ಬ್ರೇಕಿಂಗ್ ನ್ಯೂಸ್
09-08-20 02:28 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 9: ಕರಾವಳಿಯ ಪೋರನೊಬ್ಬ ರಾತ್ರಿ ಬೆಳಗಾಗೋದರ ಒಳಗೆ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಈ ಹುಡುಗನ ವಿಡಿಯೋ ಸೆಲೆಬ್ರಿಟಿಗಳ ಗಮನಸೆಳೆದಿದೆ. ವಿಡಿಯೋ 'Subscribe' ಮಾಡಿ ಅಂತಾ ಹೇಳಲು ಪರದಾಡಿದ್ದೇ ಈ ಹುಡುಗನನ್ನು ಈಗ ಜಗತ್ತಿನ ಗಮನ ಸೆಳೆಯುವಂತೆ ಮಾಡಿದೆ.
ಮಂಗಳೂರು ಹೊರವಲಯದ ತೊಕ್ಕೊಟ್ಟಿನ ಬಬ್ಬುಕಟ್ಟೆ ಹೀರಾ ಪ್ರಾಥಮಿಕ ಶಾಲೆಯ 6ನೇ ತರಗತಿಯ ವಿದ್ಯಾರ್ಥಿಯಾಗಿರುವ ಅಬ್ದುರ್ರಹ್ಮಾನ್ ಹೀಗೆ ಗಮನ ಸೆಳೆದ ಹುಡುಗ. ಈ ಹುಡುಗನ ಸಾಧನೆಗೆ ಕಾರಣವಾಗಿದ್ದು ಲಾಕ್ ಡೌನ್ ಎಫೆಕ್ಟ್ ಅಂದ್ರೆ ನೀವು ನಂಬಲೇಬೇಕು. ಲಾಕ್ ಡೌನ್ ಕಾರಣ ಶಾಲೆ ಇಲ್ಲದೆ ಮನೆಯಲ್ಲಿರುವ ಮಕ್ಕಳು ಈಗ ಮೊಬೈಲ್ ದಾಸರಾಗಿದ್ದು ಗೊತ್ತೇ ಇದೆ. ಮೊಬೈಲ್ ಹುಚ್ಚು ಈ ಹುಡುಗನನ್ನು ಬಿಟ್ಟಿಲ್ಲ. ಮನೆಯಲ್ಲಿ ಹೆತ್ತವರ ಮೊಬೈಲ್ ತಗೊಂಡು ಅದರಲ್ಲಿ ಯೂಟ್ಯೂಬ್ ನೋಡುವುದು ಈತನ ಡೈಲಿ ದಿನಚರಿಯಾಗಿತ್ತು. ಹೆಚ್ಚಾಗಿ ಅರಬ್ಬೀಗಳ ಮಕ್ಕಳು ಮಾಡುವ ಕೀಟಲೆಗಳ ವಿಡಿಯೋ ನೋಡುವ ಅಬ್ದುರ್ರಹ್ಮಾನ್, ಆ ಮಕ್ಕಳು ಇಂಗ್ಲಿಷ್ ನಲ್ಲಿ ಮಾತಾಡಲು ಕಷ್ಟಪಡುವುದನ್ನು ನೋಡಿ ನಗುತ್ತಿದ್ದ. ಇತರೇ ಮಕ್ಕಳ ಜೊತೆ ಸೇರಿ ಅರಬ್ಬೀ ಮಕ್ಕಳ ರೀತಿ ಮಾತಾಡುತ್ತಾ ಕೀಟಲೆ ಮಾಡುತ್ತಿದ್ದ. ಒಂದು ದಿನ ಯೂಟ್ಯೂಬ್ ಕೊನೆಯಲ್ಲಿ ಈ ಚಾನೆಲ್ ಸಬ್ ಸ್ಕ್ರೈಬ್ ಮಾಡಿ ಅನ್ನುವುದನ್ನು ಅರಬ್ಬೀ ಮಕ್ಕಳ ತೊದಲು ನುಡಿಯ ರೀತಿ ಅನುಕರಿಸಿ ವಿಡಿಯೋ ಮಾಡಿದ್ದ. ಮುದ್ದು ಮುದ್ದಾಗಿರುವ ಈ ಹುಡುಗ ಸಬಕರ.. ಸಬಕರರಾ ಎನ್ನುತ್ತಾ ಈ ವಿಡಿಯೋ ಒಂದು ಲಕ್ಷ ಲೈಕ್ಸ್ ಪಡೀಬೇಕು ಎಂದಿದ್ದನ್ನು ನೋಡಿದ ಸಂಬಂಧಿಕರೊಬ್ಬರು ವಿಡಿಯೋವನ್ನು ಫೇಸ್ ಬುಕ್ಕಿಗೆ ಅಪ್ಲೋಡ್ ಮಾಡಿದ್ದಾರೆ. ಹುಡುಗ ತೊಳಲಾಡುವುದೇ ನೋಡುಗರ ಗಮನ ಸೆಳೆದಿದ್ದು ಆಕರ್ಷಣೆಗೆ ಕಾರಣವಾಗಿದೆ. 'Subscribe' ಮಾಡುವಂತೆ ಹೇಳಲು ಬಾಲಕ ಪರದಾಡಿದ್ದೇ ಈಗ ಟ್ರೆಂಡ್ ಆಗಿದೆ. ನಿಜಕ್ಕಾದರೆ ಆತ ಅರಬ್ಬೀ ಮಕ್ಕಳ ಶೈಲಿಯನ್ನು ಅಣಕಿಸಿದ್ದ..
Video:

ವಿಡಿಯೋ ಗಮನಿಸಿದ ಬಹುಭಾಷಾ ಗಾಯಕ ಅರ್ಮಾನ್ ಮಲಿಕ್, ವಿಡಿಯೋವನ್ನು ತೆಗೆದು ತನ್ನ ಇನ್ ಸ್ಟಾ ಗ್ರಾಮಿನಲ್ಲಿ ಶೇರ್ ಮಾಡಿದ್ದಾರೆ. ಇದು ಭಾರೀ ವೈರಲ್ ಆಗಿದ್ದು ಕಾಮಿಡಿಯನ್ ಆಶಿಶ್ ಚಂಚ್ಲಾನಿ ಕೂಡಾ ಬಾಲಕನ ವಿಡಿಯೋ ತಮ್ಮ ಖಾತೆಗೆ ಅಪ್ ಲೋಡ್ ಮಾಡಿದ್ದಾರೆ. ಅಬ್ದುಲ್ ರೆಹ್ಮಾನ್ ನ ವಿಡಿಯೋ ಈಗ ಲಕ್ಷ ಅಲ್ಲ , 35ಲಕ್ಷ ಕ್ಕೂ ಹೆಚ್ಚು ಜನರು ವೀಕ್ಷಣೆ ಮಾಡಿ ದಾಖಲೆ ಸೇರಿದೆ. ಹಾಗೆಯೇ ಹುಡುಗನ ಏಕ್ಟಿಂಗ್ ವಿಶ್ವ ಮಟ್ಟದಲ್ಲಿ ಜಾಲತಾಣಿಗರ ಗಮನ ಸೆಳೆದಿದೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm