ಬ್ರೇಕಿಂಗ್ ನ್ಯೂಸ್
30-03-25 02:39 pm Mangalore Correspondent ಕರಾವಳಿ
ಉಳ್ಳಾಲ, ಮಾ.30: ಲಕೋಟೆಯೊಂದರಲ್ಲಿ ಸಂಸ್ಕರಿಸಿಟ್ಟ ಮಾನವ ಅಸ್ಥಿಗಳು ಕುಂಪಲ ಚಿತ್ರಾಂಜಲಿ ನಗರದಲ್ಲಿ ಶನಿವಾರ ರಾತ್ರಿ ಪತ್ತೆಯಾಗಿದ್ದು, ಘಟನೆಯಿಂದ ಬೇಸ್ತು ಬಿದ್ದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಅಸ್ಥಿಗಳ ಹಿಂದಿನ ಅಸಲಿಯತ್ತನ್ನ ಪತ್ತೆ ಹಚ್ಚಿದ್ದಾರೆ.
ಶನಿವಾರ ನಡುರಾತ್ರಿ ಚಿತ್ರಾಂಜಲಿ ನಗರದ ಮನೆಯ ಆವರಣದ ಬಳಿ ಪ್ರಯೋಗಾಲಯದ ಮಾದರಿಯ ಅಸ್ಥಿಗಳು ಲಕೋಟೆಯಲ್ಲಿ ಸಂಸ್ಕರಿಸಿದ ರೀತಿಯಲ್ಲಿ ಪತ್ತೆಯಾಗಿದ್ದು ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿ ಸ್ಥಳದಲ್ಲಿ ಸಾಕಷ್ಟು ಜನರು ಜಮಾಯಿಸಿದ್ದರು. ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಉಳ್ಳಾಲ ಪೊಲೀಸರು ಅಸ್ಥಿಗಳು ತುಂಬಿದ್ದ ಲಕೋಟೆಯನ್ನ ವಶಕ್ಕೆ ಪಡೆದಿದ್ದರು.



ಮಹಿಳೆಯ ಎಡವಟ್ಟು, ಬೇಸ್ತು ಬಿದ್ದ ಜನರು
ಚಿತ್ರಾಂಜಲಿ ನಗರದಲ್ಲಿ ದೊರೆತ ಅಸ್ಥಿಗಳನ್ನ ಸ್ಥಳೀಯ ಮಹಿಳೆಯೇ ತನ್ನ ಮನೆಯ ಆವರಣದ ಬಳಿ ಎಸೆದಿರುವ ವಿಚಾರ ಪೊಲೀಸರ ವಿಚಾರಣೆಯಲ್ಲಿ ತಿಳಿದು ಬಂದಿದೆ. ಮಹಿಳೆಯು ಮಂಗಳೂರಿನ ವೈದ್ಯರೋರ್ವರ ಮನೆಯಲ್ಲಿ ಕೆಲಸಕ್ಕಿದ್ದು ನಿವೃತ್ತಿ ಹೊಂದಿದ್ದ ವೈದ್ಯರು ಮನೆ ಬಿಟ್ಟು ಹೋದಾಗ ಮನೆಯಲ್ಲಿದ್ದ ಕೆಲ ಸಾಮಾಗ್ರಿಗಳನ್ನ ಮಹಿಳೆ ತಂದಿದ್ದರೆನ್ನಲಾಗಿದೆ. ವೈದ್ಯರ ಮನೆಯಿಂದ ತಂದಿದ್ದ ಸಂಸ್ಕರಿಸಿಡಲಾದ ಅಸ್ಥಿಗಳ ಲಕೋಟೆಯನ್ನ ಮಹಿಳೆಯು ತನ್ನ ಮನೆಯ ಕಂಪೌಡ್ ಬಳಿ ಎಸೆದಿದ್ದರೆನ್ನಲಾಗಿದೆ.
ಕಳೆದ ವಾರ ಚಿತ್ರಾಂಜಲಿ ನಗರದಲ್ಲಿ ಸ್ಥಳೀಯ ಸಂಘಟನೆಯೊಂದರ ವಾರ್ಷಿಕೋತ್ಸವ ನಡೆದಿತ್ತು. ವಾರ್ಷಿಕೋತ್ಸವದ ವೇದಿಕೆಯಲ್ಲಿ ನೃತ್ಯ ಪ್ರದರ್ಶನ ನೀಡಿದ್ದ ಯುವಕನೋರ್ವನ ಬಾಡಿಗೆ ಕಾಸ್ಟ್ಯೂಮ್ ಈ ಪ್ರದೇಶದಲ್ಲೇ ಕಳೆದು ಹೋಗಿತ್ತು. ನಿನ್ನೆ ರಾತ್ರಿ ಯುವಕನು ಕಾಸ್ಟ್ಯೂಮ್ ಹುಡುಕಲು ಬಂದಾಗ ಅಸ್ಥಿಗಳ ಲಕೋಟೆ ದೊರೆತಿದೆ. ಅಸ್ಥಿಗಳನ್ನ ಕಂಡು ಹೌಹಾರಿದ ಯುವಕ ಊರೆಲ್ಲಾ ಸುದ್ದಿ ಹಬ್ಬಿಸಿದ್ದು, ಸ್ಥಳದಲ್ಲಿ ಜನ ಜಮಾಯಿಸಿದ್ದಾರೆ. ಒಟ್ಟಾರೆ ಮಹಿಳೆ ಮಾಡಿದ ಎಡವಟ್ಟಿನಿಂದಾಗಿ ಊರವರು ಮತ್ತು ಪೊಲೀಸರು ಅಸ್ಥಿಗಳ ಬಗ್ಗೆ ನಾನಾ ರೀತಿಯ ಹುಳಗಳನ್ನ ತಲೆಗೆ ಬಿಟ್ಟು ರಾತ್ರಿ ನಿದ್ದೆಗೆಡುವಂತಾಗಿತ್ತು.
Mangalore Processed Human Remains Found in Envelope Spark Panic in Kumpala as Mysterious Shadow Haunts Residents.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
20-02-26 04:18 pm
Mangalore Correspondent
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
20-02-26 03:03 pm
HK News Desk
ಬಿಎಸ್ಸೆನ್ನೆಲ್ ಕೇಬಲ್ ಕಳ್ಳತನ ; ಭೂಗತ ಹಾಕಿದ್ದ ತಾಮ...
20-02-26 02:31 pm
ಅಂತಾರಾಜ್ಯ ಮಾದಕ ವಸ್ತು ಮಾರಾಟ ಜಾಲದ ಆರೋಪಿಗಳು ವಶಕ್...
20-02-26 11:31 am
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm