ಬ್ರೇಕಿಂಗ್ ನ್ಯೂಸ್
18-03-25 08:53 pm Mangalore Correspondent ಕರಾವಳಿ
ಮಂಗಳೂರು, ಮಾ.18 : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಟ್ಟ ಅಡವಿಯ ನಡುವೆ ಇರುವ ಸುಲ್ಕೇರಿ ಮೊಗ್ರು ಗ್ರಾಮದ ಪಂಜಾಲ, ಮಾಳಿಗೆ ಬೈಲಿನ 15 ಆದಿವಾಸಿ ಕುಟುಂಬ ಸೇರಿ ಒಟ್ಟು 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ ಲಭಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 27ರಂದು ನಡೆದ ಸಭೆಯಲ್ಲಿ ಆದಿವಾಸಿಗಳು ನೆಲೆಸಿರುವ ಅರಣ್ಯ ಪ್ರದೇಶದ ವಸತಿ ಪ್ರದೇಶಗಳಿಗೆ ವಿದ್ಯುತ್, ನೀರು, ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಸೂಚಿಸಿದ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತ ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿ, ವಿದ್ಯುತ್ ಮಾರ್ಗ ಅಳವಡಿಕೆಗೆ ಅರಣ್ಯ ಭೂಮಿ ಪರಿವರ್ತನೆಗಾಗಿ ಪರಿವೇಶ್ ಪೋರ್ಟಲ್ ನಲ್ಲಿ ಅರ್ಜಿ ಹಾಕಿಸಿ, ಅನುಮತಿ ಪಡೆಯಲು ಕ್ರಮ ವಹಿಸಿದ್ದರು. ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿದ್ದರು.
ಬೆಳ್ತಂಗಡಿಯ ಕಾಂಗ್ರೆಸ್ ನಾಯಕ ರಕ್ಷಿತ್ ಶಿವರಾಂ ಅವರು ಸ್ವಯಂ ಆಸಕ್ತಿಯಿಂದ ದೆಹಲಿಗೆ ತೆರಳಿ, ಕೇಂದ್ರ ಸರ್ಕಾರದ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಇಲಾಖೆಗಳಿಗೆ ಹೋಗಿ ಶೀಘ್ರ ಅನುಮತಿ ದೊರಕಿಸಲು ಶ್ರಮಿಸಿದ್ದಾರೆ.
ಸರ್ಕಾರದ ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಂಘಟಿತ ಪ್ರಯತ್ನದ ಫಲವಾಗಿ ಸ್ವಾತಂತ್ರ್ಯ ಬಂದು 75 ವರ್ಷಗಳ ಬಳಿಕ ಪಂಜಾಲ, ಮಾಳಿಗೆ ಬೈಲಿನ 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ ಲಭಿಸಿದೆ. ಮಾ.18ರ ಮಂಗಳವಾರ ಈ ಸಂಬಂಧ ರಾಜ್ಯದ ಮುಖ್ಯ ಕಾರ್ಯದರ್ಶಿ ನೇತೃತ್ವದ ಸಭೆಯಲ್ಲಿ ಈ ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಅನುಮೋದನೆ ಲಭಿಸುವ ನಿರೀಕ್ಷೆ ಇದೆ.
Forest Department Approves Electricity Access for 15 Malekudiya Tribal Families in Belthangady.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am