ಬ್ರೇಕಿಂಗ್ ನ್ಯೂಸ್
17-03-25 11:02 pm Udupi Correspondent ಕರಾವಳಿ
ಉಡುಪಿ, ಮಾ.17 : ಮಂಗಳೂರು ಮತ್ತು ಮುಂಬೈ ನಡುವೆ ವಂದೇ ಭಾರತ್ ರೈಲು ಆರಂಭಿಸಬೇಕು ಎಂಬ ಬೇಡಿಕೆ ಈಡೇರುವ ಲಕ್ಷಣ ಇದೆ. ಗೋವಾ - ಮಂಗಳೂರು ನಡುವಿನ ರೈಲನ್ನು ಮುಂಬೈಗೆ ವಿಸ್ತರಣೆ ಮಾಡುವಂತೆ ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದು ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಸದ್ಯ ಮಂಗಳೂರು ನಗರದಿಂದ ಗೋವಾಕ್ಕೆ ವಂದೇ ಭಾರತ್ ರೈಲು ಸಂಚಾರ ನಡೆಸುತ್ತಿದೆ. ಈ ರೈಲಿಗೆ ಪ್ರಯಾಣಿಕರ ಕೊರತೆ ಇರುವುದರಿಂದ ಕೇರಳಕ್ಕೆ ವಿಸ್ತರಿಸುವ ಬೇಡಿಕೆ ಇದೆ. ಇದೇ ವೇಳೆ, ಇದೇ ರೈಲನ್ನು ಮಂಗಳೂರು-ಮುಂಬೈ ನಡುವೆ ಸಂಚರಿಸುವಂತೆ ಮಾಡಬೇಕು ಎನ್ನುವ ಬೇಡಿಕೆ ಬಲವಾಗಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಈ ಕುರಿತು ರೈಲ್ವೇ ಸಚಿವರಿಗೆ ಮನವಿ ನೀಡಿರುವುದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಮಂಗಳೂರು- ಮಡಗಾಂವ್ ವಂದೇ ಭಾರತ್ ರೈಲು ರದ್ದಾಗಬಹುದೆಂಬ ಅಭಿಪ್ರಾಯಗಳ ಹಿನ್ನೆಲೆಯಲ್ಲಿ ಈ ರೈಲನ್ನು ರದ್ದು ಮಾಡದೇ ಮುಂಬೈ ವರೆಗೆ ವಿಸ್ತರಿಸಿ ಓಡಿಸುವಂತೆ ರೈಲ್ವೇ ಸಚಿವರನ್ನು ಉಡುಪಿ ಸಂಸದರು ಕೋರಿದ್ದಾರೆ. ಸಚಿವರು ತಕ್ಷಣವೇ ಮಂಗಳೂರು- ಮಡಗಾಂವ್ ವಂದೇ ಭಾರತ್ ರೈಲನ್ನು ರದ್ದು ಮಾಡದಂತೆಯೂ ಮತ್ತು ಅದನ್ನು ಮುಂಬಯಿ ವಿಸ್ತರಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಅಧಿಕಾರಿಗಳಿಗೆ ಸೂಚಿಸಿದರು ಎಂದು ಕೋಟ ಶ್ರೀನಿವಾಸ ಪೂಜಾರಿ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
ಮಂಗಳೂರು- ಉಡುಪಿ ನಗರಗಳ ಹೆಚ್ಚಿನ ಜನರು ಮುಂಬೈನಲ್ಲಿರುವುದು ಮತ್ತು ಈ ಭಾಗದ ಆರ್ಥಿಕ ಆಯಾಮಗಳ ವರದಿಯನ್ನು ಸಚಿವರಿಗೆ ನೀಡಿದ್ದು , ಮುಂಬೈ ವಿಸ್ತರಣೆಯ ಅಗತ್ಯವನ್ನೂ ತಿಳಿಸಿದ್ದಾರೆ. ಇದಲ್ಲದೆ, ಮುಂದೆ ಸ್ಲೀಪರ್ ವಂದೇ ಭಾರತ್ ರೈಲು ಬಿಡುಗಡೆಯಾದಾಗ ಆದ್ಯತೆಯ ಮೇರೆಗೆ ಮಂಗಳೂರು -ಮುಂಬೈ ಮಧ್ಯೆ ಅದನ್ನು ಓಡಿಸುವಂತೆಯೂ ಸಂಸದ ಶ್ರೀನಿವಾಸ ಪೂಜಾರಿ ಅವರು ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದಾರೆ.
Mangalore Mumbai Vande Bharat train is imminent, to Railway Minister assures Udupi MP Srinivasa Poojary regarding the request.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm