ಬ್ರೇಕಿಂಗ್ ನ್ಯೂಸ್
05-04-25 01:16 pm Mangaluru Staff ಕರಾವಳಿ
ಮಂಗಳೂರು, ಎ.5: ಮಂಗಳೂರಿನ ಜೈಲು ಆವರಣದಲ್ಲಿ 5ಜಿ ಜಾಮರ್ ಯಂತ್ರ ಅಳವಡಿಸಿ ತೊಂದರೆ ಆಗಿರುವುದನ್ನು ವಿರೋಧಿಸಿ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಜೈಲಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಜೈಲಿನ ಮುಂದೆ ಪ್ರತಿಭಟನಾ ಸಭೆ ನಡೆಸಿ ಒಳಗೆ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಜೈಲಿನಲ್ಲಿ ಏಕಾಏಕಿ 5ಜಿ ಜಾಮರ್ ಅಳವಡಿಸಿದ್ದರಿಂದ ಸುತ್ತಮುತ್ತಲಿನ ಕಚೇರಿ, ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಜೈಲು ವಿಭಾಗದ ಡಿಜಿ, ಗೃಹ ಸಚಿವರು, ಪೊಲೀಸ್ ಕಮಿಷನರ್ ಗೆ ದೂರಿತ್ತರೂ ಕ್ರಮ ಕೈಗೊಂಡಿಲ್ಲ. ಸಾರ್ವಜನಿಕರು ತೊಂದರೆ ಎದುರಿಸಿದರೂ ಕಾಂಗ್ರೆಸ್ ಸರ್ಕಾರ ಮೌನ ವಹಿಸಿದೆ. ನಮ್ಮ ಸರ್ಕಾರ ಇರುತ್ತಿದ್ದರೆ ಜೈಲಿಗೆ ನುಗ್ಗಿ ಜಾಮರ್ ಕಿತ್ತು ಬಿಸಾಕುತ್ತಿದ್ದೆ ಎಂದು ಹೇಳಿದರು.








ಈಗಲೂ ನಾವು ಜೈಲಿಗೆ ಹೋಗಲು ಸಿದ್ಧ, ಜೈಲಿನಲ್ಲಿ ಹೇಗೂ ಮೊಬೈಲ್ ಸಿಗುತ್ತದೆ, ತೊಂದ್ರೆ ಇಲ್ಲ ಎಂದು ಹೇಳಿದ ಕಾಮತ್, ಜೈಲಿನ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಿದರೆ ಜಾಮರ್ ಅಗತ್ಯವಿದೆಯೇ? ಇವರು ಸರಿಯಾಗಿ ಕೆಲಸ ಮಾಡದ ಕಾರಣಕ್ಕೆ ಜಾಮರ್ ಹಾಕಿದ್ದಾರೆ. ಮೂಗಿನಲ್ಲಿ ನೆಗಡಿ ಆಗಿದೆಯೆಂದು ಮೂಗು ಕತ್ತರಿಸುತ್ತೀರಾ..? ಇದು ಕಾಂಗ್ರೆಸ್ ಸರ್ಕಾರದ ಜನವಿರೋಧಿ ನಡೆಯಲ್ಲವೇ ಎಂದು ಪ್ರಶ್ನಿಸಿದರು.
ಪ್ರತಿಭಟನೆ ಸಭೆಯ ಬಳಿಕ ಕಾರ್ಯಕರ್ತರು ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಜೈಲಿನ ಒಳನುಗ್ಗಲು ಯತ್ನಿಸಿದ್ದಾರೆ. ಈ ವೇಳೆ, ಮೊದಲೇ ತಯಾರಾಗಿದ್ದ 50ಕ್ಕೂ ಹೆಚ್ಚು ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಂಧನ ಮಾಡಿದ್ದಾರೆ.
MLA Vedavyas Kamath led a protest outside Mangalore Jail today over the installation of jammers within the facility, which have been a controversial topic in recent weeks. The situation intensified when several BJP members, rallying behind Kamath's cause, attempted to enter the jail grounds to demand answers from the authorities regarding the jammers. Law enforcement swiftly intervened, resulting in the detention of the protestors amid escalating tensions.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 03:03 pm
HK News Desk
ಬಿಎಸ್ಸೆನ್ನೆಲ್ ಕೇಬಲ್ ಕಳ್ಳತನ ; ಭೂಗತ ಹಾಕಿದ್ದ ತಾಮ...
20-02-26 02:31 pm
ಅಂತಾರಾಜ್ಯ ಮಾದಕ ವಸ್ತು ಮಾರಾಟ ಜಾಲದ ಆರೋಪಿಗಳು ವಶಕ್...
20-02-26 11:31 am
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm