ಬ್ರೇಕಿಂಗ್ ನ್ಯೂಸ್
30-03-25 02:39 pm Mangalore Correspondent ಕರಾವಳಿ
ಉಳ್ಳಾಲ, ಮಾ.30: ಲಕೋಟೆಯೊಂದರಲ್ಲಿ ಸಂಸ್ಕರಿಸಿಟ್ಟ ಮಾನವ ಅಸ್ಥಿಗಳು ಕುಂಪಲ ಚಿತ್ರಾಂಜಲಿ ನಗರದಲ್ಲಿ ಶನಿವಾರ ರಾತ್ರಿ ಪತ್ತೆಯಾಗಿದ್ದು, ಘಟನೆಯಿಂದ ಬೇಸ್ತು ಬಿದ್ದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಅಸ್ಥಿಗಳ ಹಿಂದಿನ ಅಸಲಿಯತ್ತನ್ನ ಪತ್ತೆ ಹಚ್ಚಿದ್ದಾರೆ.
ಶನಿವಾರ ನಡುರಾತ್ರಿ ಚಿತ್ರಾಂಜಲಿ ನಗರದ ಮನೆಯ ಆವರಣದ ಬಳಿ ಪ್ರಯೋಗಾಲಯದ ಮಾದರಿಯ ಅಸ್ಥಿಗಳು ಲಕೋಟೆಯಲ್ಲಿ ಸಂಸ್ಕರಿಸಿದ ರೀತಿಯಲ್ಲಿ ಪತ್ತೆಯಾಗಿದ್ದು ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿ ಸ್ಥಳದಲ್ಲಿ ಸಾಕಷ್ಟು ಜನರು ಜಮಾಯಿಸಿದ್ದರು. ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಉಳ್ಳಾಲ ಪೊಲೀಸರು ಅಸ್ಥಿಗಳು ತುಂಬಿದ್ದ ಲಕೋಟೆಯನ್ನ ವಶಕ್ಕೆ ಪಡೆದಿದ್ದರು.



ಮಹಿಳೆಯ ಎಡವಟ್ಟು, ಬೇಸ್ತು ಬಿದ್ದ ಜನರು
ಚಿತ್ರಾಂಜಲಿ ನಗರದಲ್ಲಿ ದೊರೆತ ಅಸ್ಥಿಗಳನ್ನ ಸ್ಥಳೀಯ ಮಹಿಳೆಯೇ ತನ್ನ ಮನೆಯ ಆವರಣದ ಬಳಿ ಎಸೆದಿರುವ ವಿಚಾರ ಪೊಲೀಸರ ವಿಚಾರಣೆಯಲ್ಲಿ ತಿಳಿದು ಬಂದಿದೆ. ಮಹಿಳೆಯು ಮಂಗಳೂರಿನ ವೈದ್ಯರೋರ್ವರ ಮನೆಯಲ್ಲಿ ಕೆಲಸಕ್ಕಿದ್ದು ನಿವೃತ್ತಿ ಹೊಂದಿದ್ದ ವೈದ್ಯರು ಮನೆ ಬಿಟ್ಟು ಹೋದಾಗ ಮನೆಯಲ್ಲಿದ್ದ ಕೆಲ ಸಾಮಾಗ್ರಿಗಳನ್ನ ಮಹಿಳೆ ತಂದಿದ್ದರೆನ್ನಲಾಗಿದೆ. ವೈದ್ಯರ ಮನೆಯಿಂದ ತಂದಿದ್ದ ಸಂಸ್ಕರಿಸಿಡಲಾದ ಅಸ್ಥಿಗಳ ಲಕೋಟೆಯನ್ನ ಮಹಿಳೆಯು ತನ್ನ ಮನೆಯ ಕಂಪೌಡ್ ಬಳಿ ಎಸೆದಿದ್ದರೆನ್ನಲಾಗಿದೆ.
ಕಳೆದ ವಾರ ಚಿತ್ರಾಂಜಲಿ ನಗರದಲ್ಲಿ ಸ್ಥಳೀಯ ಸಂಘಟನೆಯೊಂದರ ವಾರ್ಷಿಕೋತ್ಸವ ನಡೆದಿತ್ತು. ವಾರ್ಷಿಕೋತ್ಸವದ ವೇದಿಕೆಯಲ್ಲಿ ನೃತ್ಯ ಪ್ರದರ್ಶನ ನೀಡಿದ್ದ ಯುವಕನೋರ್ವನ ಬಾಡಿಗೆ ಕಾಸ್ಟ್ಯೂಮ್ ಈ ಪ್ರದೇಶದಲ್ಲೇ ಕಳೆದು ಹೋಗಿತ್ತು. ನಿನ್ನೆ ರಾತ್ರಿ ಯುವಕನು ಕಾಸ್ಟ್ಯೂಮ್ ಹುಡುಕಲು ಬಂದಾಗ ಅಸ್ಥಿಗಳ ಲಕೋಟೆ ದೊರೆತಿದೆ. ಅಸ್ಥಿಗಳನ್ನ ಕಂಡು ಹೌಹಾರಿದ ಯುವಕ ಊರೆಲ್ಲಾ ಸುದ್ದಿ ಹಬ್ಬಿಸಿದ್ದು, ಸ್ಥಳದಲ್ಲಿ ಜನ ಜಮಾಯಿಸಿದ್ದಾರೆ. ಒಟ್ಟಾರೆ ಮಹಿಳೆ ಮಾಡಿದ ಎಡವಟ್ಟಿನಿಂದಾಗಿ ಊರವರು ಮತ್ತು ಪೊಲೀಸರು ಅಸ್ಥಿಗಳ ಬಗ್ಗೆ ನಾನಾ ರೀತಿಯ ಹುಳಗಳನ್ನ ತಲೆಗೆ ಬಿಟ್ಟು ರಾತ್ರಿ ನಿದ್ದೆಗೆಡುವಂತಾಗಿತ್ತು.
Mangalore Processed Human Remains Found in Envelope Spark Panic in Kumpala as Mysterious Shadow Haunts Residents.
04-05-26 10:33 pm
HK News Desk
ಶೃಂಗೇರಿ ; ದಿಢೀರ್ ಮಾಜಿಯಾದ ಕಾಂಗ್ರೆಸ್ ಶಾಸಕ ರಾಜೇಗ...
04-05-26 07:16 pm
ಮಂಜೇಶ್ವರದಲ್ಲಿ ಮತ ಧ್ರುವೀಕರಣ ; 29,252 ಮತಗಳಿಂದ ಮ...
04-05-26 06:27 pm
ತ್ರಿಕೋನ ಸ್ಪರ್ಧೆ ನಿರೀಕ್ಷಿಸಿದ್ದ ಕಾಸರಗೋಡಿನಲ್ಲಿ ಮ...
04-05-26 04:14 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಟ್ಯಾಂಪರಿಂಗ್ ಆರೋಪ ; ಅ...
03-05-26 01:30 pm
04-05-26 09:51 pm
HK News Staffer
ತಿರುವನಂತಪುರಂ ಜಿಲ್ಲೆಯಲ್ಲೇ ಕಮಲ ಕಮಾಲ್ ; ಮೂರು ಕ್ಷ...
04-05-26 07:04 pm
ದೀದಿ ಕೋಟೆಗೆ ಕಮಲ ಲಗ್ಗೆ ; ಮೂರು ಬಾರಿ ಸಿಎಂ ಮಮತಾ ಸ...
04-05-26 01:16 pm
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm