ಬ್ರೇಕಿಂಗ್ ನ್ಯೂಸ್
18-03-25 08:53 pm Mangalore Correspondent ಕರಾವಳಿ
ಮಂಗಳೂರು, ಮಾ.18 : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಟ್ಟ ಅಡವಿಯ ನಡುವೆ ಇರುವ ಸುಲ್ಕೇರಿ ಮೊಗ್ರು ಗ್ರಾಮದ ಪಂಜಾಲ, ಮಾಳಿಗೆ ಬೈಲಿನ 15 ಆದಿವಾಸಿ ಕುಟುಂಬ ಸೇರಿ ಒಟ್ಟು 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ ಲಭಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 27ರಂದು ನಡೆದ ಸಭೆಯಲ್ಲಿ ಆದಿವಾಸಿಗಳು ನೆಲೆಸಿರುವ ಅರಣ್ಯ ಪ್ರದೇಶದ ವಸತಿ ಪ್ರದೇಶಗಳಿಗೆ ವಿದ್ಯುತ್, ನೀರು, ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಸೂಚಿಸಿದ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತ ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿ, ವಿದ್ಯುತ್ ಮಾರ್ಗ ಅಳವಡಿಕೆಗೆ ಅರಣ್ಯ ಭೂಮಿ ಪರಿವರ್ತನೆಗಾಗಿ ಪರಿವೇಶ್ ಪೋರ್ಟಲ್ ನಲ್ಲಿ ಅರ್ಜಿ ಹಾಕಿಸಿ, ಅನುಮತಿ ಪಡೆಯಲು ಕ್ರಮ ವಹಿಸಿದ್ದರು. ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿದ್ದರು.
ಬೆಳ್ತಂಗಡಿಯ ಕಾಂಗ್ರೆಸ್ ನಾಯಕ ರಕ್ಷಿತ್ ಶಿವರಾಂ ಅವರು ಸ್ವಯಂ ಆಸಕ್ತಿಯಿಂದ ದೆಹಲಿಗೆ ತೆರಳಿ, ಕೇಂದ್ರ ಸರ್ಕಾರದ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಇಲಾಖೆಗಳಿಗೆ ಹೋಗಿ ಶೀಘ್ರ ಅನುಮತಿ ದೊರಕಿಸಲು ಶ್ರಮಿಸಿದ್ದಾರೆ.
ಸರ್ಕಾರದ ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಂಘಟಿತ ಪ್ರಯತ್ನದ ಫಲವಾಗಿ ಸ್ವಾತಂತ್ರ್ಯ ಬಂದು 75 ವರ್ಷಗಳ ಬಳಿಕ ಪಂಜಾಲ, ಮಾಳಿಗೆ ಬೈಲಿನ 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ ಲಭಿಸಿದೆ. ಮಾ.18ರ ಮಂಗಳವಾರ ಈ ಸಂಬಂಧ ರಾಜ್ಯದ ಮುಖ್ಯ ಕಾರ್ಯದರ್ಶಿ ನೇತೃತ್ವದ ಸಭೆಯಲ್ಲಿ ಈ ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಅನುಮೋದನೆ ಲಭಿಸುವ ನಿರೀಕ್ಷೆ ಇದೆ.
Forest Department Approves Electricity Access for 15 Malekudiya Tribal Families in Belthangady.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
20-02-26 02:31 pm
Mangalore Correspondent
ಅಂತಾರಾಜ್ಯ ಮಾದಕ ವಸ್ತು ಮಾರಾಟ ಜಾಲದ ಆರೋಪಿಗಳು ವಶಕ್...
20-02-26 11:31 am
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm