ಬ್ರೇಕಿಂಗ್ ನ್ಯೂಸ್
14-03-25 10:35 pm Mangalore Correspondent ಕರಾವಳಿ
ಮಂಗಳೂರು, ಮಾ.14 : ಕೇರಳ – ಕರ್ನಾಟಕದ ಕರಾವಳಿಯಲ್ಲಿ ನಿಷೇಧಿತ ಪಿಎಫ್ಐ ಸಂಘಟನೆ ಜೊತೆಗೆ ನಂಟು ಹೊಂದಿರುವ ಐದು ಮಂದಿ ಕ್ರಿಮಿನಲ್ ಗಳನ್ನು ಪೊಲೀಸರು ಬಂಧಿಸಿದ್ದು ಜಿಲ್ಲೆಯಲ್ಲಿ ಆಗುತ್ತಿದ್ದ ಬಹುದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ. ಇದಕ್ಕಾಗಿ ಮಂಗಳೂರು ಪೊಲೀಸರನ್ನು ಅಭಿನಂದಿಸುವುದಾಗಿ ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಹೇಳಿದ್ದು, ಇದೇ ವೇಳೆ ಆರೋಪಿಗಳ ಪಿಎಫ್ಐ ನಂಟಿನ ಬಗ್ಗೆ ಎನ್ಐಎ ತನಿಖೆ ಆಗಬೇಕೆಂದು ಆಗ್ರಹಿಸಿದ್ದಾರೆ.
ಆರೋಪಿಗಳಿಂದ ಪಿಸ್ತೂಲ್ ಗಳನ್ನು ವಶಪಡಿಸಿರುವುದಲ್ಲದೆ, ಪಿಎಫ್ಐನಲ್ಲಿ ಗುರುತಿಸಿಕೊಂಡಿದ್ದವರಿಗೆ ಅದನ್ನು ಮಾರಾಟ ಮಾಡಿರುವುದು ಪತ್ತೆಯಾಗಿದೆ. ಈ ರೀತಿಯ ಬೆಳವಣಿಗೆ ದೇಶದ ಭದ್ರತೆಗೆ ಸವಾಲಾಗಿದ್ದು, ಯಾಕಾಗಿ ಶಸ್ತ್ರಾಸ್ತ್ರ ಶೇಖರಣೆ ಮಾಡಿಕೊಂಡಿದ್ದಾರೆ ಎನ್ನುವ ಬಗ್ಗೆ ಎನ್ಐಎ ತನಿಖೆಯಾಗಬೇಕು. ಹಿಂದು ನಾಯಕರನ್ನು, ಹಿಂದುಗಳನ್ನು ಗುರಿಯಾಗಿಸಿ ಇವರು ದುಷ್ಕೃತ್ಯಕ್ಕೆ ಸಂಚು ಹೆಣೆದಿರುವ ಸಾಧ್ಯತೆಯಿದ್ದು, ಒಟ್ಟು ಪ್ರಕರಣವನ್ನು ರಾಜ್ಯ ಸರಕಾರ ಎನ್ಐಎ ತನಿಖೆಗೆ ಹಸ್ತಾಂತರಿಸಬೇಕು. ಆರೋಪಿಗಳು ದೇಶದ್ರೋಹಿ ಸಂಘಟನೆ ಜೊತೆಗೆ ನಂಟು ಹೊಂದಿರುವುದಲ್ಲದೆ, ಹಿಂದುಗಳನ್ನು ಗುರಿಯಾಗಿಸಿ ಭಯೋತ್ಪಾದಕ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದಾರೆಂಬ ಬಲವಾದ ಶಂಕೆ ಇದೆ.
ಆರೋಪಿಗಳಿಂದ ಐದು ಪಿಸ್ತೂಲ್, ಸಜೀವ ಮದ್ದುಗುಂಡು ಸಹಿತ ಕೆಜಿ ಗಟ್ಟಲೆ ಮಾದಕ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದರಿಂದ ಕರಾವಳಿಯಲ್ಲಿ ನಿಷೇಧಿತ ಪಿಎಫ್ಐ ಸಂಘಟನೆ ಸಕ್ರಿಯವಾಗಿರುವುದು ಮತ್ತು ಜಿಲ್ಲೆಯಲ್ಲಿ ದೊಡ್ಡ ಮಟ್ಟದ ಗಲಭೆ ಎಬ್ಬಿಸಲು ಸಂಚು ನಡೆಸುತ್ತಿರುವ ಅನುಮಾನ ವ್ಯಕ್ತವಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಉದ್ದೇಶಿಸಿರುವ ಪೂರ್ವಯೋಜಿತ ದುಷ್ಕೃತ್ಯದ ಸತ್ಯಾಸತ್ಯತೆಯನ್ನು ತಿಳಿಯಲು ರಾಷ್ಟ್ರೀಯ ತನಿಖಾ ದಳದಿಂದ ತನಿಖೆಯಾಗಬೇಕು ಎಂದು ವಿಹಿಂಪ ಮುಖಂಡ ಶರಣ್ ಪಂಪ್ವೆಲ್ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.
The Vishwa Hindu Parishad (VHP) has called for a National Investigation Agency (NIA) probe into the pistol case involving leaders of the banned Popular Front of India (PFI) in the coastal region. This appeal comes amid rising concerns about a potential sabotage plot linked to the case.
14-03-25 11:11 pm
Bangalore Correspondent
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 10:35 pm
Mangalore Correspondent
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm