ಬ್ರೇಕಿಂಗ್ ನ್ಯೂಸ್
16-03-25 02:05 pm Mangalore Correspondent ಕರಾವಳಿ
ಮಂಗಳೂರು, ಮಾ.16 : ಮಂಗಳೂರು ಜೈಲಿನಲ್ಲಿ ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ವ್ಯಕ್ತಿಯೊಬ್ಬ ತನ್ನ ಶಾಲನ್ನೇ ಕಿಟಕಿಗೆ ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಭಾನುವಾರ ನಸುಕಿನ 4ರಿಂದ 4.50ರ ನಡುವೆ ಘಟನೆ ನಡೆದಿದೆ. ಮೂಡುಬಿದ್ರೆ ಠಾಣೆಯಲ್ಲಿ ಪೋಕ್ಸೋ ಕೇಸು ದಾಖಲಾಗಿದ್ದ ಪ್ರಕರಣದಲ್ಲಿ ಬಂಧಿತನಾಗಿದ್ದ ಪ್ರಕಾಶ್ ಗೋಪಾಲ ಮೂಲ್ಯ (50) ಮಾ.11ರಂದು ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದು ಮಂಗಳೂರು ಜೈಲು ಸೇರಿದ್ದ. ಜೈಲಿನ ಟಾಯ್ಲೆಟ್ ಒಳಗಡೆಯ ಕಿಟಕಿಗೆ ನೇಣು ಹಾಕಿದ್ದು ಕೆಲವೊತ್ತಲ್ಲಿ ಜೈಲು ಸಿಬಂದಿ ಗಮನಿಸಿ ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾನೆ. ಪೋಕ್ಸೋ ಪ್ರಕರಣದಲ್ಲಿ ಜಾಮೀನು ಸಿಗೋದಿಲ್ಲ, ಯಾರು ಕೂಡ ಜೈಲಿನಿಂದ ಬಿಡಿಸಲು ಬರೋದಿಲ್ಲ ಅಂತ ಸಾವಿಗೆ ಶರಣಾಗಿದ್ದಾನೆ ಎನ್ನಲಾಗುತ್ತಿದೆ.
ಮೂಡುಬಿದ್ರೆ ಲಾಡಿಯಲ್ಲಿ ನೆಲೆಸಿದ್ದ ಪ್ರಕಾಶ್ ಬೆಳಗಾವಿ ಮೂಲದ ಕೂಲಿ ಕಾರ್ಮಿಕನಾಗಿದ್ದು ವಿಪರೀತ ಕುಡಿತದ ಚಟ ಹೊಂದಿದ್ದ. ಅಲ್ಲಿಯೇ ಪರಿಸರದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿದ್ದಲ್ಲದೆ, ಅದರ ವಿಡಿಯೋ ಮಾಡಿಟ್ಟು ಬ್ಲಾಕ್ಮೇಲ್ ಮಾಡುತ್ತಿದ್ದ. ಆತನ ಮೊಬೈಲ್ ನಲ್ಲಿ ವಿಡಿಯೋ ಸಿಕ್ಕಿದ್ದು ಪೊಲೀಸರು ವಶಕ್ಕೆ ಪಡೆದು ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದರು.
ಮನೆಯಲ್ಲಿ ಪತ್ನಿಗೆ ಕುಡಿದು ಬಂದು ಹೊಡೆಯುತ್ತಿದ್ದುದರಿಂದ ಬಂಧನ ಆಗಿದ್ದರೂ ನೋಡಲು ಬಂದಿರಲಿಲ್ಲ. ಹೀಗಾಗಿ ಜಿಗುಪ್ಸೆಗೊಂಡು ನೇಣಿಗೆ ಶರಣಾಗಿದ್ದಾನೆ ಎನ್ನುವ ಮಾಹಿತಿ ಪೊಲೀಸರದ್ದು. ಜೈಲಿನಲ್ಲಿ ಆತ್ಮಹತ್ಯೆ ಆಗಿರುವ ಬಗ್ಗೆ ಮಂಗಳೂರಿನ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
POSCO Accused in Mangalore Commits Suicide in Jail. The deceased has been identified as Prakash Gopal Moolya (43). As per preliminary information, the prisoner hanged himself using a towel tied to the window grille in the toilet of Barrack ‘B’, Cell No. 2 of the jail. The incident was immediately noticed by the duty staff, and he was rushed to Government Wenlock Hospital, Mangalore, in the jail’s official vehicle. However, doctors declared him brought dead after examination.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 04:43 pm
HK News Staffer
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm