ಬ್ರೇಕಿಂಗ್ ನ್ಯೂಸ್
17-03-25 11:29 am Mangalore Correspondent ಕರಾವಳಿ
ಉಳ್ಳಾಲ, ಮಾ.17 : ವೃದ್ಧ ತಾಯಿ ಜೊತೆಗೆ ಸ್ಕೂಟರಿನಲ್ಲಿ ತೆರಳುತ್ತಿದ್ದಾಗ ಕಾಡು ಹಂದಿ ದಿಢೀರ್ ಅಡ್ಡ ಬಂದ ಪರಿಣಾಮ ತಾಯಿ ರಸ್ತೆಗೆಸೆಯಲ್ಪಟ್ಟು ತೀವ್ರ ಗಾಯಗೊಂಡು ಮೃತಪಟ್ಟ ಘಟನೆ ಹರೇಕಳ ಗ್ರಾಮದ ಖಂಡಿಗ ಎಂಬಲ್ಲಿ ಸಂಭವಿಸಿದೆ.
ಹರೇಕಳ ಗ್ರಾಮದ ಪೊಲ್ಕೆ ಮೇಗಿನಮನೆ ನಿವಾಸಿ ದೇವಕಿ ಮಾಣೈ (72) ಮೃತ ಮಹಿಳೆ. ವರದರಾಜ್ ಮಾಣೈ ಅವರು ತನ್ನ ತಾಯಿ ದೇವಕಿ ಮಾಣೈ ಅವರನ್ನ ಶನಿವಾರ ರಾತ್ರಿ ಬಜಾಲಿನ ಸಂಬಂಧಿಕರ ಮನೆಯಿಂದ ಸ್ಕೂಟರಿನಲ್ಲಿ ಕುಳ್ಳಿರಿಸಿ ಅಡ್ಯಾರು-ಪಾವೂರು ಮಾರ್ಗವಾಗಿ ಹರೇಕಳದ ಮನೆಗೆ ಮರಳುತ್ತಿದ್ದ ವೇಳೆ ದಾರಿ ಮಧ್ಯದ ಖಂಡಿಗ ಎಂಬಲ್ಲಿ ಹಳೇ ಪಂಚಾಯತ್ ಕಚೇರಿ ಕಟ್ಟಡದ ಬಳಿಯ ಗುಡ್ಡ ಪ್ರದೇಶದಿಂದ ಕಾಡು ಹಂದಿ ದಿಢೀರ್ ಆಗಿ ರಸ್ತೆ ಕಡೆ ಧಾವಿಸಿತ್ತು. ಈ ವೇಳೆ ಸ್ಕೂಟರ್ ಚಲಾಯಿಸುತ್ತಿದ್ದ ವರದರಾಜ್ ಅವರು ವಿಚಲಿತರಾಗಿ ಹಠಾತ್ತನೆ ಬ್ರೇಕ್ ಹೊಡೆದ ಪರಿಣಾಮ ತಾಯಿ ಮತ್ತು ಮಗ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಗಂಭೀರ ಗಾಯಗೊಂಡ ದೇವಕಿ ಅವರಿಗೆ ಹರೇಕಳದ ಕ್ಲಿನಿಕ್ ಒಂದರಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಮೃತ ದೇವಕಿ ಅವರ ಪತಿ ಭೋಜ ಮಾಣೈ ಅವರು ಆರು ತಿಂಗಳ ಹಿಂದೆಯಷ್ಟೇ ಅಲ್ಪಕಾಲದ ಅನಾರೋಗ್ಯದಿಂದ ಮೃತಪಟ್ಟಿದ್ದರು. ದೇವಕಿ ಅವರು ಓರ್ವ ಪುತ್ರ, ಇಬ್ಬರು ಪುತ್ರಿಯರು ಮತ್ತು ಮೊಮ್ಮಕ್ಕಳನ್ನ ಅಗಲಿದ್ದಾರೆ. ಘಟನೆ ಕುರಿತು ದೇವಕಿ ಮಾಣೈ ಅವರ ಅಳಿಯ ರವೀಂದ್ರ ಭಂಡಾರಿ ನೀಡಿದ ದೂರಿನಂತೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Tragic Accident in Harekala Mangalore, Wild Boar Leads to Fatal Crash, Claims Life of 72 Year old Woman. The deceased has been identified as Devika. A devastating accident occurred late Saturday night when a man riding a scooter with his elderly mother lost control after a wild boar suddenly crossed their path. The unexpected encounter resulted in the woman being thrown onto the road, leading to a tragic turn of events.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am