಂದೆ ಟೆಲಿಫೋನ್ ಎಸ್ ಟಿಡಿ ಬೂತ್ ನಡೆಸುತ್ತಿದ್ದ ವಿವೇಕ್ ಅವರು ಬೂತ್ ಮುಚ್ಚಿದ ಬಳಿಕ ಅಣ್ಣನ ದಿನಸಿ ಅಂಗಡಿಯಲ್ಲೇ ಪ್ಲಾಸ್ಟಿಕ್ ಮನೆ ಬಳಕೆಯ ಸಾಮಾಗ್ರಿಗಳನ್ನ ಮಾರಾಟ ನಡೆಸುತ್ತಿದ್ದರು.

ವೃತ್ತಿಪರ ಹಾಸ್ಯ ಕಲಾವಿದರಾಗಿದ್ದ ವಿವೇಕ್ ಅವರು ಕರಾವಳಿಯ ಹೆಸರಾಂತ ನಾಟಕ ತಂಡಗಳಲ್ಲಿ ಅಭಿನಯಿಸಿದ್ದಲ್ಲದೆ, ತುಳು ಚಿತ್ರಗಳಲ್ಲಿ ಕೋಸ್ಟಲ್ ವುಡ್ ಮೇರು ಕಲಾವಿದರೊಂದಿಗೆ ನಟಿಸಿದ್ದಾರೆ. ತುಳು ನಾಟಕ ಕಲಾವಿದರ ಒಕ್ಕೂಟದಲ್ಲೂ ಅವರು ಸದಸ್ಯರಾಗಿದ್ದರು. ವಿವೇಕ್ ಅವರ ಕಲಾ ಪ್ರಾವೀಣ್ಯತೆಗೆ ಅನೇಕ ಸಂಘ, ಸಂಸ್ಥೆಗಳು ಸನ್ಮಾನಿಸಿ ಗೌರವಿಸಿದೆ. ಅವರ ಅಕಾಲಿಕ ಅಗಲಿಕೆಗೆ ತುಳು ರಂಗಭೂಮಿ, ಕೋಸ್ಟಲ್ ವುಡ್ ಕಲಾವಿದರು ಸಂತಾಪ ವ್ಯಕ್ತಪಡಿಸಿದ್ದಾರೆ.
Tributes Pour In as Legendary Mangalore tulu Artist Vivek Madur Passes Away from Heart Attack.
04-05-26 10:33 pm
HK News Desk
ಶೃಂಗೇರಿ ; ದಿಢೀರ್ ಮಾಜಿಯಾದ ಕಾಂಗ್ರೆಸ್ ಶಾಸಕ ರಾಜೇಗ...
04-05-26 07:16 pm
ಮಂಜೇಶ್ವರದಲ್ಲಿ ಮತ ಧ್ರುವೀಕರಣ ; 29,252 ಮತಗಳಿಂದ ಮ...
04-05-26 06:27 pm
ತ್ರಿಕೋನ ಸ್ಪರ್ಧೆ ನಿರೀಕ್ಷಿಸಿದ್ದ ಕಾಸರಗೋಡಿನಲ್ಲಿ ಮ...
04-05-26 04:14 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಟ್ಯಾಂಪರಿಂಗ್ ಆರೋಪ ; ಅ...
03-05-26 01:30 pm
04-05-26 09:51 pm
HK News Staffer
ತಿರುವನಂತಪುರಂ ಜಿಲ್ಲೆಯಲ್ಲೇ ಕಮಲ ಕಮಾಲ್ ; ಮೂರು ಕ್ಷ...
04-05-26 07:04 pm
ದೀದಿ ಕೋಟೆಗೆ ಕಮಲ ಲಗ್ಗೆ ; ಮೂರು ಬಾರಿ ಸಿಎಂ ಮಮತಾ ಸ...
04-05-26 01:16 pm
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm