ಬ್ರೇಕಿಂಗ್ ನ್ಯೂಸ್
16-03-25 10:10 pm Udupi Correspondent ಕರಾವಳಿ
ಉಡುಪಿ, ಮಾ.16 : ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಂಸದ ತೇಜಸ್ವಿ ಸೂರ್ಯ ಮತ್ತು ಗಾಯಕಿ ಶಿವಶ್ರೀ ಸ್ಕಂದ ದಂಪತಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಸಂಗೀತ ಸೇವೆ ನೀಡಿದ್ದಾರೆ.
ರಥಬೀದಿಯಲ್ಲಿ ನಡೆದ ನಿತ್ಯೋತ್ಸವದಲ್ಲಿ ಭಾಗಿಯಾದ ದಂಪತಿ ಕುಟುಂಬಸ್ಥರು, ಕೃಷ್ಣ ದೇವರ ಗರ್ಭಗುಡಿಯಲ್ಲಿ ನಡೆಯುವ ಮಹಾಪೂಜೆ ಮತ್ತು ಶಯನ ಪೂಜೆಯಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಶಿವಶ್ರೀ ಮತ್ತು ತೇಜಸ್ವಿ ಕೃಷ್ಣ ದೇವರ ಮುಂದೆ ಸಂಗೀತ ಸೇವೆಯನ್ನು ನೀಡಿದರು.
'ಜಗದೋದ್ಧಾರನಾ ಆಡಿಸಿದಳು ಯಶೋಧೆ..' ಮತ್ತು 'ತೊರೆದು ಜೀವಿಸಬಹುದೇ ಹರಿ ನಿನ್ನ ಚರಣಗಳ' ಹಾಡನ್ನು ಹಾಡಿದರು. ಪರ್ಯಾಯ ಪುತ್ತಿಗೆ ಮಠ ಮತ್ತು ಉಡುಪಿ ಶ್ರೀಕೃಷ್ಣ ಮಠದ ಸಂಗೀತಗಾರ ನಾರಾಯಣ ಸರಳಾಯರು ಸಂಗೀತದಲ್ಲಿ ಸಾಥ್ ನೀಡಿದರು. ಪತಿ ಸಂಸದ ತೇಜಸ್ವಿ ಸೂರ್ಯ ವೇದಘೋಷ ಮಾಡಿದರು.
ಕಾರು ಬಿಟ್ಟು ಬಸ್ನಲ್ಲಿ ಸಂಚಾರ
ಸಂಸದ ತೇಜಸ್ವಿ ಸೂರ್ಯ ದಂಪತಿ ತಮ್ಮ ಸಂಚಾರಕ್ಕೆ ಕಾರನ್ನು ಬದಿಗಿಟ್ಟು ಬಸ್ನಲ್ಲಿ ಸಂಚರಿಸಿ ಗಮನ ಸೆಳೆದಿದ್ದಾರೆ. ಮಲೆನಾಡಿನ ಥಳುಕು ಬಳುಕಿನ ರಸ್ತೆಗಳಲ್ಲಿ ಮಲೆನಾಡಿನ ಸೌಂದರ್ಯವನ್ನು ಸವಿಯಲೋ ಎಂಬಂತೆ, ತೇಜಸ್ವಿ ಸೂರ್ಯ ಹಾಗೂ ಶಿವಶ್ರೀ ದಂಪತಿ ಸಂಚಾರಕ್ಕೆ ಸಾರಿಗೆ ಬಸ್ಸನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಕಳಸ, ಹೊರನಾಡಿಗೂ ತೆರಳಿ ದೇವರ ದರ್ಶನ ಪಡೆದರು. ಖಾಸಗಿ ಬಸ್ನಲ್ಲಿ ಪತ್ನಿ ಜೊತೆ ಸಂಚರಿಸಿದ ತೇಜಸ್ವಿ ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಿದ್ದಾರೆ.
ಶನಿವಾರ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಕುಟುಂಬ ಸಮೇತರಾಗಿ ಹೊರನಾಡು ಅನ್ನಪೂರ್ಣೇಶ್ವರಿಗೆ ವಿಶೇಷ ಪೂಜೆ ಮಾಡಿಸಿ ದರ್ಶನ ಪಡೆದು ತೆರಳಿದ್ದರು
Bengaluru South MP Tejasvi Surya, accompanied by his wife Shivashree and family, visited the Udupi Sri Krishna Temple on Sunday to seek divine blessings. The couple was welcomed by temple authorities upon arrival, following which they received blessings from the presiding seer of the Paryaya Peetha. Surya actively participated in the temple’s annual chariot festival, joining devotees in pulling the Brahma Ratha, while Shivashree led devotional singing during the cradle puja.
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
21-08-25 11:57 am
Mangalore Correspondent
MLA Vedavyas Kamath: ಶ್ರೀಕೃಷ್ಣ ಜನ್ಮಾಷ್ಟಮಿಯ ಸಂ...
20-08-25 10:19 pm
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm