ಬ್ರೇಕಿಂಗ್ ನ್ಯೂಸ್
05-04-25 01:16 pm Mangaluru Staff ಕರಾವಳಿ
ಮಂಗಳೂರು, ಎ.5: ಮಂಗಳೂರಿನ ಜೈಲು ಆವರಣದಲ್ಲಿ 5ಜಿ ಜಾಮರ್ ಯಂತ್ರ ಅಳವಡಿಸಿ ತೊಂದರೆ ಆಗಿರುವುದನ್ನು ವಿರೋಧಿಸಿ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಜೈಲಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಜೈಲಿನ ಮುಂದೆ ಪ್ರತಿಭಟನಾ ಸಭೆ ನಡೆಸಿ ಒಳಗೆ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಜೈಲಿನಲ್ಲಿ ಏಕಾಏಕಿ 5ಜಿ ಜಾಮರ್ ಅಳವಡಿಸಿದ್ದರಿಂದ ಸುತ್ತಮುತ್ತಲಿನ ಕಚೇರಿ, ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಜೈಲು ವಿಭಾಗದ ಡಿಜಿ, ಗೃಹ ಸಚಿವರು, ಪೊಲೀಸ್ ಕಮಿಷನರ್ ಗೆ ದೂರಿತ್ತರೂ ಕ್ರಮ ಕೈಗೊಂಡಿಲ್ಲ. ಸಾರ್ವಜನಿಕರು ತೊಂದರೆ ಎದುರಿಸಿದರೂ ಕಾಂಗ್ರೆಸ್ ಸರ್ಕಾರ ಮೌನ ವಹಿಸಿದೆ. ನಮ್ಮ ಸರ್ಕಾರ ಇರುತ್ತಿದ್ದರೆ ಜೈಲಿಗೆ ನುಗ್ಗಿ ಜಾಮರ್ ಕಿತ್ತು ಬಿಸಾಕುತ್ತಿದ್ದೆ ಎಂದು ಹೇಳಿದರು.








ಈಗಲೂ ನಾವು ಜೈಲಿಗೆ ಹೋಗಲು ಸಿದ್ಧ, ಜೈಲಿನಲ್ಲಿ ಹೇಗೂ ಮೊಬೈಲ್ ಸಿಗುತ್ತದೆ, ತೊಂದ್ರೆ ಇಲ್ಲ ಎಂದು ಹೇಳಿದ ಕಾಮತ್, ಜೈಲಿನ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಿದರೆ ಜಾಮರ್ ಅಗತ್ಯವಿದೆಯೇ? ಇವರು ಸರಿಯಾಗಿ ಕೆಲಸ ಮಾಡದ ಕಾರಣಕ್ಕೆ ಜಾಮರ್ ಹಾಕಿದ್ದಾರೆ. ಮೂಗಿನಲ್ಲಿ ನೆಗಡಿ ಆಗಿದೆಯೆಂದು ಮೂಗು ಕತ್ತರಿಸುತ್ತೀರಾ..? ಇದು ಕಾಂಗ್ರೆಸ್ ಸರ್ಕಾರದ ಜನವಿರೋಧಿ ನಡೆಯಲ್ಲವೇ ಎಂದು ಪ್ರಶ್ನಿಸಿದರು.
ಪ್ರತಿಭಟನೆ ಸಭೆಯ ಬಳಿಕ ಕಾರ್ಯಕರ್ತರು ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಜೈಲಿನ ಒಳನುಗ್ಗಲು ಯತ್ನಿಸಿದ್ದಾರೆ. ಈ ವೇಳೆ, ಮೊದಲೇ ತಯಾರಾಗಿದ್ದ 50ಕ್ಕೂ ಹೆಚ್ಚು ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಂಧನ ಮಾಡಿದ್ದಾರೆ.
MLA Vedavyas Kamath led a protest outside Mangalore Jail today over the installation of jammers within the facility, which have been a controversial topic in recent weeks. The situation intensified when several BJP members, rallying behind Kamath's cause, attempted to enter the jail grounds to demand answers from the authorities regarding the jammers. Law enforcement swiftly intervened, resulting in the detention of the protestors amid escalating tensions.
04-05-26 10:33 pm
HK News Desk
ಶೃಂಗೇರಿ ; ದಿಢೀರ್ ಮಾಜಿಯಾದ ಕಾಂಗ್ರೆಸ್ ಶಾಸಕ ರಾಜೇಗ...
04-05-26 07:16 pm
ಮಂಜೇಶ್ವರದಲ್ಲಿ ಮತ ಧ್ರುವೀಕರಣ ; 29,252 ಮತಗಳಿಂದ ಮ...
04-05-26 06:27 pm
ತ್ರಿಕೋನ ಸ್ಪರ್ಧೆ ನಿರೀಕ್ಷಿಸಿದ್ದ ಕಾಸರಗೋಡಿನಲ್ಲಿ ಮ...
04-05-26 04:14 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಟ್ಯಾಂಪರಿಂಗ್ ಆರೋಪ ; ಅ...
03-05-26 01:30 pm
04-05-26 09:51 pm
HK News Staffer
ತಿರುವನಂತಪುರಂ ಜಿಲ್ಲೆಯಲ್ಲೇ ಕಮಲ ಕಮಾಲ್ ; ಮೂರು ಕ್ಷ...
04-05-26 07:04 pm
ದೀದಿ ಕೋಟೆಗೆ ಕಮಲ ಲಗ್ಗೆ ; ಮೂರು ಬಾರಿ ಸಿಎಂ ಮಮತಾ ಸ...
04-05-26 01:16 pm
ತಮಿಳರ ಊರಲ್ಲಿ ನಟ ವಿಜಯ್ ಕಮಾಲ್ ; ದ್ರಾವಿಡ ಪಕ್ಷ ಬದ...
04-05-26 11:11 am
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm