ಬ್ರೇಕಿಂಗ್ ನ್ಯೂಸ್
14-03-25 10:35 pm Mangalore Correspondent ಕರಾವಳಿ
ಮಂಗಳೂರು, ಮಾ.14 : ಕೇರಳ – ಕರ್ನಾಟಕದ ಕರಾವಳಿಯಲ್ಲಿ ನಿಷೇಧಿತ ಪಿಎಫ್ಐ ಸಂಘಟನೆ ಜೊತೆಗೆ ನಂಟು ಹೊಂದಿರುವ ಐದು ಮಂದಿ ಕ್ರಿಮಿನಲ್ ಗಳನ್ನು ಪೊಲೀಸರು ಬಂಧಿಸಿದ್ದು ಜಿಲ್ಲೆಯಲ್ಲಿ ಆಗುತ್ತಿದ್ದ ಬಹುದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ. ಇದಕ್ಕಾಗಿ ಮಂಗಳೂರು ಪೊಲೀಸರನ್ನು ಅಭಿನಂದಿಸುವುದಾಗಿ ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಹೇಳಿದ್ದು, ಇದೇ ವೇಳೆ ಆರೋಪಿಗಳ ಪಿಎಫ್ಐ ನಂಟಿನ ಬಗ್ಗೆ ಎನ್ಐಎ ತನಿಖೆ ಆಗಬೇಕೆಂದು ಆಗ್ರಹಿಸಿದ್ದಾರೆ.
ಆರೋಪಿಗಳಿಂದ ಪಿಸ್ತೂಲ್ ಗಳನ್ನು ವಶಪಡಿಸಿರುವುದಲ್ಲದೆ, ಪಿಎಫ್ಐನಲ್ಲಿ ಗುರುತಿಸಿಕೊಂಡಿದ್ದವರಿಗೆ ಅದನ್ನು ಮಾರಾಟ ಮಾಡಿರುವುದು ಪತ್ತೆಯಾಗಿದೆ. ಈ ರೀತಿಯ ಬೆಳವಣಿಗೆ ದೇಶದ ಭದ್ರತೆಗೆ ಸವಾಲಾಗಿದ್ದು, ಯಾಕಾಗಿ ಶಸ್ತ್ರಾಸ್ತ್ರ ಶೇಖರಣೆ ಮಾಡಿಕೊಂಡಿದ್ದಾರೆ ಎನ್ನುವ ಬಗ್ಗೆ ಎನ್ಐಎ ತನಿಖೆಯಾಗಬೇಕು. ಹಿಂದು ನಾಯಕರನ್ನು, ಹಿಂದುಗಳನ್ನು ಗುರಿಯಾಗಿಸಿ ಇವರು ದುಷ್ಕೃತ್ಯಕ್ಕೆ ಸಂಚು ಹೆಣೆದಿರುವ ಸಾಧ್ಯತೆಯಿದ್ದು, ಒಟ್ಟು ಪ್ರಕರಣವನ್ನು ರಾಜ್ಯ ಸರಕಾರ ಎನ್ಐಎ ತನಿಖೆಗೆ ಹಸ್ತಾಂತರಿಸಬೇಕು. ಆರೋಪಿಗಳು ದೇಶದ್ರೋಹಿ ಸಂಘಟನೆ ಜೊತೆಗೆ ನಂಟು ಹೊಂದಿರುವುದಲ್ಲದೆ, ಹಿಂದುಗಳನ್ನು ಗುರಿಯಾಗಿಸಿ ಭಯೋತ್ಪಾದಕ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದಾರೆಂಬ ಬಲವಾದ ಶಂಕೆ ಇದೆ.
ಆರೋಪಿಗಳಿಂದ ಐದು ಪಿಸ್ತೂಲ್, ಸಜೀವ ಮದ್ದುಗುಂಡು ಸಹಿತ ಕೆಜಿ ಗಟ್ಟಲೆ ಮಾದಕ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದರಿಂದ ಕರಾವಳಿಯಲ್ಲಿ ನಿಷೇಧಿತ ಪಿಎಫ್ಐ ಸಂಘಟನೆ ಸಕ್ರಿಯವಾಗಿರುವುದು ಮತ್ತು ಜಿಲ್ಲೆಯಲ್ಲಿ ದೊಡ್ಡ ಮಟ್ಟದ ಗಲಭೆ ಎಬ್ಬಿಸಲು ಸಂಚು ನಡೆಸುತ್ತಿರುವ ಅನುಮಾನ ವ್ಯಕ್ತವಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಉದ್ದೇಶಿಸಿರುವ ಪೂರ್ವಯೋಜಿತ ದುಷ್ಕೃತ್ಯದ ಸತ್ಯಾಸತ್ಯತೆಯನ್ನು ತಿಳಿಯಲು ರಾಷ್ಟ್ರೀಯ ತನಿಖಾ ದಳದಿಂದ ತನಿಖೆಯಾಗಬೇಕು ಎಂದು ವಿಹಿಂಪ ಮುಖಂಡ ಶರಣ್ ಪಂಪ್ವೆಲ್ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.
The Vishwa Hindu Parishad (VHP) has called for a National Investigation Agency (NIA) probe into the pistol case involving leaders of the banned Popular Front of India (PFI) in the coastal region. This appeal comes amid rising concerns about a potential sabotage plot linked to the case.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm