ಬ್ರೇಕಿಂಗ್ ನ್ಯೂಸ್
18-12-20 10:56 am Mangalore Correspondent ಕರಾವಳಿ
ಮಂಗಳೂರು, ಡಿ.18 : ಸುರತ್ಕಲ್ ಸಮೀಪದ ಶಿಬರೂರು ಕೊಡಮಣಿತ್ತಾಯ ದೈವಸ್ಥಾನದ ವರ್ಷಾವಧಿ ಉತ್ಸವದಲ್ಲಿ ಸರಕಾರದ ಕೊರೊನಾ ನಿಯಮ ಉಲ್ಲಂಘಿಸಿ ಸಂತೆ ವ್ಯಾಪಾರ ನಡೆಸಿದ್ದನ್ನು ವಿರೋಧಿಸಿ ಸುರತ್ಕಲ್ ಪೊಲೀಸರು ಏಕಾಏಕಿ ಲಾಠಿಚಾರ್ಜ್ ನಡೆಸಿದ ಘಟನೆ ನಡೆದಿದೆ.
ಬುಧವಾರ ಶಿಬರೂರು ಕೊಡಮಣಿಂತ್ತಾಯ ವರ್ಷಾವಧಿ ಉತ್ಸವ ಆರಂಭವಾಗಿದ್ದು, ಸಂತೆ ಇನ್ನಿತರ ಯಾವುದೇ ವ್ಯಾಪಾರಕ್ಕೂ ಅವಕಾಶ ನೀಡುವುದಿಲ್ಲ ಎಂದು ಪೊಲೀಸರು ತಿಳಿಸಿದ್ದರು. ಆದರೆ, ರಾತ್ರಿ ಸುಮಾರು 8.30 ರ ವೇಳೆಗೆ ದೈವಸ್ಥಾನಕ್ಕೆ ಹೋಗುವ ದಾರಿಯಲ್ಲಿ ಕೆಲವರು ಸಂತೆ ವ್ಯಾಪಾರ ಆರಂಭಿಸಿದ್ದು ಏಕಾಏಕಿ ಅಲ್ಲಿಗೆ ಆಗಮಿಸಿದ ಪೊಲೀಸರು ವ್ಯಾಪಾರಿಗಳ ಮೇಲೆ ಲಾಠಿ ಬೀಸಿದ್ದಾರೆ. ಈ ಸಂದರ್ಭ ಸಂತೆ ವ್ಯಾಪಾರಿಗಳು ಎದ್ದು ಬಿದ್ದು ಓಡಿದ್ದು, ಕೆಲವರಿಗೆ ಲಾಟಿ ಏಟು ಬಿದ್ದು ಗಾಯಗಳಾಗಿವೆ.

ದೈವಸ್ಥಾನದ ಎರಡು ಬದಿಯಲ್ಲಿಯೂ ಕೊರೊನಾ ನಿಯಮ ಉಲ್ಲಂಘಿಸಿ ಅನಧಿಕೃತ ಸಂತೆ ವ್ಯಾಪಾರ ನಡೆಸುತ್ತಿರುವವರನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಬೆಳಗಿನಿಂದಲೂ ಶಿಬರೂರು ದೈವಸ್ಥಾನಕ್ಕೆ ಬರುವ ರಿಕ್ಷಾ ಪ್ರಯಾಣಿಕರ ಮೇಲೂ ಪೊಲೀಸರು ನಿಗಾ ಇರಿಸಿದ್ದು, ಕಿನ್ನಿಗೋಳಿ ಬಳಿ ಅನೇಕ ರಿಕ್ಷಾ ಚಾಲಕರಿಗೆ ದಂಡ ವಿಧಿಸಲಾಗಿದೆ.
ಶಿಬರೂರು ದೈವಸ್ಥಾನದಲ್ಲಿ ಕೋವಿಡ್ 19 ನಿಯಮ ಉಲ್ಲಂಘಿಸಿ ಭಕ್ತಾದಿಗಳು ಸೇರಿದ್ದರೂ, ಪೊಲೀಸರು ಕ್ರಮ ಕೈಗೊಂಡಿಲ್ಲ. ಕೇವಲ ಸಂತೆ ವ್ಯಾಪಾರಸ್ಥರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸರ ನಡೆಗೆ ಸಂತೆ ವ್ಯಾಪಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 02:15 pm
HK News Staffer
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
09-05-26 08:29 pm
HK News Staffer
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm