ಬ್ರೇಕಿಂಗ್ ನ್ಯೂಸ್
07-04-25 03:03 pm Mangalore Correspondent ಕರಾವಳಿ
ಬಂಟ್ವಾಳ, ಎ.6 : ಬಂಟ್ವಾಳ ತಾಲೂಕಿನ ಅಮ್ಟಾಡಿ ಲೊರೆಟ್ಟೋಪದವು ನಿವಾಸಿ ಜೀವನ್ ತಾವ್ರೋ (37) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ನಗರ ಠಾಣೆ ಪೊಲೀಸರು ಇಬ್ಬರು ಯುವಕರನ್ನು ವಶಕ್ಕೆ ಪಡೆದಿದ್ದಾರೆ.
ಲೊರೆಟ್ಟೋಪದವಿನಲ್ಲಿ ವೃದ್ಧ ತಂದೆ- ತಾಯಿ ಜೊತೆಗಿದ್ದುಕೊಂಡು ಪ್ರಗತಿಪರ ಕೃಷಿಕರಾಗಿದ್ದ ಜೀವನ್ ತಾವ್ರೋ ಅವರು ಕಳೆದ ಫೆಬ್ರವರಿ 10ರಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ವೇಳೆ, ಹಣಕಾಸು ವಿಚಾರದಲ್ಲಿ ಮೋಸ ಆಗಿರುವುದರ ಬಗ್ಗೆ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟಿದ್ದರು. ಈ ಬಗ್ಗೆ ಬಂಟ್ವಾಳ ಪೊಲೀಸರು ಆತ್ಮಹತ್ಯೆ ಪ್ರಕರಣ ದಾಖಲಿಸಿದ್ದರೂ ತನಿಖೆ ಮುಂದುವರಿದಿರಲಿಲ್ಲ. ಜೀವನ್ ತಾವ್ರೋಗೆ ಮದುವೆ ಆಗಿರಲಿಲ್ಲ. ಗೆಳೆಯರ ಜೊತೆಗೆ ಉತ್ತಮ ಸಂಬಂಧ ಇಟ್ಟುಕೊಂಡಿದ್ದರು.

ಇದೀಗ ಸಂಬಂಧಿಕರ ಒತ್ತಾಯದ ಮೇರೆಗೆ ಘಟನೆ ಸಂಬಂಧಿಸಿ ತನಿಖೆ ನಡೆಸಿದ ವೇಳೆ ಜೀವನ್ ಅವರ ಹತ್ತಿರದ ಗೆಳೆಯರಾಗಿದ್ದ ಕೆಲವರು ಮನೆಗೆ ಬರುವುದನ್ನು ಬಿಟ್ಟು ದೂರ ಉಳಿದಿದ್ದರು. ಇದರಿಂದ ಸಂಶಯದಲ್ಲಿ ಪೊಲೀಸರು ತನಿಖೆ ನಡೆಸಿದಾಗ ಇವರೊಳಗಿನ ಹಣಕಾಸು ವ್ಯವಹಾರದ ಬಗ್ಗೆ ಮಾಹಿತಿ ಸಿಕ್ಕಿತ್ತು. ಪೊಲೀಸರು ಇದೀಗ ಅದೇ ಪರಿಸರದ ಪ್ರವೀಣ್ ಡೇಸಾ ಮತ್ತು ರೋಹನ್ ಪಿಂಟೋ ಎಂಬವರನ್ನು ಬಂಧಿಸಿದ್ದು ಕೋರ್ಟಿಗೆ ಹಾಜರು ಪಡಿಸಿದ್ದಾರೆ. ಇವರ ಪಾತ್ರವೇನು, ಬೇರೆ ಯಾರೆಲ್ಲ ಭಾಗಿಯಾಗಿದ್ದಾರೆ ಎಂಬ ವಿಚಾರದಲ್ಲಿ ತನಿಖೆ ಆಗಬೇಕಷ್ಟೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೀಗ ಸೆಕ್ಷನ್ 306 ಅಡಿ ಆತ್ಮಹತ್ಯೆಗೆ ಪ್ರಚೋದನೆಯೆಂದು ಹೆಚ್ಚುವರಿ ಕೇಸು ದಾಖಲಾಗಿದೆ.
Jeevan Tauro suicide case, Two attested by bantwal police in Mangalore. The arrested has been identified as Praveen Desa and Rohan pinto. Jeevan had written a death note where he was cheated financially, based on the death two have been arrested. Jeevan Tauro (38), son of Maxim Tauro & Leticia Tauro, brother of Steeva, Pramila / Sudeep, Passed away on February 10, 2025.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 03:03 pm
HK News Desk
ಬಿಎಸ್ಸೆನ್ನೆಲ್ ಕೇಬಲ್ ಕಳ್ಳತನ ; ಭೂಗತ ಹಾಕಿದ್ದ ತಾಮ...
20-02-26 02:31 pm
ಅಂತಾರಾಜ್ಯ ಮಾದಕ ವಸ್ತು ಮಾರಾಟ ಜಾಲದ ಆರೋಪಿಗಳು ವಶಕ್...
20-02-26 11:31 am
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm