ಬ್ರೇಕಿಂಗ್ ನ್ಯೂಸ್
16-04-25 08:22 pm Mangalore Correspondent ಕರಾವಳಿ
ಮಂಗಳೂರು, ಎ.16 : ಎ.18ರಂದು ಅಡ್ಯಾರ್ ಬಳಿಯ ಷಾ ಗಾರ್ಡನ್ ಮೈದಾನದಲ್ಲಿ ವಕ್ಫ್ ಕಾಯ್ದೆ ವಿರೋಧಿಸಿ ಹಮ್ಮಿಕೊಂಡಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಅಂದು ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 9 ಗಂಟೆ ವರೆಗೆ ಹೆದ್ದಾರಿಯಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಎಲ್ಲ ಮಾದರಿಯ ಗೂಡ್ಸ್ ಮತ್ತು ಇತರ ಸಾರಿಗೆ ಬಸ್ ಗಳು ಮಂಗಳೂರು ಪಂಪ್ವೆಲ್ ನಿಂದ ಬಿಸಿ ರೋಡ್ ಕಡೆಗೆ ಹೋಗುವ ಮತ್ತು ಆ ಕಡೆಯಿಂದ ಬರುವ ವಾಹನಗಳು ಸಂಚಾರ ಮಾಡುವಂತಿಲ್ಲ. ತುರ್ತು ಅಗತ್ಯದ ಮತ್ತು ಸ್ಥಳೀಯ ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅನುಮತಿ ಇರುತ್ತದೆ. ಅಲ್ಲದೆ, ಪಂಪುವೆಲ್ / ನಂತೂರು - ಪಡೀಲ್ – ಕಣ್ಣೂರು – ಅಡ್ಯಾರ್ - ಸಹ್ಯಾದ್ರಿ – ಅರ್ಕುಳ - ಪರಂಗಿಪೇಟೆ – ತುಂಬೆ - ಬಿ.ಸಿ.ರೋಡ್ (ರಾಷ್ಟ್ರೀಯ ಹೆದ್ದಾರಿ – ೭೩) ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡತಕ್ಕದಲ್ಲ.
ಪರ್ಯಾಯ ರಸ್ತೆಗಳನ್ನು ಬಳಸಲು ಕೋರಿಕೆ
➢ ಮೆಲ್ಕಾರು ಜಂಕ್ಷನ್- ಪುತ್ತೂರು/ಬಂಟ್ವಾಳ/ಬೆಳ್ತಂಗಡಿ ಕಡೆಯಿಂದ ಮಂಗಳೂರು ನಗರ/ ಕಾಸರಗೋಡು ಕಡೆಗೆ ಬರುವ ವಾಹನಗಳು ಮೆಲ್ಕಾರ್ ಜಂಕ್ಷನ್ - ಬೋಳಿಯಾರ್ - ಮುಡಿಪು - ದೇರಳಕಟ್ಟೆ - ತೊಕ್ಕೊಟ್ಟು ಮೂಲಕ ಸಂಚರಿಸುವುದು.
➢ ಬಿ.ಸಿ. ರೋಡ್ ಪೊಳಲಿ ದ್ವಾರ- ಬಿ.ಸಿ.ರೋಡ್ ಕಡೆಯಿಂದ ಮಂಗಳೂರು/ಉಡುಪಿ ಕಡೆಗೆ ಸಂಚರಿಸುವ ವಾಹನಗಳು ಪೊಳಲಿ ದ್ವಾರದ ಮೂಲಕ ಕಲ್ಪನೆ ಜಂಕ್ಷನ್ - ನೀರುಮಾರ್ಗ - ಬೈತುರ್ಲಿ - - ಕುಲಶೇಖರ - ನಂತೂರು ಮೂಲಕ ಸಂಚರಿಸುವುದು.
➢ ವಳಚ್ಚಿಲ್ ಜಂಕ್ಷನ್ -ಬಿ.ಸಿ.ರೋಡ್ / ತುಂಬೆ / ಫರಂಗಿಪೇಟೆ ಕಡೆಯಿಂದ ಮಂಗಳೂರು ನಗರದ ಕಡೆಗೆ ಸಂಚರಿಸುವ ಲಘು ವಾಹನಗಳು (ಕಾರು/ರಿಕ್ಷಾ/ಬೈಕ್) ವಳಚ್ಚಿಲ್ನಲ್ಲಿ ಬಲಕ್ಕೆ ತಿರುಗಿ ಮೇರ್ಲಪದವು - ನೀರುಮಾರ್ಗ - ಬೈತುರ್ಲಿ - ನಂತೂರು ಮೂಲಕ ಸಂಚರಿಸುವುದು.
➢ ಅಡ್ಯಾರ್ ಕಟ್ಟೆ- ಬಿ.ಸಿ.ರೋಡ್ / ತುಂಬೆ / ಫರಂಗಿಪೇಟೆ ಕಡೆಯಿಂದ ಮಂಗಳೂರು ನಗರದ ಕಡೆಗೆ ಸಂಚರಿಸುವ ಲಘು ವಾಹನಗಳು (ಕಾರು/ರಿಕ್ಷಾ/ಬೈಕ್) ಅಡ್ಯಾರ್ ಕಟ್ಟೆ ಬಳಿ ಎಡಕ್ಕೆ ತಿರುಗಿ ಹರೇಕಳ ಬ್ರಿಡ್ಜ್ - ಕೊಣಾಜೆ - ದೇರಳಕಟ್ಟೆ - ತೊಕ್ಕೊಟ್ಟು ಮೂಲಕ ಸಂಚರಿಸುವುದು.
➢ ಪಂಪ್ವೆಲ್ ಜಂಕ್ಷನ್- ಮಂಗಳೂರು ನಗರದ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ತೊಕ್ಕೊಟ್ಟು - ದೇರಳಕಟ್ಟೆ - ಮುಡಿಪು - ಬೊಳಿಯಾರ್ - ಮೆಲ್ಕಾರ್ ಮೂಲಕ ಸಂಚರಿಸುವುದು.
➢ ನಂತೂರು ವೃತ್ತ- ಮಂಗಳೂರು ನಗರ / ಸುರತ್ಕಲ್ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಬಿಕರ್ನಕಟ್ಟೆ - ಕುಲಶೇಖರ - ಬೈತುರ್ಲಿ ಜಂಕ್ಷನ್ - ನೀರುಮಾರ್ಗ – ಕಲ್ಪನೆ ಜಂಕ್ಷನ್- ಬಿ.ಸಿ ರೋಡ್ ಕೈಕಂಬದ ಪೊಳಲಿ ದ್ವಾರದ ಮೂಲಕ ಸಂಚರಿಸುವುದು.
➢ ಕೆ.ಪಿ.ಟಿ. ವೃತ್ತ- ಮಂಗಳೂರು ನಗರ / ಸುರತ್ಕಲ್ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಪದವಿನಂಗಡಿ - ಪಚ್ಚನಾಡಿ - ವಾಮಂಜೂರು - ಬೈತುರ್ಲಿ ಜಂಕ್ಷನ್ - ನೀರುಮಾರ್ಗ – ಕಲ್ಪನೆ ಮೂಲಕ ಅಥವಾ ಬೋಂದೆಲ್ - ಕಾವೂರು - ಬಜಪೆ - ಕೈಕಂಬ - ಮೂಡಬಿದ್ರೆ ಮೂಲಕ ಸಂಚರಿಸುವುದು.
➢ ಮುಲ್ಕಿ ವಿಜಯಸನ್ನಿಧಿ- ಉಡುಪಿ / ಮುಲ್ಕಿ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಕಿನ್ನಿಗೋಳಿ - ಮೂಡಬಿದ್ರೆ - ಸಿದ್ದಕಟ್ಟೆ - ಬಂಟ್ವಾಳ ಮೂಲಕ ಸಂಚರಿಸುವುದು.
➢ ಪಡುಬಿದ್ರೆ -ಉಡುಪಿ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಕಾರ್ಕಳ - ಮೂಡಬಿದ್ರೆ - ಸಿದ್ದಕಟ್ಟೆ - ಬಂಟ್ವಾಳ ಮೂಲಕ ಸಂಚರಿಸುವುದು ಎಂದು ಪೊಲೀಸ್ ಕಮಿಷನರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
In view of the large-scale protest scheduled at Kannur on April 18 against the Central Government’s Waqf Amendment Bill, the joint director of the district industrial centre has issued a traffic diversion order to manage the anticipated congestion along the national highway.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
21-12-25 11:04 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am