ಬ್ರೇಕಿಂಗ್ ನ್ಯೂಸ್
01-04-25 09:12 pm Mangalore Correspondent ಕರಾವಳಿ
ಮಂಗಳೂರು, ಎ.1 : ಮಂಗಳೂರು ನಗರ ಮಧ್ಯದ ಕೊಡಿಯಾಲಬೈಲಿನ ಜೈಲಿನಲ್ಲಿ ಜಾಮರ್ ಅಳವಡಿಸಿರುವುದರಿಂದ ಸುತ್ತಮುತ್ತಲಿನ ಸರಕಾರಿ, ಖಾಸಗಿ ಕಚೇರಿ ಇನ್ನಿತರ ಕೆಲಸ ಮಾಡುತ್ತಿರುವವರು ಮತ್ತು ಇತರ ಸಾರ್ವಜನಿಕರಿಗೆ ತೀವ್ರ ಸಮಸ್ಯೆ ಎದುರಾಗಿದೆ. ಇದರ ಬಗ್ಗೆ ಈಗಾಗಲೇ ಬಂಧೀಖಾನೆ ಇಲಾಖೆಯ ಅಧಿಕಾರಿಗಳಿಗೆ ಮನವಿ ಕೊಟ್ಟಿದ್ದೇವೆ. ಇನ್ನು ಮೂರು ದಿನ ಸಮಯ ಕೊಡುತ್ತೇವೆ, ಜಾಮರ್ ಯಂತ್ರ ಸರಿಯಾಗದಿದ್ದರೆ ಜೈಲಿನ ಒಳಗೆ ನುಗ್ಗಿ ಜಾಮರ್ ಯಂತ್ರವನ್ನು ಕಿತ್ತು ಬಿಸಾಕುತ್ತೇವೆ ಎಂದು ಶಾಸಕ ವೇದವ್ಯಾಸ ಕಾಮತ್ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಶಾಸಕ ಕಾಮತ್, ಜೈಲಿನಲ್ಲಿ ಸಿಬಂದಿ ಮತ್ತು ಅಧಿಕಾರಿಗಳು ತಮ್ಮ ಕೆಲಸ ಸರಿಯಾಗಿ ಮಾಡಿದರೆ ಕೈದಿಗಳಿಗೆ ಮೊಬೈಲ್ ಹೇಗೆ ಸಿಗುತ್ತದೆ. ಅವರ ಕೈಗೆ ಮೊಬೈಲ್ ಕೊಡುವುದು ಯಾರೆಂದು ಪ್ರಶ್ನೆ ಬರುತ್ತದೆ. ಇವರು ಸರಿಯಾಗಿ ಕೆಲಸ ಮಾಡದಿರುವುದರಿಂದಲೇ ಜಾಮರ್ ಅಳವಡಿಸುವ ಪ್ರಮೇಯ ಬಂದಿದೆ. ಆದರೆ ಯಾವ ಜಾಮರ್ ಇದ್ದರೂ ಅದನ್ನು ಜೈಲಿನ ಒಳಗಡೆ ಸೀಮಿತಗೊಳಿಸಿ, ಸಾರ್ವಜನಿಕರಿಗೆ ತೊಂದರೆ ಕೊಡಬೇಡಿ ಎಂದು ಜೈಲು ಅಧಿಕಾರಿಗಳಿಗೆ ಮನವಿ ಕೊಟ್ಟಿದ್ದೇವೆ. ಜಿಲ್ಲಾಡಳಿತ, ಪೊಲೀಸ್ ಕಮಿಷನರ್ ಅವರಿಗೂ ಮನವಿ ನೀಡಿದ್ದೇವೆ. ರಾಜ್ಯ ಸರಕಾರದ ಉನ್ನತ ಅಧಿಕಾರಿಗಳಿಗೂ ತಿಳಿಸಿದ್ದೇವೆ.
ನಗರ ಮಧ್ಯ ಇರುವ ಜೈಲಿನಲ್ಲಿ ಏಕಾಏಕಿ ಜಾಮರ್ ಅಳವಡಿಸಿ ಜನರಿಗೆ ತೊಂದರೆ ಕೊಡುವುದನ್ನು ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ. ನಾವು ಎಪ್ರಿಲ್ 4ರಂದು ಬಿಜೆಪಿ ಕಾರ್ಯಕರ್ತರು ಸೇರಿಕೊಂಡು ರಾಸ್ತಾರೋಕೊ ನಡೆಸಿ ಜೈಲಿಗೆ ನುಗ್ಗುತ್ತೇವೆ, ಜಾಮರ್ ಯಂತ್ರವನ್ನು ಕಿತ್ತು ಬಿಸಾಕುತ್ತೇವೆ ಎಂದು ಶಾಸಕ ಕಾಮತ್ ಹೇಳಿದ್ದಾರೆ. ಕೈದಿಗಳಿಗೆ ಮೊಬೈಲ್ ನೀಡುವುದು, ಅದನ್ನು ಕಂಟ್ರೋಲ್ ಮಾಡಕ್ಕಾಗದ ಸ್ಥಿತಿಯಾಗಿರುವುದಕ್ಕೆ ಕಾಂಗ್ರೆಸ್ ಆಡಳಿತ ಕಾರಣ. ಇವರಿಂದಾಗಿಯೇ ಕೈದಿಗಳು ಜೈಲಿನಲ್ಲಿದ್ದುಕೊಂಡೇ ಮೊಬೈಲ್ ನಲ್ಲಿ ಧಮಕಿ ಹಾಕುವ ಸ್ಥಿತಿ ಬಂದಿದೆ. ಅದನ್ನು ನಿಯಂತ್ರಣ ಮಾಡಲಾಗದ ಅಧಿಕಾರಿ ವರ್ಗ ಈಗ ಜೈಲಿನೊಳಗೆ ಜಾಮರ್ ಹಾಕಿದ್ದಾರೆ ಎಂದು ಕಾಮತ್ ಹೇಳಿದ್ದಾರೆ.
Mangalore MLA Vedavyas Kamath has threatened to demolish the controversial "Jammer" installation following ongoing unresolved issues that have raised significant concerns among prison authorities. The Jammer, intended to block mobile signals within the vicinity of correctional facilities, has become a point of contention amid allegations of ineffective operation and safety concerns.
20-06-26 01:33 pm
HK News Staffer
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm