ಬ್ರೇಕಿಂಗ್ ನ್ಯೂಸ್
01-04-25 09:12 pm Mangalore Correspondent ಕರಾವಳಿ
ಮಂಗಳೂರು, ಎ.1 : ಮಂಗಳೂರು ನಗರ ಮಧ್ಯದ ಕೊಡಿಯಾಲಬೈಲಿನ ಜೈಲಿನಲ್ಲಿ ಜಾಮರ್ ಅಳವಡಿಸಿರುವುದರಿಂದ ಸುತ್ತಮುತ್ತಲಿನ ಸರಕಾರಿ, ಖಾಸಗಿ ಕಚೇರಿ ಇನ್ನಿತರ ಕೆಲಸ ಮಾಡುತ್ತಿರುವವರು ಮತ್ತು ಇತರ ಸಾರ್ವಜನಿಕರಿಗೆ ತೀವ್ರ ಸಮಸ್ಯೆ ಎದುರಾಗಿದೆ. ಇದರ ಬಗ್ಗೆ ಈಗಾಗಲೇ ಬಂಧೀಖಾನೆ ಇಲಾಖೆಯ ಅಧಿಕಾರಿಗಳಿಗೆ ಮನವಿ ಕೊಟ್ಟಿದ್ದೇವೆ. ಇನ್ನು ಮೂರು ದಿನ ಸಮಯ ಕೊಡುತ್ತೇವೆ, ಜಾಮರ್ ಯಂತ್ರ ಸರಿಯಾಗದಿದ್ದರೆ ಜೈಲಿನ ಒಳಗೆ ನುಗ್ಗಿ ಜಾಮರ್ ಯಂತ್ರವನ್ನು ಕಿತ್ತು ಬಿಸಾಕುತ್ತೇವೆ ಎಂದು ಶಾಸಕ ವೇದವ್ಯಾಸ ಕಾಮತ್ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಶಾಸಕ ಕಾಮತ್, ಜೈಲಿನಲ್ಲಿ ಸಿಬಂದಿ ಮತ್ತು ಅಧಿಕಾರಿಗಳು ತಮ್ಮ ಕೆಲಸ ಸರಿಯಾಗಿ ಮಾಡಿದರೆ ಕೈದಿಗಳಿಗೆ ಮೊಬೈಲ್ ಹೇಗೆ ಸಿಗುತ್ತದೆ. ಅವರ ಕೈಗೆ ಮೊಬೈಲ್ ಕೊಡುವುದು ಯಾರೆಂದು ಪ್ರಶ್ನೆ ಬರುತ್ತದೆ. ಇವರು ಸರಿಯಾಗಿ ಕೆಲಸ ಮಾಡದಿರುವುದರಿಂದಲೇ ಜಾಮರ್ ಅಳವಡಿಸುವ ಪ್ರಮೇಯ ಬಂದಿದೆ. ಆದರೆ ಯಾವ ಜಾಮರ್ ಇದ್ದರೂ ಅದನ್ನು ಜೈಲಿನ ಒಳಗಡೆ ಸೀಮಿತಗೊಳಿಸಿ, ಸಾರ್ವಜನಿಕರಿಗೆ ತೊಂದರೆ ಕೊಡಬೇಡಿ ಎಂದು ಜೈಲು ಅಧಿಕಾರಿಗಳಿಗೆ ಮನವಿ ಕೊಟ್ಟಿದ್ದೇವೆ. ಜಿಲ್ಲಾಡಳಿತ, ಪೊಲೀಸ್ ಕಮಿಷನರ್ ಅವರಿಗೂ ಮನವಿ ನೀಡಿದ್ದೇವೆ. ರಾಜ್ಯ ಸರಕಾರದ ಉನ್ನತ ಅಧಿಕಾರಿಗಳಿಗೂ ತಿಳಿಸಿದ್ದೇವೆ.
ನಗರ ಮಧ್ಯ ಇರುವ ಜೈಲಿನಲ್ಲಿ ಏಕಾಏಕಿ ಜಾಮರ್ ಅಳವಡಿಸಿ ಜನರಿಗೆ ತೊಂದರೆ ಕೊಡುವುದನ್ನು ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ. ನಾವು ಎಪ್ರಿಲ್ 4ರಂದು ಬಿಜೆಪಿ ಕಾರ್ಯಕರ್ತರು ಸೇರಿಕೊಂಡು ರಾಸ್ತಾರೋಕೊ ನಡೆಸಿ ಜೈಲಿಗೆ ನುಗ್ಗುತ್ತೇವೆ, ಜಾಮರ್ ಯಂತ್ರವನ್ನು ಕಿತ್ತು ಬಿಸಾಕುತ್ತೇವೆ ಎಂದು ಶಾಸಕ ಕಾಮತ್ ಹೇಳಿದ್ದಾರೆ. ಕೈದಿಗಳಿಗೆ ಮೊಬೈಲ್ ನೀಡುವುದು, ಅದನ್ನು ಕಂಟ್ರೋಲ್ ಮಾಡಕ್ಕಾಗದ ಸ್ಥಿತಿಯಾಗಿರುವುದಕ್ಕೆ ಕಾಂಗ್ರೆಸ್ ಆಡಳಿತ ಕಾರಣ. ಇವರಿಂದಾಗಿಯೇ ಕೈದಿಗಳು ಜೈಲಿನಲ್ಲಿದ್ದುಕೊಂಡೇ ಮೊಬೈಲ್ ನಲ್ಲಿ ಧಮಕಿ ಹಾಕುವ ಸ್ಥಿತಿ ಬಂದಿದೆ. ಅದನ್ನು ನಿಯಂತ್ರಣ ಮಾಡಲಾಗದ ಅಧಿಕಾರಿ ವರ್ಗ ಈಗ ಜೈಲಿನೊಳಗೆ ಜಾಮರ್ ಹಾಕಿದ್ದಾರೆ ಎಂದು ಕಾಮತ್ ಹೇಳಿದ್ದಾರೆ.
Mangalore MLA Vedavyas Kamath has threatened to demolish the controversial "Jammer" installation following ongoing unresolved issues that have raised significant concerns among prison authorities. The Jammer, intended to block mobile signals within the vicinity of correctional facilities, has become a point of contention amid allegations of ineffective operation and safety concerns.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm