ಬ್ರೇಕಿಂಗ್ ನ್ಯೂಸ್
22-03-25 03:15 pm Mangalore Correspondent ಕರಾವಳಿ
ಸುಳ್ಯ, ಮಾರ್ಚ್ 22 : ನಾಯಿಮರಿಯೊಂದು ಕಡಿತಕ್ಕೊಳಗಾಗಿದ್ದ ಮಹಿಳೆಯೊಬ್ಬರು ರೇಬಿಸ್ ಕಾಯಿಲೆಗೆ ತುತ್ತಾಗಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಸುಳ್ಯ ಗಡಿಭಾಗ ಸಂಪಾಜೆಯಲ್ಲಿ ನಡೆದಿದೆ.
ಸುಳ್ಯ ಗಡಿಭಾಗದ ಸಂಪಾಜೆಯಲ್ಲಿ ಘಟನೆ ನಡೆದಿದ್ದು ಕಲ್ಲುಗುಂಡಿ ಬಳಿಯ 42 ವರ್ಷದ ಮಹಿಳೆಗೆ ಫೆಬ್ರವರಿ 7ರಂದು ಅರಂತೋಡಿನಲ್ಲಿ ತೋಟದ ಕೆಲಸಕ್ಕೆ ತೆರಳಿದ್ದಾಗ ನಾಯಿ ಮರಿಯೊಂದು ಅವರಿಗೆ ಕಚ್ಚಿತ್ತು. ಆದರೆ ಮಹಿಳೆ ಈ ಬಗ್ಗೆ ಯಾರಿಗೂ ತಿಳಿಸಿರಲಿಲ್ಲ ಹಾಗೂ ಚಿಕಿತ್ಸೆಯನ್ನೂ ಪಡೆದಿರಲಿಲ್ಲ. ಸೋಮವಾರ ಅವರಿಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದಲ್ಲದೆ, ವಿಚಿತ್ರವಾಗಿ ವರ್ತಿಸತೊಡಗಿದ್ದರು. ಹಾಗಾಗಿ ಸುಳ್ಯದ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿದ್ದರು.
ಈ ವೇಳೆ ನೀರನ್ನು ನೋಡಿ ಬೊಬ್ಬೆ ಹಾಕುವುದು ಸಹಿತ ವಿಚಿತ್ರ ವರ್ತನೆ ತೋರುತ್ತಿದ್ದ ಆಕೆಯೊಂದಿಗೆ ವೈದ್ಯರು ಪೂರಕ ಮಾಹಿತಿ ಕೇಳಿದಾಗ ನಾಯಿ ಕಚ್ಚಿದ್ದ ಬಗ್ಗೆ ತಿಳಿಸಿದ್ದರು. ಬಳಿಕ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಮಾರ್ಚ್ 20ರಂದು ಮಹಿಳೆ ಮೃತಪಟ್ಟಿದ್ದಾರೆ. ಇತ್ತ ಆ ನಾಯಿ ಮರಿ ಕಾಣದಾಗಿದ್ದು ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. ತಾಲೂಕು ವೈದ್ಯಾಧಿಕಾರಿ ಸಲಹೆಯಂತೆ ನಾಯಿ ಸಂಪರ್ಕಕ್ಕೆ ಬಂದ ಎಲ್ಲರೂ ಏಂಟಿ ರೇಬಿಸ್ ಚುಚ್ಚುಮದ್ದು ಪಡೆಯುವಂತೆ ಸೂಚಿಸಿದ್ದಾರೆ.
In a tragic incident, a 42-year-old woman has died from rabies in Sampaje, a town in Sullia, Mangalore. The woman reportedly contracted the virus after being bitten by dog.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm