ಬ್ರೇಕಿಂಗ್ ನ್ಯೂಸ್
18-03-25 08:53 pm Mangalore Correspondent ಕರಾವಳಿ
ಮಂಗಳೂರು, ಮಾ.18 : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಟ್ಟ ಅಡವಿಯ ನಡುವೆ ಇರುವ ಸುಲ್ಕೇರಿ ಮೊಗ್ರು ಗ್ರಾಮದ ಪಂಜಾಲ, ಮಾಳಿಗೆ ಬೈಲಿನ 15 ಆದಿವಾಸಿ ಕುಟುಂಬ ಸೇರಿ ಒಟ್ಟು 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ ಲಭಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 27ರಂದು ನಡೆದ ಸಭೆಯಲ್ಲಿ ಆದಿವಾಸಿಗಳು ನೆಲೆಸಿರುವ ಅರಣ್ಯ ಪ್ರದೇಶದ ವಸತಿ ಪ್ರದೇಶಗಳಿಗೆ ವಿದ್ಯುತ್, ನೀರು, ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಸೂಚಿಸಿದ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತ ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿ, ವಿದ್ಯುತ್ ಮಾರ್ಗ ಅಳವಡಿಕೆಗೆ ಅರಣ್ಯ ಭೂಮಿ ಪರಿವರ್ತನೆಗಾಗಿ ಪರಿವೇಶ್ ಪೋರ್ಟಲ್ ನಲ್ಲಿ ಅರ್ಜಿ ಹಾಕಿಸಿ, ಅನುಮತಿ ಪಡೆಯಲು ಕ್ರಮ ವಹಿಸಿದ್ದರು. ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿದ್ದರು.
ಬೆಳ್ತಂಗಡಿಯ ಕಾಂಗ್ರೆಸ್ ನಾಯಕ ರಕ್ಷಿತ್ ಶಿವರಾಂ ಅವರು ಸ್ವಯಂ ಆಸಕ್ತಿಯಿಂದ ದೆಹಲಿಗೆ ತೆರಳಿ, ಕೇಂದ್ರ ಸರ್ಕಾರದ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಇಲಾಖೆಗಳಿಗೆ ಹೋಗಿ ಶೀಘ್ರ ಅನುಮತಿ ದೊರಕಿಸಲು ಶ್ರಮಿಸಿದ್ದಾರೆ.
ಸರ್ಕಾರದ ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಂಘಟಿತ ಪ್ರಯತ್ನದ ಫಲವಾಗಿ ಸ್ವಾತಂತ್ರ್ಯ ಬಂದು 75 ವರ್ಷಗಳ ಬಳಿಕ ಪಂಜಾಲ, ಮಾಳಿಗೆ ಬೈಲಿನ 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ ಲಭಿಸಿದೆ. ಮಾ.18ರ ಮಂಗಳವಾರ ಈ ಸಂಬಂಧ ರಾಜ್ಯದ ಮುಖ್ಯ ಕಾರ್ಯದರ್ಶಿ ನೇತೃತ್ವದ ಸಭೆಯಲ್ಲಿ ಈ ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಅನುಮೋದನೆ ಲಭಿಸುವ ನಿರೀಕ್ಷೆ ಇದೆ.
Forest Department Approves Electricity Access for 15 Malekudiya Tribal Families in Belthangady.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
21-12-25 11:04 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am