ಬ್ರೇಕಿಂಗ್ ನ್ಯೂಸ್
16-03-25 10:55 pm Mangalore Correspondent ಕರಾವಳಿ
ಮಂಗಳೂರು, ಮಾ.16: ನಾವು ನಿರಂತರವಾಗಿ ತುಳು ಭಾಷೆಯಲ್ಲೇ ಮಾತನಾಡುವುದರಿಂದ ತುಳು ಭಾಷೆ ಇಷ್ಟೊಂದು ಬೇರೂರಲು ಕಾರಣವಾಗಿದೆ. ಬೇರೆ ಜಿಲ್ಲೆ ಹಾಗೂ ರಾಜ್ಯಗಳಲ್ಲಿ ತುಳು ಭಾಷೆ, ಸಂಸ್ಕೃತಿಯ ಬಗ್ಗೆ ಹೇಳುವಾಗ ಹೆಮ್ಮೆ ಎನಿಸುತ್ತದೆ. ತುಳು ಭಾಷೆಯನ್ನು ಶಾಲೆಗಳಲ್ಲಿ ಕಲಿತ ವಿದ್ಯಾರ್ಥಿಗಳಿಗೆ ದಕ್ಷಿಣ ಕನ್ನಡ ಜಿಲ್ಲೆಯ ಕಂಪನಿಗಳಲ್ಲಿ ಕೆಲಸಕ್ಕಾಗಿ ಮೀಸಲಾತಿ ಕಲ್ಪಿಸಬೇಕೆಂದು ಸರಕಾರದ ಗಮನಕ್ಕೆ ತಂದಿದ್ದೇನೆ ಎಂದು ವಿಧಾನಸಭೆ ಅಧ್ಯಕ್ಷ ಯುಟಿ ಖಾದರ್ ಹೇಳಿದ್ದಾರೆ.
ಉರ್ವಾ ಸ್ಟೋರಿನ ತುಳು ಭವನದ ಅಮೃತ ಸೋಮೇಶ್ವರ ಸಭಾಂಗಣದಲ್ಲಿ ನಡೆದ ತುಳು ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ ಮತ್ತು ಪುಸ್ತಕ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ಶಾಸಕ ಉಮಾನಾಥ ಕೋಟ್ಯಾನ್ ಕಾರ್ಯಕ್ರಮ ಉದ್ಘಾಟಿಸಿ, ತುಳು ಅಕಾಡೆಮಿ ಮೂಲಕ ಇನ್ನಷ್ಟು ತುಳು ಸಾಹಿತ್ಯ ಸಾಧಕರನ್ನು ಗುರುತಿಸುವ ಕೆಲಸ ಆಗಬೇಕು ಎಂದು ಹೇಳಿದರು.



ತುಳುವಿಗೆ ರಾಜಕೀಯ ಇಚ್ಛಾಶಕ್ತಿ ಕೊರತೆ
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ದಿಕ್ಸೂಚಿ ಮಾತನಾಡಿ, ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಸಾಧ್ಯವಾಗದ್ದಕ್ಕೆ ರಾಜಕೀಯ ಇಚ್ಛಾಶಕ್ತಿ ಕೊರತೆಯೇ ಕಾರಣವಾಗಿದೆ. 2004ರಲ್ಲಿ ವಾಜಪೇಯಿ ಸರಕಾರ ಇದ್ದಾಗ ಪರಿಚ್ಛೇದಕ್ಕೆ ಸೇರಿಸುವ ಪಟ್ಟಿಯಲ್ಲಿದ್ದ ಐದು ಭಾಷೆಗಳಲ್ಲಿ ತುಳು ಹೊರತುಪಡಿಸಿ ನಾಲ್ಕನ್ನು ಸೇರಿಸಲಾಗಿತ್ತು. ಈಗ ಆ ಪಟ್ಟಿ 125ಕ್ಕೆ ಮುಟ್ಟಿದೆ. ಅಷ್ಟೂ ಭಾಷೆಗಳ ನಡುವೆ ತುಳು ಹೋರಾಟ ಮಾಡಬೇಕಾಗಿದೆ ಎಂದರು. ಪ್ರಾದೇಶಿಕ ಭಾಷೆಗಳ ಅಸ್ತಿತ್ವವೇ ಅಲುಗಾಡುತ್ತಿದೆ. ಇನ್ನು 30 ವರ್ಷಗಳಲ್ಲಿ ಜಗತ್ತಿನಲ್ಲಿ ಅಮೆರಿಕನ್ ಇಂಗ್ಲಿಷ್, ಜರ್ಮನ್, ಚೈನೀಸ್ ಸೇರಿ ಐದು ಭಾಷೆಗಳಷ್ಟೇ ಸಾರ್ವಕಾಲಿಕ ಅನ್ನುವಂತೆ ಆಗಲಿದೆ. ಉಳಿದೆಲ್ಲ ಮಾತನಾಡುವ ಭಾಷೆಗಳ ಹಂತದಿಂದ ದೂರವಾಗಲಿವೆ ಎಂದರು.
2022ನೇ ಸಾಲಿನ ಸಂಶೋಧನೆ ಹಾಗೂ ಸಾಹಿತ್ಯ ಕ್ಷೇತ್ರದ ಪ್ರಶಸ್ತಿಯನ್ನು ಸಂಶೋಧಕ ಡಾ.ರಘುಪತಿ ಕೆಮ್ತೂರು, ತುಳು ನಾಟಕ ಸಿನಿಮಾ ಪ್ರಶಸ್ತಿಯನ್ನು ಪಣಂಬೂರಿನಲ್ಲಿ ಹುಟ್ಟಿ ಬೆಳೆದು ಕೆಎನ್ ಟೇಲರ್ ಕಾಲದಲ್ಲಿ ನಾಟಕದಲ್ಲಿ ಹೆಸರು ಮಾಡಿ ಬೆಂಗಳೂರಿನಲ್ಲಿ ಗಾಯಕಿಯಾಗಿ ಬೆಳೆದಿದ್ದ ರತ್ನಮಾಲ ಪುರಂದರ ಅವರಿಗೆ ಪ್ರದಾನಿಸಲಾಯಿತು. ಜಾನಪದ ಕ್ಷೇತ್ರದ ಪ್ರಶಸ್ತಿಯನ್ನು ಪ್ರಭಾಕರ ಶೇರಿಗಾರ ಉಡುಪಿ ಅವರಿಗೆ ಪ್ರದಾನ ಮಾಡಲಾಯಿತು. 2023ನೇ ಸಾಲಿನ ತುಳು ಸಾಹಿತ್ಯ ಕ್ಷೇತ್ರದ ಪ್ರಶಸ್ತಿಯನ್ನು ಶಿಮಂತೂರು ಚಂದ್ರಹಾಸ ಸುವರ್ಣ ಮುಂಬೈ, ನಾಟಕ ಕ್ಷೇತ್ರದ ಪ್ರಶಸ್ತಿಯನ್ನು ನೆಕ್ಕಿದಪುಣಿ ಗೋಪಾಲಕೃಷ್ಣ ಬೆಂಗಳೂರು, ಜಾನಪದ ಕ್ಷೇತ್ರದ ಪ್ರಶಸ್ತಿಯನ್ನು ಲಕ್ಷ್ಮಣ ಕಾಂತ ಕಣಂತೂರು ಅವರಿಗೆ ಪ್ರದಾನಿಸಲಾಯಿತು.
2024ನೇ ಸಾಲಿನ ಸಾಹಿತ್ಯ ಕ್ಷೇತ್ರದ ಪ್ರಶಸ್ತಿಯನ್ನು ಯಶವಂತ ಬೋಳೂರು, ನಾಟಕ- ಸಿನಿಮಾ ಕ್ಷೇತ್ರದ ಪ್ರಶಸ್ತಿಯನ್ನು ಸರೋಜಿನಿ ಎಸ್. ಶೆಟ್ಟಿ, ಕೃಷಿ ಜಾನಪದ ಪ್ರಶಸ್ತಿಯನ್ನು ಬೆಳ್ತಂಗಡಿಯ 80 ವರ್ಷದ ಬಿಕೆ ದೇವರಾವ್ ಅವರಿಗೆ ಪ್ರದಾನಿಸಲಾಯಿತು. ಪುಸ್ತಕ ಪ್ರಶಸ್ತಿಯನ್ನು ರಾಜೇಶ್ ಶೆಟ್ಟಿ ದೋಟ, ರಾಜಶ್ರೀ ರೈ ಪೆರ್ಲ, ರಘು ಇಡ್ಕಿದು, ಕುಶಾಲಾಕ್ಷಿ ವಿ.ಕುಲಾಲ್ ಅವರಿಗೆ ಪ್ರದಾನ ಮಾಡಲಾಯಿತು. ದತ್ತಿನಿಧಿ ಪುಸ್ತಕ ಪ್ರಶಸ್ತಿಯನ್ನು ಕಬ್ಬಿನಾಲೆ ವಸಂತ ಭಾರದ್ವಾಜ್, ಯಶೋಧ ಮೋಹನ್, ಶಾರದಾ ಅಂಚನ್, ಡಾ.ಚಿನ್ನಪ್ಪ ಗೌಡ, ಡಾ.ವಿ.ಕೆ. ಯಾದವ್, ರಘುನಾಥ ವರ್ಕಾಡಿ ಅವರಿಗೆ ನೀಡಲಾಯಿತು.
ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ್ ಗಟ್ಟಿ ಕಾಪಿಕಾಡು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ವೇದವ್ಯಾಸ ಕಾಮತ್, ಭಾಗೀರಥಿ ಮುರುಳ್ಯ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಎಸ್. ಗಟ್ಟಿ, ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್, ತುಳು ಸಂಶೋಧಕಿ ಡಾ.ಇಂದಿರಾ ಹೆಗ್ಗಡೆ, ಹಿರಿಯ ಲೇಖಕಿ ಉಷಾ ಪಿ. ರೈ, ಡಾ.ಅಮರಶ್ರೀ ಅಮರನಾಥ ಶೆಟ್ಟಿ ಉಪಸ್ಥಿತರಿದ್ದರು.
Reservation for Students Learning Tulu, Speaker UT Khaders Remarks at Tulu Sahitya Academy Honor and Book Award Ceremony.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 04:43 pm
HK News Staffer
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm