ಬ್ರೇಕಿಂಗ್ ನ್ಯೂಸ್
30-03-25 02:39 pm Mangalore Correspondent ಕರಾವಳಿ
ಉಳ್ಳಾಲ, ಮಾ.30: ಲಕೋಟೆಯೊಂದರಲ್ಲಿ ಸಂಸ್ಕರಿಸಿಟ್ಟ ಮಾನವ ಅಸ್ಥಿಗಳು ಕುಂಪಲ ಚಿತ್ರಾಂಜಲಿ ನಗರದಲ್ಲಿ ಶನಿವಾರ ರಾತ್ರಿ ಪತ್ತೆಯಾಗಿದ್ದು, ಘಟನೆಯಿಂದ ಬೇಸ್ತು ಬಿದ್ದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಅಸ್ಥಿಗಳ ಹಿಂದಿನ ಅಸಲಿಯತ್ತನ್ನ ಪತ್ತೆ ಹಚ್ಚಿದ್ದಾರೆ.
ಶನಿವಾರ ನಡುರಾತ್ರಿ ಚಿತ್ರಾಂಜಲಿ ನಗರದ ಮನೆಯ ಆವರಣದ ಬಳಿ ಪ್ರಯೋಗಾಲಯದ ಮಾದರಿಯ ಅಸ್ಥಿಗಳು ಲಕೋಟೆಯಲ್ಲಿ ಸಂಸ್ಕರಿಸಿದ ರೀತಿಯಲ್ಲಿ ಪತ್ತೆಯಾಗಿದ್ದು ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿ ಸ್ಥಳದಲ್ಲಿ ಸಾಕಷ್ಟು ಜನರು ಜಮಾಯಿಸಿದ್ದರು. ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಉಳ್ಳಾಲ ಪೊಲೀಸರು ಅಸ್ಥಿಗಳು ತುಂಬಿದ್ದ ಲಕೋಟೆಯನ್ನ ವಶಕ್ಕೆ ಪಡೆದಿದ್ದರು.



ಮಹಿಳೆಯ ಎಡವಟ್ಟು, ಬೇಸ್ತು ಬಿದ್ದ ಜನರು
ಚಿತ್ರಾಂಜಲಿ ನಗರದಲ್ಲಿ ದೊರೆತ ಅಸ್ಥಿಗಳನ್ನ ಸ್ಥಳೀಯ ಮಹಿಳೆಯೇ ತನ್ನ ಮನೆಯ ಆವರಣದ ಬಳಿ ಎಸೆದಿರುವ ವಿಚಾರ ಪೊಲೀಸರ ವಿಚಾರಣೆಯಲ್ಲಿ ತಿಳಿದು ಬಂದಿದೆ. ಮಹಿಳೆಯು ಮಂಗಳೂರಿನ ವೈದ್ಯರೋರ್ವರ ಮನೆಯಲ್ಲಿ ಕೆಲಸಕ್ಕಿದ್ದು ನಿವೃತ್ತಿ ಹೊಂದಿದ್ದ ವೈದ್ಯರು ಮನೆ ಬಿಟ್ಟು ಹೋದಾಗ ಮನೆಯಲ್ಲಿದ್ದ ಕೆಲ ಸಾಮಾಗ್ರಿಗಳನ್ನ ಮಹಿಳೆ ತಂದಿದ್ದರೆನ್ನಲಾಗಿದೆ. ವೈದ್ಯರ ಮನೆಯಿಂದ ತಂದಿದ್ದ ಸಂಸ್ಕರಿಸಿಡಲಾದ ಅಸ್ಥಿಗಳ ಲಕೋಟೆಯನ್ನ ಮಹಿಳೆಯು ತನ್ನ ಮನೆಯ ಕಂಪೌಡ್ ಬಳಿ ಎಸೆದಿದ್ದರೆನ್ನಲಾಗಿದೆ.
ಕಳೆದ ವಾರ ಚಿತ್ರಾಂಜಲಿ ನಗರದಲ್ಲಿ ಸ್ಥಳೀಯ ಸಂಘಟನೆಯೊಂದರ ವಾರ್ಷಿಕೋತ್ಸವ ನಡೆದಿತ್ತು. ವಾರ್ಷಿಕೋತ್ಸವದ ವೇದಿಕೆಯಲ್ಲಿ ನೃತ್ಯ ಪ್ರದರ್ಶನ ನೀಡಿದ್ದ ಯುವಕನೋರ್ವನ ಬಾಡಿಗೆ ಕಾಸ್ಟ್ಯೂಮ್ ಈ ಪ್ರದೇಶದಲ್ಲೇ ಕಳೆದು ಹೋಗಿತ್ತು. ನಿನ್ನೆ ರಾತ್ರಿ ಯುವಕನು ಕಾಸ್ಟ್ಯೂಮ್ ಹುಡುಕಲು ಬಂದಾಗ ಅಸ್ಥಿಗಳ ಲಕೋಟೆ ದೊರೆತಿದೆ. ಅಸ್ಥಿಗಳನ್ನ ಕಂಡು ಹೌಹಾರಿದ ಯುವಕ ಊರೆಲ್ಲಾ ಸುದ್ದಿ ಹಬ್ಬಿಸಿದ್ದು, ಸ್ಥಳದಲ್ಲಿ ಜನ ಜಮಾಯಿಸಿದ್ದಾರೆ. ಒಟ್ಟಾರೆ ಮಹಿಳೆ ಮಾಡಿದ ಎಡವಟ್ಟಿನಿಂದಾಗಿ ಊರವರು ಮತ್ತು ಪೊಲೀಸರು ಅಸ್ಥಿಗಳ ಬಗ್ಗೆ ನಾನಾ ರೀತಿಯ ಹುಳಗಳನ್ನ ತಲೆಗೆ ಬಿಟ್ಟು ರಾತ್ರಿ ನಿದ್ದೆಗೆಡುವಂತಾಗಿತ್ತು.
Mangalore Processed Human Remains Found in Envelope Spark Panic in Kumpala as Mysterious Shadow Haunts Residents.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm