ಬ್ರೇಕಿಂಗ್ ನ್ಯೂಸ್
14-04-25 09:20 pm Mangalore Correspondent ಕರಾವಳಿ
ಮಂಗಳೂರು, ಎ.14 : ಕಾಶೀ ಮಠದ ಹಿರಿಯ ಯತಿವರ್ಯ, ಮಹಾತಪಸ್ವಿ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮ ಶತಮಾನೋತ್ಸವ ಆಚರಣೆ ಎಪ್ರಿಲ್ 8 ರಿಂದ 14ರ ತನಕ ಜರುಗಿದ್ದು, ಎಪ್ರಿಲ್ 14 ರಂದು ಶ್ರೀಗಳ ನೂರನೇ ಜನ್ಮನಕ್ಷತ್ರದಂದು ವಿಶೇಷ ಕಾರ್ಯಕ್ರಮಗಳು ಉತ್ತರಾಖಂಡದ ಹರಿದ್ವಾರದಲ್ಲಿರುವ ವ್ಯಾಸಾಶ್ರಮದಲ್ಲಿ ನಡೆದವು.
ಬೆಳಗ್ಗೆ 1008 ವಿಶೇಷ ಪವಮಾನಾಭಿಷೇಕ ಸೇವೆ ನಡೆಯಿತು. ಭಾರತದ ವಿವಿಧ ದಿಕ್ಕುಗಳಲ್ಲಿ ಹರಿಯುತ್ತಿರುವ ಪವಿತ್ರ ನದಿಗಳ ತೀರ್ಥವನ್ನು ಸಂಗ್ರಹಿಸಿ ಅದನ್ನು ಹರಿದ್ವಾರದ ವ್ಯಾಸಾಶ್ರಮಕ್ಕೆ ತರಲಾಗಿತ್ತು. ಇದು ಚಾರಿತ್ರಿಕವಾಗಿರುವ ದಾಖಲೆಯಾಗಿದೆ. ಎಲ್ಲಾ ಪವಿತ್ರ ನದಿಗಳ ತೀರ್ಥವನ್ನು ಸ್ವಾಮೀಜಿಯವರ ವೃಂದಾವನದಲ್ಲಿ ಅಭಿಷೇಕ ಮಾಡಲಾಯಿತು. ಇನ್ನು 1008 ಬೆಳ್ಳಿ ನಾಣ್ಯಗಳನ್ನು ಸೇವಾದಾರರಿಗೆ ವಿತರಿಸಲಾಯಿತು. ಆಬಳಿಕ ಸ್ವರ್ಣ ಪುಷ್ಪಾರ್ಚನಾ ಕಾರ್ಯಕ್ರಮ ನಡೆಯಿತು. ಮೊದಲಿಗೆ ವೃಂದಾವನದಲ್ಲಿರುವ ಹನುಮಂತ ದೇವರ ಪಾದಗಳಿಗೆ ಸ್ವರ್ಣ ಪುಷ್ಪಾಚನೆ ನಡೆಸಲಾಯಿತು. ಬಳಿಕ ಗುರುಪಾದುಕೆಗೆ ಸ್ವರ್ಣ ಪುಷ್ಪಾಚನೆ ನಡೆಯಿತು. ಆ ಸ್ವರ್ಣ ಪುಷ್ಪಗಳನ್ನು ಪ್ರಸಾದ ರೂಪದಲ್ಲಿ ಭಕ್ತರಿಗೆ ವಿತರಿಸಲಾಯಿತು.
ಆಗಮಿಸಿದ ಎಲ್ಲಾ ಭಕ್ತರಿಗೆ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತದಿಂದ ಗಂಧ ಪ್ರಸಾದ ನೀಡಲಾಯಿತು. ತಿರುಪತಿ ಲಾಡು, ಫಲವಸ್ತು, ಮಹಿಳೆಯರಿಗೆ ಸೀರೆ, ಗಂಡಸರಿಗೆ ಧೋತಿ, ಹೆಣ್ಣು ಮಕ್ಕಳಿಗೆ, ಗಂಡು ಮಕ್ಕಳಿಗೆ ವಸ್ತ್ರಗಳನ್ನು ವಿತರಿಸಲಾಯಿತು. ಸುಧೀಂದ್ರ ವೇದಿಕೆಯಲ್ಲಿ ವಿಷ್ಣು ಸಹಸ್ರನಾಮ ಪಠಣ, ಸಾಮೂಹಿಕ ಕುಂಕುಮಾರ್ಚನೆ, ಸಾಮೂಹಿಕ ದುರ್ಗಾ ನಮಸ್ಕಾರ, ಸಹಸ್ರ ಚಂಡಿಕಾಯಾಗ, ಋತ್ಮಿಕಾ ಯಾಗ, ಗುರು ಗುಣಗಾನ, ಭಜನಾ ಕಾರ್ಯಕ್ರಮಗಳು ನಡೆಯಿತು. ಸಂಜೆ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಆರ್ಶೀವಚನ ನೀಡಿದರು. ದೇಶ, ವಿದೇಶದಿಂದ ನಾಲ್ಕು ಸಾವಿರಕ್ಕೂ ಮಿಕ್ಕಿ ಭಕ್ತರು ಈ ಪುಣ್ಯ ಕಾರ್ಯದಲ್ಲಿ ಭಾಗವಹಿಸಿ ಧನ್ಯರಾದರು.
ಮುಂಬೈಯ ಜಿಎಸ್ ಬಿ ಸೇವಾ ಮಂಡಲ, ಸುಕೃತೀಂದ್ರ ಸ್ವಾಮಿ ಸೇವಾ ಪ್ರತಿಷ್ಠಾನ, ದೆಹಲಿ ಸಮಾಜ, ಬೆಂಗಳೂರು ಸಮಾಜ ಸಹಿತ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ವಿವಿಧ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು, ವೈದಿಕ ವೃಂದ ಈ ಕಾರ್ಯಕ್ರಮದ ಯಶಸ್ಸಿಗಾಗಿ ಶ್ರಮಿಸಿದರು.
In a grand celebration filled with reverence and devotion, the birth centenary of Sudhindra Tirtha Swamiji was commemorated on [Insert date of event] at Haridwar. The event brought together a multitude of devotees, religious leaders, and dignitaries who gathered to honor the legacy of the revered Swamiji, who has made significant contributions to spirituality and social upliftment.
16-06-25 10:44 pm
Bangalore Correspondent
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
16-06-25 11:06 pm
Mangalore Correspondent
Rain, Pilikula Zoo, Mangalore, Flood: ಪಿಲಿಕುಳ...
16-06-25 08:34 pm
Mangalore Rain, Belthanagdy, Bike: ಸವಣಾಲು ; ಧ...
16-06-25 05:07 pm
Mangalore, Pregnant Wife Suicide, Puthila Par...
16-06-25 12:30 pm
ನೆಲ್ಯಾಡಿ ಬಳಿ ಭೀಕರ ಅಪಘಾತ ; ನಿಲ್ಲಿಸಿದ್ದ ಲಾರಿಗೆ...
16-06-25 12:13 pm
16-06-25 03:05 pm
HK News Desk
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm