ಬ್ರೇಕಿಂಗ್ ನ್ಯೂಸ್
30-03-25 02:39 pm Mangalore Correspondent ಕರಾವಳಿ
ಉಳ್ಳಾಲ, ಮಾ.30: ಲಕೋಟೆಯೊಂದರಲ್ಲಿ ಸಂಸ್ಕರಿಸಿಟ್ಟ ಮಾನವ ಅಸ್ಥಿಗಳು ಕುಂಪಲ ಚಿತ್ರಾಂಜಲಿ ನಗರದಲ್ಲಿ ಶನಿವಾರ ರಾತ್ರಿ ಪತ್ತೆಯಾಗಿದ್ದು, ಘಟನೆಯಿಂದ ಬೇಸ್ತು ಬಿದ್ದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಅಸ್ಥಿಗಳ ಹಿಂದಿನ ಅಸಲಿಯತ್ತನ್ನ ಪತ್ತೆ ಹಚ್ಚಿದ್ದಾರೆ.
ಶನಿವಾರ ನಡುರಾತ್ರಿ ಚಿತ್ರಾಂಜಲಿ ನಗರದ ಮನೆಯ ಆವರಣದ ಬಳಿ ಪ್ರಯೋಗಾಲಯದ ಮಾದರಿಯ ಅಸ್ಥಿಗಳು ಲಕೋಟೆಯಲ್ಲಿ ಸಂಸ್ಕರಿಸಿದ ರೀತಿಯಲ್ಲಿ ಪತ್ತೆಯಾಗಿದ್ದು ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿ ಸ್ಥಳದಲ್ಲಿ ಸಾಕಷ್ಟು ಜನರು ಜಮಾಯಿಸಿದ್ದರು. ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಉಳ್ಳಾಲ ಪೊಲೀಸರು ಅಸ್ಥಿಗಳು ತುಂಬಿದ್ದ ಲಕೋಟೆಯನ್ನ ವಶಕ್ಕೆ ಪಡೆದಿದ್ದರು.



ಮಹಿಳೆಯ ಎಡವಟ್ಟು, ಬೇಸ್ತು ಬಿದ್ದ ಜನರು
ಚಿತ್ರಾಂಜಲಿ ನಗರದಲ್ಲಿ ದೊರೆತ ಅಸ್ಥಿಗಳನ್ನ ಸ್ಥಳೀಯ ಮಹಿಳೆಯೇ ತನ್ನ ಮನೆಯ ಆವರಣದ ಬಳಿ ಎಸೆದಿರುವ ವಿಚಾರ ಪೊಲೀಸರ ವಿಚಾರಣೆಯಲ್ಲಿ ತಿಳಿದು ಬಂದಿದೆ. ಮಹಿಳೆಯು ಮಂಗಳೂರಿನ ವೈದ್ಯರೋರ್ವರ ಮನೆಯಲ್ಲಿ ಕೆಲಸಕ್ಕಿದ್ದು ನಿವೃತ್ತಿ ಹೊಂದಿದ್ದ ವೈದ್ಯರು ಮನೆ ಬಿಟ್ಟು ಹೋದಾಗ ಮನೆಯಲ್ಲಿದ್ದ ಕೆಲ ಸಾಮಾಗ್ರಿಗಳನ್ನ ಮಹಿಳೆ ತಂದಿದ್ದರೆನ್ನಲಾಗಿದೆ. ವೈದ್ಯರ ಮನೆಯಿಂದ ತಂದಿದ್ದ ಸಂಸ್ಕರಿಸಿಡಲಾದ ಅಸ್ಥಿಗಳ ಲಕೋಟೆಯನ್ನ ಮಹಿಳೆಯು ತನ್ನ ಮನೆಯ ಕಂಪೌಡ್ ಬಳಿ ಎಸೆದಿದ್ದರೆನ್ನಲಾಗಿದೆ.
ಕಳೆದ ವಾರ ಚಿತ್ರಾಂಜಲಿ ನಗರದಲ್ಲಿ ಸ್ಥಳೀಯ ಸಂಘಟನೆಯೊಂದರ ವಾರ್ಷಿಕೋತ್ಸವ ನಡೆದಿತ್ತು. ವಾರ್ಷಿಕೋತ್ಸವದ ವೇದಿಕೆಯಲ್ಲಿ ನೃತ್ಯ ಪ್ರದರ್ಶನ ನೀಡಿದ್ದ ಯುವಕನೋರ್ವನ ಬಾಡಿಗೆ ಕಾಸ್ಟ್ಯೂಮ್ ಈ ಪ್ರದೇಶದಲ್ಲೇ ಕಳೆದು ಹೋಗಿತ್ತು. ನಿನ್ನೆ ರಾತ್ರಿ ಯುವಕನು ಕಾಸ್ಟ್ಯೂಮ್ ಹುಡುಕಲು ಬಂದಾಗ ಅಸ್ಥಿಗಳ ಲಕೋಟೆ ದೊರೆತಿದೆ. ಅಸ್ಥಿಗಳನ್ನ ಕಂಡು ಹೌಹಾರಿದ ಯುವಕ ಊರೆಲ್ಲಾ ಸುದ್ದಿ ಹಬ್ಬಿಸಿದ್ದು, ಸ್ಥಳದಲ್ಲಿ ಜನ ಜಮಾಯಿಸಿದ್ದಾರೆ. ಒಟ್ಟಾರೆ ಮಹಿಳೆ ಮಾಡಿದ ಎಡವಟ್ಟಿನಿಂದಾಗಿ ಊರವರು ಮತ್ತು ಪೊಲೀಸರು ಅಸ್ಥಿಗಳ ಬಗ್ಗೆ ನಾನಾ ರೀತಿಯ ಹುಳಗಳನ್ನ ತಲೆಗೆ ಬಿಟ್ಟು ರಾತ್ರಿ ನಿದ್ದೆಗೆಡುವಂತಾಗಿತ್ತು.
Mangalore Processed Human Remains Found in Envelope Spark Panic in Kumpala as Mysterious Shadow Haunts Residents.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
21-12-25 11:04 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am