ಬ್ರೇಕಿಂಗ್ ನ್ಯೂಸ್
12-04-25 05:30 pm Mangalore Correspondent ಕರಾವಳಿ
ಉಳ್ಳಾಲ, ಎ.12 : ಆರೋಗ್ಯ ಸೇವೆಯಲ್ಲಿ ಖಾಸಗಿ ಆಸ್ಪತ್ರೆಗಳು ಸಾಕಷ್ಟು ಕೊಡುಗೆಗಳನ್ನು ನೀಡಿವೆ. ಆದರೂ ಕೆಲವು ಆಸ್ಪತ್ರೆಗಳಲ್ಲಿ ವಿಪರೀತ ಶುಲ್ಕಗಳನ್ನ ಪೀಕಿಸಿ ಸೇವೆಗಳ ದುರುಪಯೋಗ ಪಡಿಸಲಾಗುತ್ತಿದೆ. ಸರಕಾರಿ ಆಸ್ಪತ್ರೆಗಳ ಉನ್ನತೀಕರಣದಿಂದಲೇ ಆರೋಗ್ಯ ಸೇವೆಗಳಲ್ಲಿ ಸಮತೋಲನ ತರಲು ಸಾಧ್ಯವೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟರು.
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಯುಷ್ ಇಲಾಖೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಮಂಗಳೂರು, ನಗರ ಸಮುದಾಯ ಆರೋಗ್ಯ ಕೇಂದ್ರ ಉಳ್ಳಾಲ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಂಜಿನಿಯರ್ ಘಟಕ ದ.ಕ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಉಳ್ಳಾಲದ ನಗರ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡಗಳ ಉದ್ಘಾಟನೆ, ಶವಾಗಾರದ ಉದ್ಘಾಟನೆ, ಶವ ಶೀತಲೀಕರಣ ಪೆಟ್ಟಿಗೆ ಹಸ್ತಾಂತರ, ಡಯಾಲಿಸಿಸ್ ಕಟ್ಟಡ ಉದ್ಘಾಟನೆ ಹಾಗೂ ನೂತನ ಪುನಶ್ಚೇತನ ಕೇಂದ್ರ, ಆಯುಷ್ ಆಸ್ಪತ್ರೆಯ ನಿರ್ಮಾಣ ಕಾಮಗಾರಿಗೆ ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.



ಉಳ್ಳಾಲದ ಸಮುದಾಯ ಆರೋಗ್ಯ ಕೇಂದ್ರವು ಇಡೀ ಕರ್ನಾಟಕಕ್ಕೆ ಮಾದರಿಯಾದ ಸುಸಜ್ಜಿತ ಕೇಂದ್ರವಾಗಿದೆ. ಎಲ್ಲಾ ಆರೋಗ್ಯ ಕೇಂದ್ರಗಳು ಈ ರೀತಿಯಲ್ಲೇ ನಿರ್ವಹಣೆ ಮಾಡಿದರೆ ಆರೋಗ್ಯ ಕ್ಷೇತ್ರವು ಮೇಲ್ದರ್ಜೆಗೇರಲು ಸಾಧ್ಯ. ಆರೋಗ್ಯವೇ ಜೀವನದಲ್ಲಿ ಬಲು ಪ್ರಾಮುಖ್ಯ ವಿಚಾರವಾಗಿದೆ. ಉತ್ತಮ ಆರೋಗ್ಯ ಸೇವೆ ನೀಡಲು ಸಿಬ್ಬಂದಿಗಳನ್ನ ಭರ್ತಿ ಮಾಡುವ ಕೆಲಸ ಆಗಬೇಕಿದ್ದು ಈ ಬಗ್ಗೆ ಮುಖ್ಯಮಂತ್ರಿ ಜೊತೆ ಸಭೆ ನಡೆಸಿದ್ದು ಅತೀ ಶೀಘ್ರ ನಿರ್ಧಾರ ಕೈಗೊಳ್ಳಲಿದ್ದೇವೆ. ಉಳ್ಳಾಲ ಭಾಗದಲ್ಲಿ ಯು.ಟಿ.ಖಾದರ್ ಅವರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನ ಮಾಡಿದ್ದು ಆದಷ್ಟು ಬೇಗನೆ ಈ ಭಾಗಕ್ಕೆ ತಾಲೂಕು ಆಸ್ಪತ್ರೆಯನ್ನ ಮಂಜೂರು ಮಾಡಲಾಗುವುದೆಂದರು.
ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಮಾತನಾಡಿ 2014ರಲ್ಲಿ ನಾನು ಆರೋಗ್ಯ ಸಚಿವನಾಗಿದ್ದಾಗ ಉಳ್ಳಾಲದ ಹಂಚಿನ ಛಾವಣಿಯ ಈ ಆರೋಗ್ಯ ಕೇಂದ್ರವು ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿ ಸುಸಜ್ಜಿತ ಮಾದರಿ ಕಟ್ಟಡ ನಿರ್ಮಾಣ ಮಾಡುವಂತಾಯಿತು. ಅತ್ಯುತ್ತಮ ಲ್ಯಾಬ್ ಸಹಿತ ಸಮುದಾಯ ಆರೋಗ್ಯ ಕೇಂದ್ರ ಹೇಗಿರಬೇಕೋ ಅದಕ್ಕೆ ಬೇಕಾದ ಎಲ್ಲಾ ಮೂಲಭೂತ ಸೌಕರ್ಯಗಳನ್ನ ಒದಗಿಸಲಾಗಿದೆ. ಆರ್ಥಿಕ ಸಂಕಷ್ಟದಲ್ಲಿರುವವರಿಗೆ ಉಚಿತವಾಗಿ ಡಯಾಲಿಸಿಸ್ ಘಟಕ ಆರಂಭಿಸಿದ್ದು ರೋಗಿಗಳಿಗೆ ಚಿಕಿತ್ಸೆಯ ಪ್ರೇರಣೆಗಾಗಿ ಮನರಂಜನೆ ಒದಗಿಸಲು ಟೆಲಿ ವಿಷನ್ ಗಳನ್ನು ಅಳವಡಿಸಲಾಗಿದೆ. ಸ್ಥಿತಿವಂತರು ಸೇರಿ ಡಯಾಲಿಸಿಸ್ ಕೇಂದ್ರಕ್ಕೆ ಬರುವ ರೋಗಿಗಳಿಗೆ ತಿಂಗಳಿಗೆ ಒಂದು ಆಹಾರ ಕಿಟ್ ಒದಗಿಸುವ ವ್ಯವಸ್ಥೆ ಮಾಡಬೇಕೆಂದರು. ಇದು ಸಮುದಾಯ ಆರೋಗ್ಯ ಕೇಂದ್ರವೇ ಹೊರತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಅಲ್ಲ ಎಂಬುದನ್ನ ಜನರು ಮನಗಾಣಬೇಕು. ಸದುದ್ದೇಶದಿಂದ ಯಾವುದೇ ಉತ್ತಮ ಯೋಜನೆ ಹಾಕಿಕೊಂಡಾಗ ಅದಕ್ಕೆ ದೇವರ ಸಹಾಕಾರ ಸಿಕ್ಕೇ ಸಿಗುತ್ತದೆ. ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪುನಶ್ಚೇತನ ಕೇಂದ್ರ ನಿರ್ಮಾಣಕ್ಕೆ ಬಿಪಿಸಿಎಲ್ ಸಂಸ್ಥೆಯ ರಾಜ್ಯ ಮುಖ್ಯಸ್ಥೆ ನೀರಾ ಸಿಂಗ್ ಅವರು 1.59 ಕೋಟಿ ರೂ. ಅನುದಾನ ನೀಡಿರುವುದೇ ಅದಕ್ಕೆ ಸ್ಪಷ್ಟ ನಿದರ್ಶನವೆಂದರು.
ಸಮುದಾಯ ಆರೋಗ್ಯ ಕೇಂದ್ರಕ್ಕೆ ದೊಡ್ಡ ಅನುದಾನ ನೀಡಿದ ಬಿಪಿಸಿಎಲ್ ಸಂಸ್ಥೆ
ಮುಖ್ಯಸ್ಥೆ ನೀರಾ ಸಿಂಗ್, ಸಮುದಾಯ ಆರೋಗ್ಯ ಕೇಂದ್ರದ ಉಸ್ತುವಾರಿ ವಹಿಸಿರುವ ಯೇನೆಪೋಯ ವಿವಿ ಕುಲಪತಿ ಡಾ.ಯು.ಅಬ್ದುಲ್ಲಾ ಕುಂಞಿ, ಶವಾಗಾರಕ್ಕೆ ಶವ ಶೀತಲೀಕರಣ ಪೆಟ್ಟಿಗೆ ನೀಡಿದ ಮಾರುತಿ ಜನಸೇವಾ ಸಂಘವನ್ನ ಸನ್ಮಾನಿಸಲಾಯಿತು.
In a significant move to improve healthcare accessibility and quality, Dinesh Gundu Rao, Minister for Health and Family Welfare, today inaugurated the newly upgraded Ullal Community Health Center. This initiative is part of the government’s ongoing efforts to strengthen healthcare services in the region and ensure that citizens have access to more comprehensive medical care.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm