ಬ್ರೇಕಿಂಗ್ ನ್ಯೂಸ್
17-03-25 11:02 pm Udupi Correspondent ಕರಾವಳಿ
ಉಡುಪಿ, ಮಾ.17 : ಮಂಗಳೂರು ಮತ್ತು ಮುಂಬೈ ನಡುವೆ ವಂದೇ ಭಾರತ್ ರೈಲು ಆರಂಭಿಸಬೇಕು ಎಂಬ ಬೇಡಿಕೆ ಈಡೇರುವ ಲಕ್ಷಣ ಇದೆ. ಗೋವಾ - ಮಂಗಳೂರು ನಡುವಿನ ರೈಲನ್ನು ಮುಂಬೈಗೆ ವಿಸ್ತರಣೆ ಮಾಡುವಂತೆ ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದು ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಸದ್ಯ ಮಂಗಳೂರು ನಗರದಿಂದ ಗೋವಾಕ್ಕೆ ವಂದೇ ಭಾರತ್ ರೈಲು ಸಂಚಾರ ನಡೆಸುತ್ತಿದೆ. ಈ ರೈಲಿಗೆ ಪ್ರಯಾಣಿಕರ ಕೊರತೆ ಇರುವುದರಿಂದ ಕೇರಳಕ್ಕೆ ವಿಸ್ತರಿಸುವ ಬೇಡಿಕೆ ಇದೆ. ಇದೇ ವೇಳೆ, ಇದೇ ರೈಲನ್ನು ಮಂಗಳೂರು-ಮುಂಬೈ ನಡುವೆ ಸಂಚರಿಸುವಂತೆ ಮಾಡಬೇಕು ಎನ್ನುವ ಬೇಡಿಕೆ ಬಲವಾಗಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಈ ಕುರಿತು ರೈಲ್ವೇ ಸಚಿವರಿಗೆ ಮನವಿ ನೀಡಿರುವುದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಮಂಗಳೂರು- ಮಡಗಾಂವ್ ವಂದೇ ಭಾರತ್ ರೈಲು ರದ್ದಾಗಬಹುದೆಂಬ ಅಭಿಪ್ರಾಯಗಳ ಹಿನ್ನೆಲೆಯಲ್ಲಿ ಈ ರೈಲನ್ನು ರದ್ದು ಮಾಡದೇ ಮುಂಬೈ ವರೆಗೆ ವಿಸ್ತರಿಸಿ ಓಡಿಸುವಂತೆ ರೈಲ್ವೇ ಸಚಿವರನ್ನು ಉಡುಪಿ ಸಂಸದರು ಕೋರಿದ್ದಾರೆ. ಸಚಿವರು ತಕ್ಷಣವೇ ಮಂಗಳೂರು- ಮಡಗಾಂವ್ ವಂದೇ ಭಾರತ್ ರೈಲನ್ನು ರದ್ದು ಮಾಡದಂತೆಯೂ ಮತ್ತು ಅದನ್ನು ಮುಂಬಯಿ ವಿಸ್ತರಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಅಧಿಕಾರಿಗಳಿಗೆ ಸೂಚಿಸಿದರು ಎಂದು ಕೋಟ ಶ್ರೀನಿವಾಸ ಪೂಜಾರಿ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
ಮಂಗಳೂರು- ಉಡುಪಿ ನಗರಗಳ ಹೆಚ್ಚಿನ ಜನರು ಮುಂಬೈನಲ್ಲಿರುವುದು ಮತ್ತು ಈ ಭಾಗದ ಆರ್ಥಿಕ ಆಯಾಮಗಳ ವರದಿಯನ್ನು ಸಚಿವರಿಗೆ ನೀಡಿದ್ದು , ಮುಂಬೈ ವಿಸ್ತರಣೆಯ ಅಗತ್ಯವನ್ನೂ ತಿಳಿಸಿದ್ದಾರೆ. ಇದಲ್ಲದೆ, ಮುಂದೆ ಸ್ಲೀಪರ್ ವಂದೇ ಭಾರತ್ ರೈಲು ಬಿಡುಗಡೆಯಾದಾಗ ಆದ್ಯತೆಯ ಮೇರೆಗೆ ಮಂಗಳೂರು -ಮುಂಬೈ ಮಧ್ಯೆ ಅದನ್ನು ಓಡಿಸುವಂತೆಯೂ ಸಂಸದ ಶ್ರೀನಿವಾಸ ಪೂಜಾರಿ ಅವರು ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದಾರೆ.
Mangalore Mumbai Vande Bharat train is imminent, to Railway Minister assures Udupi MP Srinivasa Poojary regarding the request.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am