ಬ್ರೇಕಿಂಗ್ ನ್ಯೂಸ್
30-03-25 03:07 pm Mangalore Correspondent ಕರಾವಳಿ
ಮಂಗಳೂರು, ಮಾ.30: ಮಂಗಳೂರು ನಗರದಿಂದ ಕೇರಳ ರಾಜ್ಯಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66ರ ಹಳೆಯ ನೇತ್ರಾವತಿ ಸೇತುವೆಯಲ್ಲಿ (ತಲಪಾಡಿ ಕಡೆಯಿಂದ ಮಂಗಳೂರು ನಗರಕ್ಕೆ ಬರುವ) ಹೆದ್ದಾರಿ ಪ್ರಾಧಿಕಾರದ ವತಿಯಿಂದ ದುರಸ್ತಿ ಕಾಮಗಾರಿ ನಡೆಯುವುದರಿಂದ ಎಪ್ರಿಲ್ 1ರಿಂದ 30ರ ವರೆಗೆ ಸಂಚಾರ ನಿಲುಗಡೆಯಾಗಲಿದೆ.
ಹೀಗಾಗಿ ಮಂಗಳೂರು ನಗರದಿಂದ ತಲಪಾಡಿ ಕಡೆಗೆ ಹೋಗುವ ಸೇತುವೆಯಲ್ಲಿ ದ್ವಿಮುಖ ಸಂಚಾರ ವ್ಯವಸ್ಥೆ ಮಾಡಲಾಗಿರುತ್ತದೆ. ಇದರಿಂದ ಪಂಪ್ವೆಲ್ ನಿಂದ ತೊಕ್ಕೊಟ್ಟು ವರೆಗೆ ಸದ್ರಿ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಲಿದೆ. ದುರಸ್ತಿ ಕಾಮಗಾರಿ ನಡೆಯುವ ದಿನಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆಗಳಿದ್ದು, ನೇತ್ರಾವತಿ ಸೇತುವೆ ಮೂಲಕ ಸಂಚರಿಸುವ ಎಲ್ಲಾ ವಾಹನಗಳ ಚಾಲಕರು/ ಸವಾರರು ಮತ್ತು ಸಾರ್ವಜನಿಕರು ಎಚ್ಚರಿಕೆಯಿಂದ ಚಲಿಸಬೇಕು ಹಾಗೂ ಪೀಕ್ ಅವರ್ ಗಳಲ್ಲಿ ಬೇರೆ ಮಾರ್ಗದಲ್ಲಿ ವಾಹನ ಸಂಚಾರವನ್ನು ಮಾಡುವಂತೆ ಪೊಲೀಸ್ ಇಲಾಖೆಯಿಂದ ಕೋರಲಾಗಿದೆ.

ಬದಲಿ ಮಾರ್ಗಕ್ಕೆ ವ್ಯವಸ್ಥೆ
ಮುಡಿಪು-ಕೊಣಾಜೆ-ದೇರಳಕಟ್ಟೆ ಕಡೆಯಿಂದ ಮಂಗಳೂರು ನಗರ ಕಡೆಗೆ ಸಂಚರಿಸುವ ಸ್ಥಳೀಯ ಲಘು ವಾಹನಗಳು/ದ್ವಿ ಚಕ್ರ ವಾಹನಗಳು ಕೊಣಾಜೆ- ಹರೇಕಳ(ಬ್ರಿಡ್ಜ್) ಅಡ್ಯಾರ್ ಮುಖಾಂತರ ಮಂಗಳೂರು ಕಡೆಗೆ ಸಂಚರಿಸಬಹುದಾಗಿದೆ.
ಮಂಗಳೂರು ಕಡೆಯಿಂದ ಕೊಣಾಜೆ-ಮುಡಿಪು- ದೇರಳಕಟ್ಟೆ ಕಡೆಗೆ ಸಂಚರಿಸುವ ಸ್ಥಳೀಯ ದ್ವಿ-ಚಕ್ರ / ಲಘು ವಾಹನಗಳು ಅಡ್ಯಾರ್-ಹರೇಕಳ(ಬ್ರಿಡ್ಜ್) ಮುಖಾಂತರ ಸಂಚರಿಸುವುದು.
ತಲಪಾಡಿ, ಉಳ್ಳಾಲ ಕಡೆಯಿಂದ ಬೆಂಗಳೂರು – ಉಪ್ಪಿನಂಗಡಿ – ಪುತ್ತೂರು - ಸುಳ್ಯ ಕಡೆಗೆ ಸಂಚರಿಸುವ ವಾಹನಗಳು ತೊಕ್ಕೊಟ್ಟಿನಿಂದ ಬಲಕ್ಕೆ ತಿರುಗಿ ಮುಡಿಪು – ಬೋಳಿಯಾರ್ -ಮೆಲ್ಕಾರ್ ಮೂಲಕ ಸಂಚರಿಸುವುದು.
ಬಿ.ಸಿ.ರೋಡ್ ಕಡೆಯಿಂದ ತಲಪಾಡಿ ಮತ್ತು ಕೇರಳ ಕಡೆಗೆ ಸಂಚರಿಸುವ ವಾಹನಗಳು ಮೆಲ್ಕಾರ್-ಮುಡಿಪು-ತೊಕ್ಕೊಟ್ಟು ಮುಖಾಂತರ ಸಂಚರಿಸಬಹುದು ಎಂದು ಪೊಲೀಸ್ ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
As part of ongoing infrastructure improvements, the Ullal Netravati Bridge will undergo essential repair work from April 1 to April 30. In light of this construction, local authorities are advising motorists to seek alternate routes to ensure smooth traffic flow and minimize delays.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm